ಸರಕಾರಿ ಆಸ್ತಿ ಉಳಿಸುವಲ್ಲಿ ತಾಲೂಕು ಆಡಳಿತ ವಿಫಲ: ನಗರಸಭೆ ಸದಸ್ಯ ವಿವೇಕಾನಂದ


Team Udayavani, Mar 15, 2022, 6:40 PM IST

Untitled-1

ಹುಣಸೂರು: ಹುಣಸೂರು ನಗರದ ಜನ ನಿಬಿಡ ಪ್ರದೇಶವಾದ ಬಸ್ ನಿಲ್ದಾಣದ ಬಳಿಯ ಕಿರಿಜಾಜಿ ರಸ್ತೆ ಸರ್ವೆ ನಂ.10 ರಲ್ಲಿ ನಾಲ್ಕು ಗುಂಟೆ ಬಿ ಖರಾಬು ಜಾಗವನ್ನು ಪ್ರಭಾವಿಗಳು ಕಬಳಿಸಲು ಹುನ್ನಾರ ನಡೆಸಿದ್ದು, ಸಂರಕ್ಷಿಸಿ ಬಾಬು ಜಗಜೀವನರಾಂ ಪಾರ್ಕ್ ಎಂದು ಘೋಷಿಸಬೇಕೆಂದು ನಗರಸಭಾ ಸದಸ್ಯ ವಿವೇಕಾನಂದ, ಪ್ರಜಾಕೀಯ ಪಾರ್ಟಿ ತಾಲೂಕು ಅಧ್ಯಕ್ಷ ಚೆಲುವರಾಜು  ಒತ್ತಾಯಿಸಿದರು.

ಜಂಟೀ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಗರಸಭೆ ಸದಸ್ಯ ವಿವೇಕಾನಂದ 2012ರ ನಗರ ಯೋಜನಾ ಪ್ರಾಧಿಕಾರದ ನಕ್ಷೆಯಲ್ಲಿ ಸರಕಾರಿ ಜಾಗವೆಂದು ನಮೂದಾಗಿದೆ. ಹಿಂದೆಯೂ ಸಹ ವಕೀಲ ದಿ.ರಮೇಶ್‌ರವರು ನ್ಯಾಯಾಲಯದಲ್ಲಿ ಇದೇ ಖರಾಬು ಜಾಗವನ್ನು ಕಬಳಿಸಲು ಹುನ್ನಾರ ನಡೆಸಿದ್ದಾರೆಂದು ದಾವೆ ಹೂಡಿದ್ದರು. 6 ವರ್ಷಗಳ ಕಾಲ ವಿಚಾರಣೆ ನಡೆದು ನ್ಯಾಯಾಲಯಕ್ಕೆ ಸೂಕ್ತ ದಾಖಲಾತಿ ಸಲ್ಲಿಸದಿದ್ದರಿಂದ ಈ ನಿವೇಶನ ಸರಕಾರಿ ಆಸ್ತಿ ಎಂದು ಘೋಷಿಸಿದ್ದಲ್ಲದೆ ಪರ್ಮನೆಂಟ್ ಇಂಜಕ್ಷನ್  ಆರ್ಡರ್ ಹೊರಡಿಸಿತ್ತು. ಇದಾದ ನಂತರ ಮತ್ತೆ ಪುರಸಭೆಯಲ್ಲಿ ಹಿಂಬರಹ ಪಡೆದ ನಗರದ ನಿವಾಸಿಯೊಬ್ಬರು ಉಚ್ಚನ್ಯಾಯಾಲಯ ಮೆಟ್ಟಿಲೇರಿದ್ದರು. ಅಲ್ಲಿಯೂ ಸಹ ವಿಚಾರಣೆ ನಡೆದು ದೂರುದಾರರ ನಿವೇಶನವನ್ನು ಹುಡುಕಿಕೊಡುವಂತೆ ಆದೇಶಿಸಿದೆ. ಆದರೆ ಅರ್ಜಿದಾರರು ಆಡಳಿತ ಯಂತ್ರವನ್ನೇ ದುರುಪಯೋಗಪಡಿಸಿಕೊಂಡು ನಾಲ್ಕು ಗುಂಟೆ ನಿವೇಶನಕ್ಕೆ ರಾತ್ರೋರಾತ್ರಿ ತಂತಿ ಬೇಲಿ ನಿರ್ಮಿಸಿದ್ದು, ಈ ಜಾಗದಲ್ಲಿ ಆಟೋ ನಿಲ್ದಾಣ, ಪಾನಿಪುರಿ ಮಾರುತ್ತಿದ್ದ ಸುಮಾರು 20 ಕುಟುಂಬಗಳು ಬೀದಿಪಾಲಾಗಿವೆ.

ತಕ್ಷಣವೇ ಹೆದ್ದಾರಿ ಬದಿಯಲ್ಲಿ ತಂತಿಬೇಲಿ ತೆರವುಗೊಳಿಸಿ, ಜಗಜೀವನರಾಂ ಪಾರ್ಕ್ ಎಂದು ನಾಮಕರಣ ಮಾಡಬೇಕೆಂದು ಆಗ್ರಹಿಸಿ, ಇನ್ನೊಂದು ವಾರದಲ್ಲಿ ತಂತಿಬೇಲಿ ತೆರವಾಗದಿದ್ದಲ್ಲಿ ಒಂದೆಡೆ ಕಾನೂನಾತ್ಮಕ ಹೋರಾಟದ ಜೊತೆಗೆ ಸಾರ್ವಜನಿಕರೊಡಗೂಡಿ ತಾವೇ ಮುಂದೆನಿಂತು ತಂತಿಬೇಲಿ  ತೆರವುಗೊಳಿಸುವುದಾಗಿ ಎಚ್ಚರಿಸಿದರು.

ಪ್ರಜಾಕೀಯ ಪಾರ್ಟಿ ತಾಲೂಕು ಅಧ್ಯಕ್ಷ ಚೆಲುವರಾಜು ಮಾತನಾಡಿ ನಗರದ ಜನನಿಭಿಡ ರಸ್ತೆಗಳಾದ ಲಕ್ಷ್ಮೀ ವಿಲಾಸ್‌ವೃತ್ತ, ದರ್ಗಾರಸ್ತೆ, ಮಂಜುನಾಥ ಹಾಗೂ ನ್ಯೂಮಾರುತಿ ಬಡಾವಣೆಗಳಲ್ಲಿ ರಸ್ತೆಗಳು, ಸರಕಾರಿ ನಿವೇಶನಗಳನ್ನೇ ಒತ್ತುವರಿ ಮಾಡಿಕೊಂಡು ಕಾಪ್ಲೆಕ್ಸ್ ನಿರ್ಮಿಸಿದ್ದು, ನಗರಸಭೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ತಕ್ಷಣವೇ ಸರ್ವೆ ಕೈಗೊಂಡು ಒತ್ತುವರಿ ತೆರವುಗೊಳಿಸಬೇಕೆಂದು ಆಗ್ರಹಿಸಿದರು.

ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾ ಮುಖಂಡ ಸುನಿಲ್, ಸಾಮಾಜಿಕ ಕಾರ್ಯಕರ್ತ ಚಂದ್ರಶೇಖರ್ ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.