ಬಾಕಿ ಹಣ ಪಾವತಿಸಿ ಸಹಕಾರ ಸಂಘದ ಏಳ್ಗೆಗೆ ಶ್ರಮಿಸಿ


Team Udayavani, Sep 28, 2017, 1:00 PM IST

mys55.jpg

ತಿ.ನರಸೀಪುರ: ಸುಸ್ತಿದಾರರಾಗಿರುವ ಷೇರುದಾರ ರೈತರು ಸಕಾಲದಲ್ಲಿ ಸಾಲದ ಬಾಕಿ ಹಣವನ್ನು ಮರುಪಾವತಿ ಮಾಡುವ ಮೂಲಕ ಮುಂದಿನ ವರ್ಷದೊಳಗೆ ಬಿ ಗ್ರೇಡ್‌ನ‌ಲ್ಲಿರುವ ಕಸಬಾ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ಎ ಗ್ರೇಡ್‌ ಮಟ್ಟಕ್ಕೆ ಬರಲು ಸಹಕಾರ ನೀಡಬೇಕು ಎಂದು ಅಧ್ಯಕ್ಷ ಮಲ್ಲಣ್ಣ ಹೇಳಿದರು.

ಪಟ್ಟಣದ ಭಗವಾನ್‌ ಚಿತ್ರಮಂದಿರದ ಬಳಿಯಿರುವ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ನಡೆದ 2016-17ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು. ಕಳೆದ ಸಾಲಿನಲ್ಲಿ 326 ರೈತರಿಗೆ ಸಾಲ ಸೌಲಭ್ಯವನ್ನು ವಿತರಿಸಲಾಗಿತ್ತು. ಅದರಲ್ಲಿ 1,38.98,000 ರೂಗಳ ಹಣ ರಾಜ್ಯ ಸರ್ಕಾರದ ಸಾಲ ಮನ್ನಾ ಆಗಿದೆ. 31 ಲಕ್ಷ ಸುಸ್ತಿ ಹಣ ಬಾಕಿಯಿದ್ದು, ಸಾಲ ಬಾಕಿ ಮರುಪಾವತಿಯಾದಲ್ಲಿ ಹೊಸ ಸಾಲ ಸೌಲಭ್ಯ ನೀಡಲಾಗುವುದು ಎಂದರು.

ಮುಂದಿನ ಸಾಲಿನಲ್ಲಿ 53 ಲಕ್ಷ ರೂಗಳ ಸಾಲವನ್ನು ವಿತರಣೆ ಮಾಡಲು ಉದ್ದೇಶಿಸಲಾಗಿದೆ. ಹಿಂದಿನ ಸಿಇಒ ಆಗಿದ್ದ ತಿರುಮಕೂಡಲು ಜಯರಾಂ ಅವರು ಸುಮಾರು 22 ಲಕ್ಷ ರೂಗಳ ಸಂಘದ ಹಣವನ್ನು ದುರ್ಬಳಕೆ ಮಾಡಿಕೊಂಡ ಪ್ರಕರಣದಿಂದ ಸ್ವಲ್ಪಮಟ್ಟಿಗೆ ಸಂಘಕ್ಕೆ ಆರ್ಥಿಕ ಹೊಡೆತವೂ ಬಿದ್ದಿತು. ದುರ್ಬಳಕೆಯಾದ ಹಣವನ್ನು ವಸೂಲಿ ಮಾಡಲು ಅವರ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಸಿದ್ದರಿಂದ ಜಾಮೀನು ಪಡೆದು ಹೊರ ಬಂದಿದ್ದು, ಪ್ರಕರಣ ನ್ಯಾಯಾಲಯದಲ್ಲಿದೆ ಎಂದು ತಿಳಿಸಿದರು.

ಸಂಘದ ಸಿಇಒ ಟಿ.ಎನ್‌.ಕಿರಣ್‌ ಮಾತನಾಡಿ, 2016-17ನೇ ಸಾಲಿನಲ್ಲಿ 1,49,155 ರೂಗಳ ನಿವ್ವಳ ಲಾಭ ಬಂದಿದೆ. ಮುಂದಿನ 2017-18ನೇ ಸಾಲಿಗೆ 11 ಲಕ್ಷ ರೂಗಳ ಅಂದಾಜು ಬಜೆಟ್‌ ರೂಪಿಸಲಾಗಿದ್ದು, ಬೆಳೆಸಾಲ ಬಡ್ಡಿ 7 ಲಕ್ಷ, ಮಹಿಳಾ ಸಂಘಗಳಿಂದ 2.90 ಲಕ್ಷ ಹಾಗೂ ಯಶಸ್ವಿನಿ ವಿಮಾ ಯೋಜನೆಗೆ 1 ಲಕ್ಷ ಹಾಗೂ ಷೇರುದಾರರಿಂದ 55,000 ರೂ ಹಣವನ್ನು ಹಂಚಿಕೆ ಮಾಡಲಾಗಿದೆ. ಮುಂದಿನ ಸೋಮವಾರದಿಂದ ನೂತನ 68 ಮಂದಿ ಷೇರುದಾರ ಸದಸ್ಯರು ಸಾಲ ಸೌಲಭ್ಯ ಪಡೆಯಬಹುದು ಎಂದು ತಿಳಿಸಿದರು.

ತಾಪಂ ಸದಸ್ಯ ಎಂ.ರಮೇಶ, ಎಂಡಿಸಿಸಿ ಬ್ಯಾಂಕ್‌ ವ್ಯವಸ್ಥಾಪಕ ಎಂ.ಮಹದೇವಸ್ವಾಮಿ, ಮೇಲ್ವಿಚಾರಕ ರಾಜಪ್ಪ, ಸಂಘದ ಉಪಾಧ್ಯಕ್ಷ ತಿರುಮಕೂಡಲು ವೆಂಕಟೇಶ್‌, ನಿರ್ದೇಶಕರಾದ ಅಂಗಡಿ ಎನ್‌.ಶೇಖರ್‌, ಟಿ.ಸಿ.ಫ‌ಣೀಶ್‌ಕುಮಾರ್‌, ಕೆ.ನಂಜುಂಡಸ್ವಾಮಿ, ಸಿದ್ದೇಗೌಡ, ದೊಡ್ಡಬಸವಯ್ಯ, ಮಹಾಲಿಂಗಪ್ಪ, ನಾಗಮ್ಮ, ಎಂ.ನಾಗರತ್ನ, ಖಾಸಗಿ ಬಸ್‌ ಏಜೆಂಟರ ಸಂಘದ ಅಧ್ಯಕ್ಷ ಪಿ.ಪುಟ್ಟರಾಜು, ಮುಖಂಡರಾದ ಪುಳ್ಳಾರಿಗೌಡ, ದೀಪು, ಸೋಮಣ್ಣನಾಯಕ, ಸಿ.ಮಹದೇವ, ದಿಲೀಪ್‌, ಶಾಂತರಾಜು, ದೀಪು, ಲಕ್ಷ್ಮಣ, ಎಂ.ಆರ್‌.ಪ್ರಭಾಮಣಿ, ಸೋಮಣ್ಣ ಇದ್ದರು.

ಟಾಪ್ ನ್ಯೂಸ್

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

Hatti: ಟ್ಯಾಂಕ್ ನೀರಿಗೆ ವಿಷ, ಬೆಚ್ಚಿಬಿದ್ದ ಗ್ರಾಮಸ್ಥರು

6

Basroor- ಕುಂದಾಪುರ ಹೆದ್ದಾರಿ ಬದಿ ಹುಲ್ಲು ಕಟಾವು

11-Hagaribommanahalli

Hagaribommanahalli: ಆಕಳು ಮೇಯಿಸಲು ಹೋದ ಇಬ್ಬರು ಸಿಡಿಲಿಗೆ ಬಲಿ

5

Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.