![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jun 26, 2019, 2:59 AM IST
ಎಚ್.ಡಿ.ಕೋಟೆ: ಮನೆಯ ಮುಂದಿನ ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಇಬ್ಬರು ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಪಟ್ಟಣದ ಶಿವಾಜಿ ರಸ್ತೆಯ ಮುಸ್ಲಿಂ ಬ್ಲಾಕ್ ಬಡಾವಣೆಯಲ್ಲಿ ಸಂಭವಿಸಿದೆ.
ಜೋಣಿಗೇರಿ ಬಡಾವಣೆಯ ಯಶ್ವಂತ್ (2) ಹಾಗೂ ರಜೈನ್ಖಾನ್ (3) ಬೀದಿನಾಯಿಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಮಕ್ಕಳಿಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಕರೆದ್ಯೊಯಲಾಯಿತು.
ಬೀದಿ ನಾಯಿಗಳ ದಾಳಿಯಿಂದ ಮಕ್ಕಳ ಕಣ್ಣು, ಮೂಗು, ಕಿವಿ, ಗಲ್ಲದ ಭಾಗದ ಮೇಲೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿವೆ. ಈ ಘಟನೆಯಿಂದ ಪಟ್ಟಣದ ಸಾರ್ವಜನಿಕರು ಭಯ ಭೀತರಾಗಿದ್ದು, ಬೀದಿ ನಾಯಿಗಳ ಹಾವಳಿ ತಡೆಗೆ ಯಾವುದೇ ಕ್ರಮ ಕೈಗೊಳ್ಳದ ಪುರಸಭೆ ಅಧಿಕಾರಿಗಳ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗೋಮಾಂಸದಂಗಡಿ ಮುಚ್ಚಿಸಿ: ಪಟ್ಟಣದ ಶಿವಾಜಿ ರಸ್ತೆಯ ಜೋಣಿಗೇರಿಯಲ್ಲಿ ಪ್ರತಿನಿತ್ಯ ಹಾಡು ಹಗಲೇ ಗೋಮಾಂಸ ಮಾರಾಟಗಾರರು ರಾಜರೋಷವಾಗಿ ಮಾಂಸ ಮಾರಾಟ ಮಾಡುತ್ತಿರುವುದರಿಂದ ನಾಯಿಗಳ ಸಂಖ್ಯೆ ಹೆಚ್ಚಾಗಿದ್ದು, ಮಾಂಸದ ರುಚಿ ನೋಡಿರುವ ಬೀದಿ ನಾಯಿಗಳು ಈಗ ಮಕ್ಕಳ ಮೇಲೆ ದಾಳಿ ಮಾಡಿ ಗಾಯಗೊಳಿಸಿವೆ.
ಇಲ್ಲಿ ಆಕ್ರಮವಾಗಿ ತಲೆ ಎತ್ತಿರುವ ಗೋಮಾಂಸ ಮಾರಾಟವನ್ನು ತಡೆಗಟ್ಟುವಂತೆ ಪುರಸಭೆ ಅಧಿಕಾರಿಗಳಿಗೆ, ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮಕ್ಕೆ ಮುಂದಾಗದೇ ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ ಎಂದು ಬಡಾವಣೆ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಆಕ್ರಮ ಗೋಮಾಂಸ ಮಾರಾಟ ಅಂಗಡಿಗಳನ್ನು ಮುಚ್ಚಿಸಿ, ಶೀಘ್ರ ಬೀದಿ ನಾಯಿಗಳನ್ನು ಸೆರೆಹಿಡಿಸಿ ಬಡಾವಣೆ ಜನರು ನೆಮ್ಮದಿಯಿಂದ ಬದುಕಲು ಅವಕಾಶ ಮಾಡಿಕೊಡಿ ಎಂದು ಆಗ್ರಹಿಸಿದ್ದಾರೆ.
ಇಂದು ಬೀದಿ ನಾಯಿ ಸೆರೆ ಹಿಡಿಯುವ ತಂಡ ನಗರಕ್ಕೆ: ಇಬ್ಬರು ಮಕ್ಕಳ ಮೇಲೆ ಹಾಗೂ ಬೀದಿ ನಾಯಿಗಳ ಮೇಲೆ ಹುಚ್ಚು ನಾಯಿಯೊಂದು ದಾಳಿ ಮಾಡಿದೆ. ಬೀದಿ ನಾಯಿ ಹಿಡಿಯುವ ತಂಡ ನಾಳೆ (ಬುಧವಾರ ) ಪಟ್ಟಣಕ್ಕೆ ಬರಲಿದ್ದು, ಶೀಘ್ರ ಹುಚ್ಚು ನಾಯಿಗಳನ್ನು ಸೆರೆಹಿಡಿಸಿ ನಾಶ ಪಡಿಸಲಾಗುವುದು. ಗಾಯಗೊಂಡಿರುವ ಮಕ್ಕಳ ಚಿಕಿತ್ಸೆಗಾಗಿ ಪುರಸಭೆಯಿಂದ 10 ಸಾವಿರ ರೂ ಪರಿಹಾರ ನೀಡಲಾಗುವುದು ಎಂದು ಎಚ್.ಡಿ.ಕೋಟೆ ಪುರಸಭೆ ಮುಖ್ಯಾಧಿಕಾರಿ ಡಿ.ಎನ್.ವಿಜಯಕುಮಾರ್ ತಿಳಿಸಿದ್ದಾರೆ.
ಪಟ್ಟಣದ ಶಿವಾಜಿ ರಸ್ತೆಯ ಜೋಣಿಗೇರಿಯಲ್ಲಿ ಆಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದಾರೆ. ಈ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇನೆ.
-ವಿ.ಎಸ್.ಅಶೋಕ್, ಸಬ್ಇನ್ಸ್ಪೆಕ್ಟರ್
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.