ಶ್ರೀ ಮಲ್ಲಿಕಾರ್ಜುನ ಸ್ವಾಮಿ ಅದ್ಧೂರಿ ರಥೋತ್ಸವ


Team Udayavani, Feb 5, 2020, 3:00 AM IST

sri-mallikarjuna

ತಿ.ನರಸೀಪುರ: ತಾಲೂಕಿನ ಮುಡುಕುತೊರೆಯಲ್ಲಿ ಮಂಗಳವಾರ ಶ್ರೀ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಬ್ರಹ್ಮರಥೋತ್ಸವ, ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ಸೋಮಶೈಲ ಕ್ಷೇತ್ರವೆಂಬ ಖ್ಯಾತಿ ಪಡೆದಿರುವ ಮುಡುಕುತೊರೆಯಲ್ಲಿ ಜಾತ್ರೋತ್ಸವದ ಸಂಭ್ರಮ ಕಳೆಗಟ್ಟಿತ್ತು. ಬಣ್ಣಬಣ್ಣದ ವಸ್ತ್ರ ಹಾಗೂ ಹೂವುಗಳಿಂದ ಅಲಂಕೃತಗೊಂಡಿದ್ದ ರಥದಲ್ಲಿ ವೀರಾಜಮಾನರಾಗಿದ್ದ ಶ್ರೀ ಭ್ರಮರಾಂಬಿಕೆ ಸಮೇತ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದರ್ಶನ ಪಡೆದು ಪುನೀತವಾದ ಭಕ್ತ ಸಾಗರ, ಹಣ್ಣು ಜವನ ಎಸೆದು ಧೂಪ ಹಾಕಿ ಕೈಮುಗಿದು ಪ್ರಾರ್ಥಿಸಿದರು.

ರಥೋತ್ಸವಕ್ಕೂ ಮೊದಲು ಇಪ್ಪತ್ತು ಮಂಟಪಗಳಲ್ಲಿಯೂ ಮಂಟಪೋತ್ಸವ ನಡೆದ ಬಳಿಕ ಪ್ರದಕ್ಷಿಣೆ ಹಾಕಿದ ಸ್ವಸ್ತಿಶ್ರೀ ಶಾಲಿವಾಹನ ಶಕ, ಕಾರಿ ನಾಮ ಸಂವತ್ಸರದ ಮಾಘಶುದ್ಧ ರೊಹೀಣಿ, ನಕ್ಷತ್ರದ ಶುಭಗಳಿಗೆಯಲ್ಲಿ ರಥದಲ್ಲಿ ಉತ್ಸವಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು. ಮಹಾಮಂಗಳಾರತಿ ನೇರವೇರಿಸಿದ ನಂತರ ಮಧ್ಯಾಹ್ನ 2 ಗಂಟೆಗೆ ವಿದ್ಯುಕ್ತವಾಗಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ಮೊದಲು ಶ್ರೀ ಗಣಪತಿ-ಸುಬ್ರಹ್ಮಣ್ಯ, ನಂತರ ಶ್ರೀ ಪಾರ್ವತಿ ಹಾಗೂ ಶ್ರೀ ಮನೋನ್ಮಣಿ ಅಮ್ಮನವರು ಚಿಕ್ಕರಥಗಳು ಸಾಗಿದವು. ಬೆನ್ನಲ್ಲಿ ಶ್ರೀ ಭ್ರಮರಾಂಬಿಕ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ರಥ ವೈಭವದಿಂದ ಸಾಗಿತು. ಪಶ್ಚಿಮಾಭಿಮುಖವಾಗಿ ಚಲಿಸಿ, ಉತ್ತರ ದಿಕ್ಕಿಗೆ ತಿರುಗಿ ಮತ್ತೆ ಪಡುವಣ ದಿಕ್ಕಿನತ್ತ ಸಾಗಿದ ರಥೋತ್ಸವ ಅಡಚಣೆ ಅಥವಾ ಅಡ್ಡಿ-ಆತಂಕಗಳಿಲ್ಲದೆ ಸ್ವಸ್ಥಾನಕ್ಕೆ ಮರಳಿತು. ಮೆರವಣಿಗೆಯುದ್ದಕ್ಕೂ ಮೂರು ರಥಗಳಿಗೂ ಹಣ್ಣು ಜವನಗಳ ವೃಷ್ಟಿಯಾಯಿತು.

ಬೆಳಗೆಯಿಂದ ಮುಡುಕುತೊರೆಯತ್ತ ಜನಸಾಗರವೇ ಹರಿದು ಬರಲಾರಂಭಿಸಿತು. ದೇವಾಲಯದಲ್ಲಿನ ಗರ್ಭಗುಡಿಯಲ್ಲಿಯೂ ಕೂಡ ವಿಶೇಷ ಪೂಜಾ ಕೈಂಕರ್ಯಗಳು ಸಾಂಗವಾಗಿ ನೇರವೇರಿದವು. ನದಿ ತೀರದಲ್ಲಿಯೂ ಮುತ್ತೇದೆಯರು ಪೂಜೆ ಕಾರ್ಯ ನಡೆಸಿದರು. ಮೂಲ ದೇವರ ದರ್ಶನಕ್ಕೆ ಭಕ್ತರು ಸಾಲುಗಟ್ಟಿ ನಿಂತಿದ್ದರು. ಮುಡುಕುತೊರೆ ಶ್ರೀ ಭ್ರಮರಾಂಬಿಕೆ ಅಮ್ಮನವರು ಹಾಗೂ ಶ್ರೀ ಮಲ್ಲಿಕಾರ್ಜುನಸ್ವಾಮಿ ಭಕ್ತ ಸಾಗರವೇ ಹರಿದಿತ್ತು.

ದಾಸೋಹ: ಮುಡುಕುತೊರೆ ಜಾತ್ರೋತ್ಸವ ದಾಸೋಹಕ್ಕೆ ಹೆಸರು ವಾಸಿ. ಅದರಂತೆ ಬ್ರಹ್ಮರಥೋತ್ಸವದ ಹಿನ್ನೆಲೆಯಲ್ಲಿ ಬೆಳಗೆಯಿಂದ ಮಧ್ಯಾಹ್ನದವರೆಗೂ ಎಲ್ಲೆಡೆ ಭರ್ಜರಿಯಾಗಿ ದಾಸೋಹ ಹಾಗೂ ಮಜ್ಜಿಗೆ ಪಾನಕ ವಿತರಣೆ ಜೋರಾಗಿ ನಡೆಯಿತು. ದಾಸೋಹ ಭವನ(ಪರ ನಡೆಯುವ ಮನೆ)ಗಳು ಸೇರಿದಂತೆ ಬಯಲು ಪ್ರದೇಶಗಳಲ್ಲೇಲ್ಲಾ ಪೆಂಡಾಲ್‌ ಹಾಕಿ ಬರುವ ಭಕ್ತರು ಹಾಗೂ ಬಂಧು ಬಳಗಕ್ಕೆ ದಾಸೋಹ ನೀಡುತ್ತಿದ್ದುದು ಕಂಡು ಬಂದಿತ್ತು. ಹರಕೆ ಹೊತ್ತಿದ್ದ ಭಕ್ತರು ಮಜ್ಜಿಗೆ ಪಾನಕ ವಿತರಿಸಿ, ಜಾತ್ರೆಯಲ್ಲಿ ಬಿಸಿಲಿನಿಂದ ದಣಿದಿದ್ದವರ ದಾಹ ನೀಗಿಸುವ ಕಾಯಕ ಮಾಡಿದರು.

ಆನಂದ ಧಿಕ್ಷೀತ್‌ ಸೇರಿದಂತೆ ಅರ್ಚಕ ಮಹೇಶ್‌ ಪ್ರಸಾದ್‌, ಜಗದೀಶ್‌ಮೂರ್ತಿ, ನಾಗೇಶ್‌ಮೂರ್ತಿ, ರಮೇಶ್‌, ವಿಶ್ವನಾಥ್‌ ಸೇರಿದಂತೆ ಹಲವರ ತಂಡ ಧಾರ್ಮಿಕ ವಿಧಿ ವಿಧಾನ ನೇರವೇರಿಸಿದರು. ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ, ದೇವಾಲಯಕ್ಕೆ ಭೆಟಿ ನೀಡಿ ಪೂಜೆ ಸಲ್ಲಿಸಿದರು. ಮಳವಳ್ಳಿ ಮಾಜಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ರಥೋತ್ಸವ ಆರಂಭಕ್ಕೂ ಮೊದಲು ವಿಶೇಷ ಪೂಜೆ ಸಲ್ಲಿಸಿದರು. ಜಿಪಂ ಸದಸ್ಯ ಮಂಜುನಾಥನ್‌, ಮಹಾಮಂಗಳಾರತಿ ಸ್ವೀಕರಿಸಿದರು. ನಂಜನಗೂಡು ಡಿವೈಎಸ್ಪಿ ಪ್ರಭಾಕರ್‌ ರಾವ್‌ ಶಿಂಧೆ, ತಾಪಂ ಸದಸ್ಯ ರತ್ನರಾಜ್‌ ಸೇರಿದಂತೆ ಸ್ಥಳೀಯ ಚುನಾುತ ಜನಪ್ರತಿನಿಧಿಗಳು ಹಾಗೂ ಮುಖಂಡರು ಭಾಗÊಹಿ‌ಸಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.