ಸಮಸ್ಯೆ ಇದ್ದಲಿ ಚರ್ಚೆ ನಡೆಸಿ ಬಗೆಹರಿಸಿಕೊಳ್ಳಿ 


Team Udayavani, Jun 30, 2017, 12:46 PM IST

mys2.jpg

ನಂಜನಗೂಡು: ಪರಸ್ಪರ ಘರ್ಷಣೆಗೆ ಒಳಗಾಗಿ ಒಬ್ಬರ ವಿರುದ್ಧ ಮತ್ತೂಬ್ಬರ ದೂರಿಗೆ ಕಾರಣವಾದ ತಾಲೂಕಿನ ನವಿಲೂರಿಗೆ ಸಂಸದ ಆರ್‌.ಧ್ರುವನಾರಾಯಣ ಹಾಗೂ ಶಾಸಕ ಕಳಲೆ ಕೇಶವ ಮೂರ್ತಿ ಭೇಟಿ ನೀಡಿ  ಸಭೆ ನಡೆಸಿ ಶಾಂತಿ ಸೌಹಾರ್ಧತೆ ಕುರಿತಂತೆ ಗ್ರಾಮಸ್ಥರಿಗೆ ತಿಳಿವಳಿಕೆ ಹೇಳಿದರು.

ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ನಡೆದ ಸಭೆಯಲ್ಲಿ ಸಂಸದ ಆರ್‌.ಧ್ರುವನಾರಾಯಣ ಮಾತನಾಡಿ, ವೈಯಕ್ತಿಕವಾಗಿ ಮಾಡಿರುವ ತಪ್ಪಿನ ಕಿಡಿ ಗ್ರಾಮವನ್ನು ವ್ಯಾಪಿಸುವುದು ಸರಿಯಲ್ಲ. ಇಂಥಹ ಘಟನೆಯಿಂದಾಗಿ ಇಬ್ಬರ ಜಗಳಕ್ಕೆ ಗ್ರಾಮದ ಗೌರವವೇ ಮಣ್ಣು ಪಾಲಾಗುವುದು ಆದ್ದರಿಂದ ಏನಾದರೂ ಸಮಸ್ಯೆ ಇದ್ದಲಿ ಚರ್ಚೆ ನಡೆಸಿ ಬಗೆಹರಿಸಿಕೊಳ್ಳಿ ಎಂದರು.

ತನಿಖೆ ಪ್ರಾರಂಭ: ಕಾನೂನು ಮೀರಿ ನಡೆಯುವವರ ವಿರುದ್ಧ ತನಿಖೆ ಮಾಡಿ ಕ್ರಮ ಕೈಗೊಳ್ಳಲು ಪೊಲೀಸರಿದ್ದಾರೆ ನೀವೆ ಕಾನೂನನ್ನು ಕೈ ತೆಗೆದುಕೊಳ್ಳಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಘಟನೆಯ ಕುರಿತಂತೆ ತನಿಖೆ ಪ್ರಾರಂಭವಾಗಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ, ಅಲ್ಲಿಯವರಿಗೆ ಗ್ರಾಮಸ್ಥರು ಶಾಂತಿ ಭಂಗವಾಗದಂತೆ ಎಚ್ಚರ ವಹಿಸಿ ಎಂದರು.

ಧೃತಿಗೆಡುವ ಅಗತ್ಯವಿಲ್ಲ: ಶಾಸಕ ಕಳಲೆ ಕೇಶವಮೂರ್ತಿ ಮಾತನಾಡಿ, ಘಟನೆ ನಡೆದ ಮರುದಿನವೇ ನಾನು ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸಿದೆ. ಜಾತಿಯ ವಿಷಬೀಜ ಬಿತ್ತುವ ಕೆಲಸವಾಗಿಲ್ಲ. ಆಕಸ್ಮಿಕವಾಗಿ ನಡೆದ ವಿಷಯವೇ ಗಲಾಟೆಯ ರೂಪ ತಾಳಿದೆ ಘಟನೆ ಕುರಿತು ಪೊಲೀಸ್‌ ಠಾಣೆಯಲ್ಲಿ ಎರಡು ಕೋಮಿನಿಂದ ಪ್ರಕರಣ ದಾಖಲಾಗಿದೆ. ಹಾಗಾಗಿ ಗ್ರಾಮಸ್ಥರು ಧೃತಿಗೆಡುವ ಅಗತ್ಯವಿಲ್ಲ. ಹೊಂದಾಣಿಕೆ, ಸಹಬಾಳ್ವೆಯಿಂದ ಜೀವನ ನಡೆಸುವಂತೆ ಮನವಿ ಮಾಡಿದರು.

ನವಿಲೂರು ಮಠದ ಚನ್ನಬಸವಸ್ವಾಮೀಜಿ ಮಾತನಾಡಿ, ಘಟನೆ ನಂತರ ಎರಡು ಕುಟುಂಬದವರೊಂದಿಗೆ ಮಾತುಕತೆ ನಡೆಸಿದ್ದೇನೆ. ಭಿನ್ನಾಭಿಪ್ರಾಯ ಮರೆತು ಸಹಜ ಜೀವನ ನಡೆಸುವುದಾಗಿ ವರು ಭರವಸೆ ನೀಡಿದ್ದಾರೆ. ಘಟನೆ ಬಗ್ಗೆ ಹೆಚ್ಚು ವಿಷಯ ಪ್ರಸ್ತಾಪಿಸಿದಷ್ಟೂ ದೊಡ್ಡದಾಗಿ ಬೆಳೆಯುತ್ತದೆ. ಹಾಗಾಗಿ ಚಿಗುರಿನಲ್ಲೇ ಚಿವುಟಿ ಹಾಕುವ ಪ್ರಯತ್ನ ಮಾಡಬೇಕು ಎಂದರು.

ತಾಪಂ ಅಧ್ಯಕ್ಷ ಬಿ.ಎಸ್‌.ಮಹದೇವಪ್ಪ, ಟಿಎಪಿಸಿಎಂಎಸ್‌ ಅಧ್ಯಕ್ಷ ಕುರಹಟ್ಟಿ ಮಹೇಶ್‌, ಅಖೀಲ ಭಾರತ ವೀರಶೈವ ಮಹಸಭಾ ತಾಲೂಕು ಅಧ್ಯಕ್ಷ ಎಚ್‌.ಕೆ.ಚನ್ನಪ್ಪ, ತಹಶೀಲ್ದಾರ್‌ ಎಂ.ದಯಾನಂದ್‌, ತಾಪಂ ಇಒ ಬಿ.ರೇವಣ್ಣ, ಸದಸ್ಯ ಸಿದ್ದರಾಜೇಗೌಡ, ತಾಪಂ ಮಾಜಿ ಅಧ್ಯಕ್ಷ ಬಿ.ಎಂ.ನಾಗೇಶ್‌ರಾಜ್‌, ಸರ್ಕಲ್‌ ಇನ್ಸ್‌ಪೆಕ್ಟರ್‌ ಜಿ.ಆರ್‌.ಶಿವಮೂರ್ತಿ, ಪಿಎಸ್‌ಐ ಟಿ.ಎನ್‌.ಪುನೀತ್‌, ಗ್ರಾಪಂ ಅಧ್ಯಕ್ಷ ನಂಜುಂಡಸ್ವಾಮಿ, ವರ್ತಕರ ಸಂಘದ ಅಧ್ಯಕ್ಷ ಗೋವಿಂದರಾಜು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

Agra: A woman policewoman dressed as a tourist and roamed around late at night

Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?

6-hangyo-bigg-boss

Hangyo Ice Cream: ಬಿಗ್‌ಬಾಸ್‌ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್‌ಕ್ರೀಂ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.