ಶಾಲೆ ಬಿಡಿಸಿ ಮಕ್ಕಳೊಂದಿಗೆ ಗುಳೆ ಬಂದ ಕೂಲಿಕಾರರು!


Team Udayavani, Jul 18, 2019, 3:00 AM IST

shale

ಹುಣಸೂರು: ಸರ್ಕಾರ 14 ವರ್ಷದ ವರೆಗಿನ ಮಕ್ಕಳಿಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣವನ್ನು ಕಡ್ಡಾಯಗೊಳಿಸಿ, ಅಗತ್ಯ ಸವಲತ್ತುಗಳನ್ನು ಉಚಿತವಾಗಿ ನೀಡುತ್ತಿದೆ. ಆದರೆ, ಬಡ ಕುಟುಂಬಗಳು ಜೀವನದ ಬಂಡಿ ಸಾಗಿಸಲು ತಮ್ಮ ಮಕ್ಕಳೊಂದಿಗೆ ದೂರದ ನಗರ, ಪಟ್ಟಣಗಳಿಗೆ ವಲಸೆ ಬರುತ್ತಿರುವುದರಿಂದ‌ ಆ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಈ ರೀತಿ ತುತ್ತು ಕೂಳಿಗಾಗಿ ಕೂಲಿ ಅರಸಿ ಬಂದಿರುವ ಕುಟುಂಬಗಳ ಸುಮಾರು 29 ಮಕ್ಕಳು ಶಾಲೆಯಿಂದ ಹೊರಗುಳಿದಿರುವುದು ಬೆಳಕಿಗೆ ಬಂದಿದೆ.

ಮನೆ ಕಾಮಗಾರಿ: ನಗರದ ಸರಸ್ವತಿಪುರಂ ಹಾಗೂ ಪೌರಕಾರ್ಮಿಕರ ಕಾಲೋನಿಯಲ್ಲಿ ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ನಿರ್ಮಿಸಲಾಗುತ್ತಿರುವ 400 ಮನೆಗಳ ಕಾಮಗಾರಿಗಾಗಿ 50ಕ್ಕೂ ಹೆಚ್ಚು ಕುಟುಂಬಗಳನ್ನು ಕರೆತರಲಾಗಿದೆ. ತಂದೆ-ತಾಯಿಯರೊಂದಿಗೆ 6-14 ವರ್ಷದ 29 ಮಕ್ಕಳು ಕೂಡ ಆಗಮಿಸಿದ್ದಾರೆ.

ಈ ಮಕ್ಕಳು ಶಾಲೆಯಿಂದ ಹೊರಗುಳಿದು, ಆಟವಾಡಿಕೊಂಡು ಪೋಷಕರೊಂದಿಗಿದ್ದಾರೆ. ಇವರ ಗುತ್ತಿಗೆ ಅವಧಿಯೇ ಮುಂದಿನ ಎರಡು ವರ್ಷ ಇರುವುದರಿಂದ ಅಲ್ಲಿಯವರೆಗೂ ಈ ಮಕ್ಕಳು ಶಾಲೆ ಕಡೆ ಮುಖ ಮಾಡದಂತಾಗಿದೆ. ರಾಯಚೂರು, ಕೊಪ್ಪಳ ಜಿಲ್ಲೆಗಳಿಂದ ಹುಣಸೂರಿಗೆ ತಮ್ಮ ಮಕ್ಕಳೊಂದಿಗೆ ಆಗಮಿಸಿರುವ ಕೂಲಿ ಕಾರ್ಮಿಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ತಾವೇ ಎರವಾಗಿದ್ದಾರೆ.

ವಲಸೆ: ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಿಂದ ಆಗಮಿಸಿರುವ ಕೂಲಿಕಾರರ ಮಕ್ಕಳು ಆಯಾ ಗ್ರಾಮಗಳಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇದೀಗ ಈ ವಿದ್ಯಾರ್ಥಿಗಳು ಶಾಲೆಯಿಂದಲೇ ದೂರವಾಗಿದ್ದು, ಬಾಲ್ಯದಲ್ಲಿ ಕಡ್ಡಾಯ ಶಿಕ್ಷಣ ಪಡೆಯಬೇಕಾದ ಈ ಮಕ್ಕಳು ತಮ್ಮ ತಂದೆ-ತಾಯಿಯರೊಂದಿಗೆ ಆಗಮಿಸಿ, ಆಟದತ್ತ ಗಮನ ಹರಿಸಿದ್ದು, ಶಿಕ್ಷಣ ಇವರಿಗೆ ಮರಿಚಿಕೆಯಾಗಿದೆ.

1-7ನೇ ತರಗತಿ ಮಕ್ಕಳು: ರಾಯಚೂರು-ಕೊಪ್ಪಳ ಜಿಲ್ಲೆಯ ಮಾನ್ವಿ, ಸಿರಿವಾರ, ಲಿಂಗಸುರು, ದೇವದುರ್ಗ, ರಾಯಚೂರು, ಮತ್ತಿತರೆಡೆಗಳಿಂದ 6 ರಿಂದ 14 ವರ್ಷದೊಳಗಿನ 29 ಮಕ್ಕಳು ನಗರಕ್ಕೆ ಆಗಮಿಸಿದ್ದಾರೆ. ತಿಮ್ಮನಗೌಡ(10), ಅಕ್ಷತಾ (8), ಮಲ್ಲಿಕಾರ್ಜುನ (7), ಚಿದಾನಂದ (7), ಅಂಬಿಕಾ (10), ಜ್ಯೋತಿ (6), ಮಂಜುನಾಥ (7) ಬಸಮ್ಮ (9), ಈರಮ್ಮ (6), ಸುಮಂಗಲ(13), ಚನ್ನಮ್ಮ (12), ಚಂದ್ರಕಲಾ (7), ಶ್ರೀದೇವಿ (12), ಮಲ್ಲಿಕಾರ್ಜುನ(6), ಹನುಮೇಶ (8), ರೇಣುಕಾ (12), ಅನಿತಾ (9), ಅಕ್ಷತಾ (7), ಪ್ರಜ್ವಲ್‌(11), ಮಲ್ಲಿಕಾರ್ಜುನ (6),ಅನಿತಾ (8), ನರಸಮ್ಮ (10), ಮಾಯಾ (12), ಬಸಮ್ಮ (6), ಬಸವ (11), ಶಿವ (9), ಮಲ್ಲಿಕಾ (7), ನಾಗರತ್ನ (9), ಹುಲಿಗಮ್ಮ (6) ಶಿಕ್ಷಣದಿಂದ ವಂಚಿತರಾಗಿರುವುದು ಪತ್ತೆಯಾಗಿದೆ.

ಸರ್ವೆ ನಡೆಸಿದ ತಂಡ: ಹುಣಸೂರು ತಾಲೂಕಿನ ಕ್ಷೇತ್ರ ಸಮನ್ವಯಾಧಿಕಾರಿ ಟಿ.ಸಂತೋಷ್‌ಕುಮಾರ್‌, ಸಿಆರ್‌ಪಿ ಸತೀಶ್‌ ನೇತೃತ್ವದ ತಂಡ ಸರಸ್ವತಿಪುರಂ ಹಾಗೂ ಇತರೆಡೆಗಳಲ್ಲಿ ಸರ್ವೆ ನಡೆಸಿ ಶಾಲೆಯಿಂದ ಹೊರಗುಳಿದ 29 ಮಕ್ಕಳನ್ನು ಪತ್ತೆ ಹಚ್ಚಿದೆ. ಈ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅದೇ ಬಡಾವಣೆಯಲ್ಲಿ ಟೆಂಟ್‌ ಶಾಲೆ ಆರಂಭಿಸುವ ಚಿಂತನೆ ಇದೆ.

ಶಾಲೆಯಿಂದ ಹೊರಗುಳಿದ ಮಕ್ಕಳ ಸರ್ವೆ ನಡೆಸಿದ ವೇಳೆ ವಿವಿಧ ಹಂತದ 29 ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದು, ಇವರಿಗಾಗಿ ಪ್ರತ್ಯೇಕ ಟೆಂಟ್‌ ಶಾಲೆ ತೆರೆದು, ಸರಕಾರದಿಂದ ದೊರೆಯುವ ಬಿಸಿಯೂಟ, ಸಮವಸ್ತ್ರ, ಪಠ್ಯಪುಸ್ತಕ ಮತ್ತಿತರ ಸೌಲಭ್ಯ ಕಲ್ಪಿಸಲು ಹಾಗೂ ಇವರಿಗೆ ಬೋಧನೆ ಮಾಡಲು ಶಿಕ್ಷಕರನ್ನು ನಿಯೋಜಿಸಲು ಉದ್ದೇಶಿಸಲಾಗಿದೆ.
-ಟಿ.ಸಂತೋಷ್‌ ಕುಮಾರ್‌, ಕ್ಷೇತ್ರ ಸಮನ್ವಯಾಧಿಕಾರಿ

ಈ ಮಕ್ಕಳ ವೈಯಕ್ತಿಕ ಕಡತವನ್ನು ಪರಿಶೀಲಿಸಿ ವಿವಿಧ ವಯೋಮಾನದ ಮಕ್ಕಳನ್ನು ವಿವಿಧ ತರಗತಿಗಳಿಗೆ ದಾಖಲಿಸಲು ಹಾಗೂ ಇವರಿಗೆ ಎಲ್ಲ ಸೌಲಭ್ಯ ಕಲ್ಪಿಸಿ, ಪಾಠ ಕಲಿಯುವ ಮುಕ್ತ ವಾತಾವರಣ ನಿರ್ಮಿಸಿಕೊಡಲು ಹಿರಿಯ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ.
-ನಾಗರಾಜ್‌, ಕ್ಷೇತ್ರ ಶಿಕ್ಷಣಾಧಿಕಾರಿ

* ಸಂಪತ್‌ ಕುಮಾರ್‌

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.