ಮಾ.10 ರ ಗುರುವಾರದಂದು ಶ್ರೀ ಮಸಣೀಕಮ್ಮ ಬ್ರಹ್ಮರಥೋತ್ಸವ


Team Udayavani, Mar 8, 2022, 6:47 PM IST

ಮಾ.10 ರ ಗುರುವಾರದಂದು ಶ್ರೀ ಮಸಣೀಕಮ್ಮ ಬ್ರಹ್ಮರಥೋತ್ಸವ

ಪಿರಿಯಾಪಟ್ಟಣ: ಪಿರಿಯಾಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಮಸಣೀಕಮ್ಮ ನವರ ಬ್ರಹ್ಮ ರಥೋತ್ಸವ ಮಾ.10 ರ ಗುರುವಾರದಂದು ಅದ್ದೂರಿಯಾಗಿ ನೆರವೇರಲಿದೆ.

ಸ್ಥಳೀಯವಾಗಿ ಹಾಗೂ ನೆರೆಯ ಕೇರಳ, ತಮಿಳುನಾಡು, ಆಂದ್ರಪ್ರದೇಶ ಹಾಗೂ ಮಹರಾಷ್ಟ್ರ ಸೇರಿದಂತೆ ವಿವಿಧ ಭಾಗಗಳಲ್ಲಿ ಭಕ್ತರನ್ನು ಹೊಂದಿರುವ ಈ ದೇವಿಯೂ ಸ್ಥಳೀಯರ ಗ್ರಾಮದೇವತೆಯಾಗಿದ್ದು,ಶ್ರೀ ಪಿರಿಯಾಪಟ್ಟಣದಮ್ಮ ಎಂದೇ ಪ್ರಸಿದ್ಧಿಯಾಗಿದೆ.

ಬ್ರಹ್ಮ ರಥೋತ್ಸವ:

ಶ್ರೀ ಅಮ್ಮನವರ ರಥೋತ್ಸವಕ್ಕಾಗಿ ಎಲ್ಲ ಸಿದ್ಧತೆ ಕೈಗೊಳ್ಳಲಾಗಿದ್ದು.   ಬೆಳಗ್ಗೆ 10.30 ರಿಂದ 12.15 ಗಂಟೆಯೊಳಗೆ ಸಲ್ಲುವ ವೃಷಭಲಗ್ನದಲ್ಲಿ ಬ್ರಹ್ಮರಥೋತ್ಸವ ಜರುಗಲಿದೆ. ಮಾ.11ರ ಶುಕ್ರವಾರರಂದು ಪಟ್ಟಣದ ಒಳಕೋಟೆ, ಕರಿಬಸಪ್ಪ ಬಡಾವಣೆ, ಪೇಟೆಬೀದಿ, ಸಣ್ಣಯ್ಯನಬೀದಿ, ಬಿ.ಎಂ.ರಸ್ತೆ, ದೇವೇಗೌಡನಕೊಪ್ಪಲು, ಉಪ್ಪಾರಬೀದಿಗಳಲ್ಲಿ ದೇವರ ಉತ್ಸವ ಮೂರ್ತಿಯನ್ನು ಮೆರವಣಿಗೆ ನಡೆಸಿ ಮಾ.12 ರ ಶನಿವಾರರಂದು ರಾತ್ರಿ 8 ಗಂಟೆಗೆ ಪಟ್ಟಣದ ಚಿಕ್ಕಕೆರೆಯಲ್ಲಿ ತೆಪ್ಪೋತ್ಸವ ಜರುಗಲಿದೆ.

ವಿದ್ಯುತ್ ದೀಪಲಂಕಾರಗಳಿಂದ ಕಂಗೊಳಿಸುತ್ತಿರುವ ಪಟ್ಟಣ:

ಶ್ರೀ ಮಸಣಿಕಮ್ಮ ಜಾತ್ರಾ ಮಹೋತ್ಸವದ ಅಂಗವಾಗಿ ಪಟ್ಟಣದ ಬಿ.ಎಂ.ರಸ್ತೆ, ಹಾಗೂ ಅಂಗಡಿ ಮುಗಂಟ್ಟುಗಳು ದೀಪಾಲಂಕಾರಗಳಿಂದ ಕಂಗೊಳಿಸುತ್ತಿದ್ದು, ಅತ್ಯುತ್ತಮವಾಗಿ ತಮ್ಮ  ಅಂಗಡಿ ಮುಗ್ಗಟ್ಟುಗಳಿಗೆ ದೀಪಾಲಂಕಾರ ಮಾಡಿದವರಿಗೆ ಪುರಸಭೆ ವತಿಯಿಂದ ವಿಶೇಷ ಬಹುಮಾನವನ್ನು ನೀಡುವುದಾಗಿ ಪುರಸಭಾ ಆಡಳಿತ ಮಂಡಳಿ ಘೋಷಿಸಿದೆ.

ಇತಿಹಾಸ:

ಈ ದೇವಾಲಯವು ಹೋಯ್ಸಳ ಶೈಲಿಯಲ್ಲಿ ನಿರ್ಮಿತವಾಗಿದೆ. 12ನೇ ಶತಮಾನದ ಆದಿ ಭಾಗದಲ್ಲಿ ನಿರ್ಮಾಣಗೊಂಡ ದೇವಾಲಯದಲ್ಲಿ ಕಂಠೀರವ ನರಸರರಾಜ ಓಡೆಯರ ಕಾಲದಲ್ಲಿ ದಾಳಿ ನಡೆದ ಸಂದರ್ಭ ಯುದ್ಧದ ಗೆಲುವಿನ ಸಂಕೇತವಾಗಿ ದೇವಾಲಯದ ಮೂಲ ಮೂರ್ತಿಯನ್ನು ಕೊಂಡ್ಯೋದನೆಂದು ಇತಿಹಾಸ ತಿಳಿಸುತ್ತದೆ.

ಪ್ರಸ್ತುತ ಈ ದೇವಾಲಯ ಮೂಲಮೂರ್ತಿಯನ್ನು ಮೈಸೂರಿನ ತ್ರಿನೇಶ್ವರ ದೇವಾಲಯದ ಹಿಂಭಾಗದಲ್ಲಿ ಪಿರಿಯಾಪಟ್ಟಣದ ಚಾಮುಂಡೇಶ್ವರಿ ಎಂದು ಬರೆದು ಇಡಲಾಗಿದೆ ಎಂದು ಇತಿಹಾಸ ತಿಳಿಸುತ್ತದೆ. 1644 ಯುದ್ಧದ ನಂತರ ಪಾಳಾಬಿದ್ದ ದೇವಾಲಯವನ್ನು ನಾರಸಿಂಗ ಪಟ್ಟಣ ನಿರ್ಮಾಣವಾಗಿ ಕೋಟೆ ನಿರ್ಮಿಸಿದಾಗ ಕೋಟೆ ಹೊರಗೆ ಶಕ್ತಿ ದೇವತೆಯನ್ನು ಪ್ರತಿಷ್ಠಾಪಿಸಲಾಯಿತು. ಅಂದಿನಿಂದ ಈ ದೇವಾಲಯವು ಮಸಣೀಕಮ್ಮ ದೇವರಾಗಿ ಪ್ರಸಿದ್ದಿ ಹೊಂದಿದ್ದು ಇದನ್ನು ಪಿರಿಯಾಪಟ್ಟಣದಮ್ಮ ಎಂದು ಕರೆಯುವುದುಂಟು.

ಜಿಲ್ಲೆಯಲ್ಲಿ ಅಧಿಕ ಆದಾಯ ಹೊಂದಿರುವ ಈ ದೇವಾಲಯಗಳಲ್ಲಿ ಮೂರನೆ ಸ್ಥಾನದಲ್ಲಿದ್ದು, ಪ್ರಸ್ತುತ ಈ ದೇವಾಲಯವು ಮುಜಾರಾಯಿ ಇಲಾಖೆಯ ಅಧೀನದಲ್ಲಿದೆ.

 

-ಪಿ.ಎನ್.ದೇವೇಗೌಡ, ಪಿರಿಯಾಪಟ್ಟಣ

ಟಾಪ್ ನ್ಯೂಸ್

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.