MP Yaduveer ಡೆಂಗ್ಯೂಗೆ ರಾಜ್ಯ ಸರಕಾರ ಹೈ ಅಲರ್ಟ್ ಘೋಷಿಸಬೇಕು

ಪಿಎಚ್.ಸಿ.ಗಳ ಬಲವರ್ಧನೆ, ಹುಣಸೂರು ಹೈಟೆಕ್ ಆಸ್ಪತ್ರೆ ಆರಂಭಕ್ಕೆ ಕ್ರಮ

Team Udayavani, Jul 9, 2024, 8:22 PM IST

MP Yaduveer ಡೆಂಗ್ಯೂಗೆ ರಾಜ್ಯ ಸರಕಾರ ಹೈ ಅಲರ್ಟ್ ಘೋಷಿಸಬೇಕು

ಹುಣಸೂರು: ಮೈಸೂರು ನಂತರದಲ್ಲಿ ಹುಣಸೂರು ತಾಲೂಕಿನಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಿರುವ, ಸಾವನ್ನಪ್ಪುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಡೆಂಗ್ಯೂ ರೋಗ ತಗುಲಿರುವವರ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕಿದೆ ಎಂದು ಸಂಸದ ಯದುವೀರ್ ಒಡೆಯರ್ ಹೇಳಿದರು.

ನಗರದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದ ಸಂಸದರು ರಕ್ತ ತಪಾಸಣೆ ಕೊಠಡಿಯ ಸಿಬ್ಬಂದಿಗಳಿಂದ ಕಳೆದ ವರ್ಷ, ಪ್ರಸಕ್ತ ಸಾಲು, ಜೂನ್ ತಿಂಗಳಲ್ಲಿ ಡೆಂಗ್ಯೂ, ಮತ್ತಿತರ ಜ್ವರದ ತಪಾಸಣೆ ಬಗ್ಗೆ ಮಾಹಿತಿ ಪಡೆದುಕೊಂಡರು.

ಜ್ವರದಿಂದ ಒಳರೋಗಿಗಳಾಗಿ ದಾಖಲಾಗಿರುವ ರೋಗಿಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಣೆ ನಡೆಸಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಡೆಂಗ್ಯೂ ಜ್ವರ ಸೋಂಕು ಶ್ರೀಸಾಮಾನ್ಯರನ್ನು ಕಾಡುತ್ತಿದ್ದು, ಈ ರೋಗದಿಂದ ಮುಕ್ತರಾಗಲು ಎಲ್ಲರೂ ಸ್ವಚ್ಚತೆ ಕಾಪಾಡಬೇಕು. ಆರೋಗ್ಯ ಇಲಾಖೆ ಈ ಸಂಬಂಧ ಜಾಗೃತಿ ಮೂಡಿಸುತ್ತಿದ್ದಾರೆ. ಸೋಂಕಿತರಿಗಾಗಿ ವಿಶೇಷ ಘಟಕ ತೆರೆಯುವ ಪರಿಸ್ಥಿತಿ ನಿರ್ಮಾಣವಾಗಿರುವುದು ಆತಂಕಕಾರಿಯಾಗಿದೆ.

ನೋ ಕಾಮೆಂಟ್, ಮಾಹಿತಿ ಪಡೆಯುವೆ:
ಹುಣಸೂರು ಆಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿ ತೆರೆದು ಡೆಂಗ್ಯೂ ಜ್ವರ ಸೋಂಕು ತಗುಲಿದವರಿಗೆ ಚಿಕಿತ್ಸೆಗೆ ಕ್ರಮವಹಿಸಿದ್ದರು, ಆಸ್ಪತ್ರೆಯ ಸ್ಥಿತಿಗತಿ ನೋಡಿ ವ್ಯಥೆಯಾಗಿದೆ. ಹೈಟೆಕ್ ಆಸ್ಪತ್ರೆ ನಿರ್ಮಾಣವಾಗಿದ್ದು. ಸ್ಥಳಾಂತರಗೊಳಿಸಬೇಕಾಗಿದೆ ಎಂದ ವೇಳೆ 9 ಕೋಟಿ ಬಿಡುಗಡೆಯಾಗಿದೆ ಎಂದು ಡಿಎಚ್‌ಒ ಮಾಹಿತಿ ನೀಡಿದ್ದಾರೆಂಬ ಬಗೆಗಿನ ಪ್ರಶ್ನೆಗೆ ಉತ್ತರಿಸಿದ ಸಂಸದರು ಸರ್ಕಾರದಿಂದ ಎಷ್ಟು ಅನುದಾನ ಬಿಡುಗಡೆಯಾಗಿದೆ. ಯಾವ ಕೆಲಸ ಬಾಕಿ ಇದೆ ಎಂಬುದರ ಬಗ್ಗೆ ಅಧಿಕೃತ ಮಾಹಿತಿ ಪಡೆದ ಬಳಿಕವಷ್ಟೆ ಉತ್ತರಿಸಲು ಸಾಧ್ಯ. ಈ ಬಗ್ಗೆ ನೋ ಕಾಮೆಂಟ್ ಈ ಬಗ್ಗೆ ನಾಳೆ ನಡೆಯುವ ಜಿಲ್ಲಾ ಮಟ್ಟದ ಕೆಡಿಪಿ ಸಭೆಯಲ್ಲಿ ಮಾಹಿತಿ ಪಡೆಯುತ್ತೇನೆಂದರು.

ಡೆಂಗ್ಯೂಗೆ ಹೈ ಅಲರ್ಟ್ ಘೋಷಿಸಲಿ:
ಡೆಂಗ್ಯೂ ಜ್ವರ ಚಿಕಿತ್ಸೆ ತುರ್ತು ಎಂದು ಪರಿಗಣಿಸಿ ಗ್ರಾಮೀಣ ಭಾಗದಲ್ಲಿ ಲಾರ್ವ ನಿಯಂತ್ರಿಸಲು ಇಲಾಖೆ ಕ್ರಮವಹಿಸಬೇಕು. ಡೆಂಗ್ಯೂ ಜ್ವರದಿಂದ ಬಳಲುತ್ತಿರುವ ಸಾರ್ವಜನಿಕರಿಗೆ ಚಿಕಿತ್ಸೆ ಗ್ರಾಮೀಣ ಭಾಗದಲ್ಲೇ ದೊರಕುವ ಕೆಲಸ ಆಗಬೇಕಿದೆ. ಇದಕ್ಕಾಗಿ ಆರೋಗ್ಯ ಇಲಾಖೆ ಸಮರೋಪಾದಿಯಲ್ಲಿ ತೊಡಗಬೇಕು ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬಲವರ್ಧನೆಗೂ ಆದ್ಯತೆ ನೀಡಿ ಗ್ರಾಮೀಣ ಜನರಿಗೆ ಹೆಚ್ಚಿನ ಆರೋಗ್ಯ ಸೌಕರ್ಯ ಸಿಗುವ ಕ್ರಮ ಆಗಬೇಕಿದೆ. ಈ ಸಂಬಂಧ ಕೇಂದ್ರ ಸರ್ಕಾರದಿಂದ ಯಾವ ರೀತಿ ಸಹಕಾರ ನೀಡಬಹುದು ಅದನ್ನು ಪರಿಶೀಲಿಸಿ ನೀಡಲು ಬದ್ಧ ಎಂದರು.

ಹೆಚ್ಚಿನ ವೈದ್ಯರ ನಿಯೋಜನೆಗೆ ಮನವಿ:
ಈ ವೇಳೆ ಡಾ.ಉಮೇಶ್ ಇಲ್ಲಿ ನಿತ್ಯ ಒಂದು ಸಾವಿರ ಹೊರರೋಗಿಗಳು ಬರುತ್ತಿದ್ದಾರೆ. ತಜ್ಞ ವೈದ್ಯರ ಸಂಖ್ಯೆ ಹೆಚ್ಚಿಸಬೇಕು. ಕಿಷ್ಕಿಂದೆ ಜಾಗದಲ್ಲೇ ಇರುವಷ್ಟೇ ವೈದ್ಯರು ಎಲ್ಲವನ್ನೂ ನಿಭಾಯಿಸುವಂತಾಗಿದೆ. ಇತ್ತೀಚೆಗೆ ತರಬೇತಿ ವೈದ್ಯರನ್ನು ನಿಯೋಜಿಸಲಾಗಿದ್ದರೂ, ತಜ್ಞ ವೈದ್ಯರ ಕೊರತೆಯಿಂದ ಸಮಸ್ಯೆಯಾಗಿದೆ. ಹೊಸ ಆಸ್ಪತ್ರೆ ಆರಂಭ, ಹೆಚ್ಚಿನ ವೈದ್ಯರ ನೇಮಕವಾದಲ್ಲಿ ಮಾತ್ರ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ನೆರವಾಗಲಿದೆ. ಈ ಬಗ್ಗೆ ಸರಕಾರದ ಗಮನಕ್ಕೆ ತರಬೇಕೆಂದು ಮನವಿ ಮಾಡಿದರು.

ಈ ವೇಳೆ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಮಹದೇವಸ್ವಾಮಿ, ಡಾ.ಉಮೇಶ್, ಡಾ.ವೆಂಕಟರಮಣ, ಬಿಜೆಪಿ ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಮಹದೇವಸ್ವಾಮಿ, ನಗರಸಭೆ ಸದಸ್ಯರಾದ ಗಣೇಶ್‌ಕುಮಾರಸ್ವಾಮಿ, ವಿವೇಕಾನಂದ, ಬಿಜೆಪಿ ನಗರ ಘಟಕದ ಅಧ್ಯಕ್ಷ ನಾರಾಯಣ್, ತಾಲೂಕು ಅಧ್ಯಕ್ಷ ಕಾಂತರಾಜ್, ಮುಖಂಡರಾದ ಹನಗೋಡು ಮಂಜುನಾಥ್, ಮಹದೇವ್, ಸುಜಿತ್, ಮಹದೇವ್, ರವಿಶಂಕರ್ ಮತ್ತಿತರರಿದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur-1

Hunsur: ತಂಬಾಕು ಬೆಳೆಗಾರರ ರಕ್ಷಣೆಗೆ ಬದ್ದ: ಸಂಸದ ಯದುವೀರ್ ಒಡೆಯರ್

ಮುಡಾ ಅಧ್ಯಕ್ಷ ಕೆ.ಮರಿಗೌಡ ತಲೆದಂಡ?

MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.