![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 3, 2022, 6:41 PM IST
ಪಿರಿಯಾಪಟ್ಟಣ: ಮೈಸೂರು ಜಿಲ್ಲಾ ಉಪ್ಪಾರ ನೌಕರರ ಹಾಗೂ ವೃತ್ತಿಪರರ ಸಂಘದ ವತಿಯಿಂದ ಮೈಸೂರಿನ ಕಲಾಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಉಪ್ಪಾರ ಸಮಾಜದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಸಮಾಜದ ಬಂದುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ತಾಲ್ಲೂಕು ಉಪ್ಪಾರ ನೌಕರರ ಸಂಘದ ಅಧ್ಯಕ್ಷ ಪಿ.ಎಲ್.ರಾಮಣ್ಣ ತಿಳಿಸಿದರು.
ಪಟ್ಟಣದ ಶ್ರೀ ಉಪ್ಪಾರ ರಾಮ ಮಂದಿರದಲ್ಲಿ ಸೋಮವಾರ ಕಾರ್ಯಕ್ರಮದ ಪೂರ್ವಭಾವಿ ಕರೆಯಲಾಗಿದ್ದ ಸಭೆಯಲ್ಲಿ ಮಾತನಾಡಿದರು.
ಪ್ರತಿ ವರ್ಷದಂತೆ ಈ ಬಾರಿಯೂ ಸಂಘದ ವತಿಯಿಂದ ಜ.09ರ ಭಾನುವಾರದಂದು ಮೈಸೂರಿನ ಕಲಾಮಂದಿರದಲ್ಲಿ ಬೆಳಿಗ್ಗೆ 10:30ಕ್ಕೆ 2020-21 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಉಪ್ಪಾರ ಸಮಾಜದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸಮಾಜದ ಕುಲ ಗುರುಗಳಾದ ಜಗದ್ಗುರು ಶ್ರೀಶ್ರೀಶ್ರೀ ಪುರುಷೋತ್ತಮನಂದ ಪುರಿ ಮಹಾಸ್ವಾಮಿಗಳು ವಹಿಸಲಿದ್ದು, ಕೇಂದ್ರ ಸರ್ಕಾರದ ಪಂಚಾಯಿತ್ ರಾಜ್ ಇಲಾಖಾ ಸಚಿವರಾದ ಶ್ರೀ ಕಪಿಲ್ ಮೊರೇಶ್ವರ ಪಾಟೀಲ್ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಲೋಕಸಭಾ ಸದಸ್ಯ ಪ್ರತಾಪ್ ಸಿಂಹರವರು ಭಗೀರಥ ಮಹರ್ಷಿಯ ಭಾವಚಿತ್ರ ಅನಾವರಣ ಮಾಡಲಿದ್ದು, ರಾಷ್ಟ್ರೀಯ ಉಪ್ಪು ತಯಾರಕರ ಹಾಗೂ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ನೋನಿಯಾ ಶ್ರೀ ಕೃಷ್ಣಕುಮಾರ್ ಭಾರತಿಯವರು ಪ್ರಧಾನ ಭಾಷಣ ಮಾಡಲಿದ್ದು, ಸಂಘದ ಅಧ್ಯಕ್ಷರಾದ ಪಿಲ್ಮ್ ಮಹದೇವಶೆಟ್ಟರು ಅಧ್ಯಕ್ಷತೆ ವಹಿಸಲಿದ್ದಾರೆ ಕಾರ್ಯಕ್ರಮದಲ್ಲಿ ಮಹರ್ಷಿ ಭಗೀರಥನ ಭಾವಚಿತ್ರ ಅನಾವರಣ, ಮಾಜಿ ಸಚಿವ ಹಾಗೂ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಹಾಗೂ ಉಪ್ಪಾರ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಗಿರೀಶ್ ಉಪ್ಪಾರ್ ರವರು ಸಂಘದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಲಿದ್ದು, ಕಾರ್ಯಕ್ರಮದಲ್ಲಿ ಅಗಲಿದ ಸಮಾಜದ ಗಣ್ಯರಿಗೆ ನುಡಿನಮನ, ಭಗೀರಥ ಸಮಾಜ ಸೇವಾ ರತ್ನ ಪ್ರಶಸ್ತಿ, ಭಗೀರಥ ಜನ ಸೇವಾ ರತ್ನ ಪ್ರಶಸ್ತಿ, ಭಗೀರಥ ವಿದ್ಯಾಶ್ರೀ ಪ್ರಶಸ್ತಿ, ಭಗೀರಥ ಸುವರ್ಣ ವಿದ್ಯಾಶ್ರೀ, ಭಗೀರಥ ವೈದ್ಯಶ್ರೀ ಪ್ರಶಸ್ತಿ, ಭಗೀರಥ ಶಿಕ್ಷಣ ರತ್ನ ಪ್ರಶಸ್ತಿ, ಭಗೀರಥ ನಾಗರಿಕ ಸೇವಾ ರತ್ನ, ಭಗೀರಥ ಕ್ರೀಡಾ ರತ್ನ ಪ್ರಶಸ್ತಿ, ಭಗೀರಥ ಜಾನಪದ ರತ್ನ ಪ್ರಶಸ್ತಿಗಳನ್ನು ಪ್ರಧಾನ ಮಾಡಲಾಗುವುದು ಆದ್ದರಿಂದ ಪಿರಿಯಾಪಟ್ಟಣ ತಾಲ್ಲೂಕಿನ ಸಮಾಜದ ಬಂದುಗಳು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಿರಿಯಾಪಟ್ಟಣ ತಾಲ್ಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎನ್.ಹರೀಶ್, ಎನ್.ಜಿ.ಒ ಉಪಾಧ್ಯಕ್ಷ ಶಿವು, ಪಿಡಿಒ ಮಂಜುನಾಥ್, ಸಹಕಾರ ಸಂಘದ ಕಾರ್ಯದರ್ಶಿ ನಟರಾಜ್, ಬಿಜೆಪಿ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಪಿ.ಜೆ.ರವಿ, ವಕೀಲರ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಕೆ.ಮಂಜು, ಶಿಕ್ಷಕರಾದ ಬಸವರಾಜು, ಮುಖಂಡರಾದ ಕಿರನಲ್ಲಿ ಸೋಮಶೇಖರ್, ಲೋಕೇಶ್, ಮಾಕೋಡು ಬಸವರಾಜು ಸೇರಿದಂತೆ ಮತ್ತಿತರರು ಹಾಜರಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.