ತಾಲೂಕಿನಲ್ಲಿ ಕಸಾಪ ಭವನ ನಿರ್ಮಾಣ: ರಾಜ್ಯದಲ್ಲೇ ಮೊದಲ ಭೂ ಮಂಜೂರಾತಿ ಪಡೆದ ಪಿರಿಯಾಪಟ್ಟಣ


Team Udayavani, Jul 18, 2022, 6:52 PM IST

ತಾಲೂಕಿನಲ್ಲಿ ಕಸಾಪ ಭವನ ನಿರ್ಮಾಣ: ರಾಜ್ಯದಲ್ಲೇ ಮೊದಲ ಭೂ ಮಂಜೂರಾತಿ ಪಡೆದ ಪಿರಿಯಾಪಟ್ಟಣ

ಪಿರಿಯಾಪಟ್ಟಣ: ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿಗೆ ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕಾಗಿ ಸರ್ಕಾರ ರಾಜ್ಯದಲ್ಲೇ ಮೊದಲ ಬಾರಿಗೆ ಭೂ ಮಂಜೂರಾತಿ ಮಾಡುವ ಮೂಲಕ ಕನ್ನಡ ನಾಡು-ನುಡಿ ಸಾಹಿತ್ಯ, ಸಂಸ್ಕೃತಿ ಸಂವರ್ಧನೆಯ ಮಹತ್ಕಾರ್ಯದ ಹೊಸ ಇತಿಹಾಸಕ್ಕೆ ನಾಂದಿಯಾಗಿದೆ.

ಪಿರಿಯಾಪಟ್ಟಣ ತಾಲೂಕು ಕಸಾಪಕ್ಕೆ ತನ್ನದೇ ಆದ ಇತಿಹಾಸವಿದೆ. ರಾಜ್ಯದಲ್ಲಿ ಅನೇಕ ವಿಭಿನ್ನ ಕಾರ್ಯಚಟುವಟಿಕೆಗಳ ಮೂಲಕ ರಾಜ್ಯದ ಗಮನ ಸೆಳೆಯುತ್ತಾ ಬಂದಿದೆ. ರಾಜ್ಯದಲ್ಲಿ  ಮೊದಲ ಬಾರಿಗೆ 2012ನೇ ಇಸವಿಯಲ್ಲಿ ಮಿನಿವಿಧಾನ ಸೌಧಕ್ಕೆ ಪರ್ಯಾಯವಾಗಿ ತಾಲೂಕು ಆಡಳಿತ ಭವನ ನಾಮಕರಣ ಮಾಡಿದ್ದು, ಇದು ಈಗ ಸರ್ಕಾರದ ಆದೇಶವಾಗಿ ಮಾರ್ಪಟ್ಟಿದೆ. ಸಾಹಿತ್ಯ ಪರಿಷತ್ತಿನ ಮೊದಲ ಗ್ರಾಮ ಘಟಕ ಆರಂಭ, ಗ್ರಾಮೀಣ ಪ್ರದೇಶದಲ್ಲಿ ಕುವೆಂಪು ಪ್ರತಿಮೆಗಳ ಅನಾವರಣ, ರಸ್ತೆ ವೃತ್ತಗಳಿಗೆ ಸಾಹಿತಿ, ಕವಿಗಳ ಹೆಸರಿಡುವುದು, ಸೇರಿದಂತೆ ಅನೇಕ ಮೊದಲುಗಳಿಗೆ ಕಸಾಪ ತಾ.ಘಟಕ ಕಾರಣವಾಗಿದೆ.

ರಾಜ್ಯಾಧ್ಯಕ್ಷರ ಆಶಯಕ್ಕೆ ಇಂಬು:

ನೂತನ ಕಸಾಪ ರಾಜ್ಯಾಧ್ಯಕ್ಷ ಡಾ. ಮಹೇಶ್‌ಜೋಷಿ ಅವರ ಆಶಯದಂತೆ ಶ್ರೀಸಾಮಾನ್ಯನ ಕಡೆಗೆ ಸಾಹಿತ್ಯ ಪರಿಷತ್ತಿನ ನಡಿಗೆ ಎಂಬ ಘೋಷವಾಕ್ಯದಡಿ ಪ್ರತಿ ತಾಲೂಕಿನಲ್ಲಿ ಸಾಹಿತ್ಯ ಭವನ ನಿರ್ಮಾಣವಾಗಬೇಕೆಂಬ ಆಶಯವನ್ನು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಬಿಡುಗಡೆ ಮಾಡಿದ್ದರು. ಇದರಂತೆ ರಾಜ್ಯದಲ್ಲಿ ಮೊದಲ ಬಾರಿಗೆ ಪಿರಿಯಾಪಟ್ಟಣ ತಾಲೂಕಿನಲ್ಲಿ ಕಸಾಪಗೆ ಸರ್ಕಾರ ಭೂ ಮಂಜೂರಾತಿ ಮಾಡುವ ಮೂಲಕ ಗ್ರಾಮಾಂತರ ಭಾಗದಲ್ಲಿ ತಾಲೂಕಿನ ಮೊದಲ ಸಾಹಿತ್ಯ ಭವನ ನಿರ್ಮಾಣಕ್ಕೆ ಚಾಲನೆ ಸಿಗಲಿದೆ.

3 ಜಾಗ ಗುಂಟೆ ಮಂಜೂರು:

ಪಿರಿಯಾಪಟ್ಟಣ ಕಸಾಪ ಭವನ ನಿರ್ಮಾಣಕ್ಕಾಗಿ 2020 ಜನವರಿಯಿಂದ ಹೋರಾಟ ನಡೆಸಲಾಗುತ್ತಿತ್ತು. ಅಂತಿಮವಾಗಿ ಪಟ್ಟಣದ ಹೃದಯಭಾಗದಲ್ಲಿ ಸರ್ವೇ. 137/1ಎ ರಲ್ಲಿ ಮೂರುಗುಂಟೆ ನಿವೇಶನವನ್ನು ಶಾಸಕ ಕೆ.ಮಹದೇವ್ ಸೂಚನೆಯಂತೆ ಗುರುತಿಸಿ ಸರಕಾರಕ್ಕೆ ಅನುಮೋದನೆಗೆ ಕಳುಹಿಸಲಾಯಿತು.

ಕ್ಯಾಬಿನೆಟ್ ಒಪ್ಪಿಗೆ:

ಸರ್ಕಾರೇತರ ಸಂಸ್ಥೆಯಾದ ಕಸಾಪಗೆ ತಾಲೂಕು ಮಟ್ಟದಲ್ಲಿ ಸಾಹಿತ್ಯ ಭವನ ನಿರ್ಮಾಣದ ಉದ್ದೇಶಕ್ಕಾಗಿ ಕಡತ ವಿಲೇವಾರಿ ಸಂದರ್ಭದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಜಯರಾಮರಾಜೇ ಅರಸ್ ಸರ್ಕಾರದ ಅಧಿಕಾರಿಗಳಿಗೆ ಸಾಹಿತ್ಯ ಭವನದ ಅಗತ್ಯತೆಯ ಬಗ್ಗೆ ಮನದಟ್ಟು ಮಾಡಿಕೊಟ್ಟ ಪರಿಣಾಮ ಮತ್ತು ಶಾಸಕ ಕೆ.ಮಹದೇವ್ ಕಂದಾಯ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ವಿಶೇಷ ಮನವಿ ಮಾಡಿದ್ದರಿಂದ ಈ ಜಮೀನು ಮಂಜೂರಾತಿ ಕ್ಯಾಬಿನೆಟ್ ಸಭೆಯಲ್ಲಿ ವಿಶೇಷ ವಿಚಾರವಾಗಿ ಪ್ರಸ್ತಾಪವಾಗಿ ಅನುಮೋದನೆ ದೊರಕಿದೆ.

ರಾಜ್ಯಾದ್ಯಂತ ಎಲ್ಲಾ ತಾಲೂಕುಗಳಲ್ಲಿ ಕನ್ನಡ ಸಾಹಿತ್ಯ ಭವನ ನಿರ್ಮಾಣವಾಗಬೇಕೆಂಬ ಮಹದಾಸೆಗೆ ಪಿರಿಯಾಪಟ್ಟಣ ಕಸಾಪ ಮೊದಲ ಅಡಿ ಇಡುತ್ತಿದ್ದು ನಿವೇಶನ ಕಸಾಪಗೆ ನೋಂದಣಿಯಾದ ತಕ್ಷಣ ಶೀಘ್ರದಲ್ಲಿ ಭವನ ನಿರ್ಮಾಣಕ್ಕೆ ಎಲ್ಲಾ ಸಿದ್ದತೆ ಮಾಡಿಕೊಳ್ಳುಂತೆ ಶಾಸಕ ಕೆ.ಮಹದೇವ್ ತಾಲೂಕು ಅಧ್ಯಕ್ಷ ನವೀನ್‌ಕುಮಾರ್‌ಗೆ  ಸೂಚಿಸಿದ್ದಾರೆ.

ರಾಜ್ಯದಲ್ಲೇ ಮೊದಲ ಬಾರಿಗೆ ತಾಲೂಕು ಹಂತದಲ್ಲಿ ಸಾಹಿತ್ಯ ಭವನ ನಿರ್ಮಾಣಕ್ಕೆ ನಿವೇಶನ ಮಂಜೂರು ಮಾಡಿ ಸಹಕಾರ ನೀಡಿದ ಮಾನ್ಯ ಮುಖ್ಯಮಂತ್ರಿಗಳು, ಕಂದಾಯ ಸಚಿವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಲ್ಲರ ಆಶಯದಂತೆ ತಾಲೂಕಿನಲ್ಲಿ ಮಾದರಿ ಕನ್ನಡ ಭವನ ನಿರ್ಮಾಣವಾಗಲು ಎಲ್ಲರೂ ಕೈಜೋಡಿಸಬೇಕಿದೆ. -ಕೆ.ಮಹದೇವ್ ಶಾಸಕರು ಪಿರಿಯಾಪಟ್ಟಣ.

ಸಾಹಿತ್ಯ ಭವನ ನಿವೇಶನಕ್ಕಾಗಿ ಹಲವು ವರ್ಷಗಳಿಂದ ಹೋರಾಟ ಮಾಡಿದ ಜಿಲ್ಲಾ, ತಾಲೂಕು ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕೇಂದ್ರ ಸಾಹಿತ್ಯ ಪರಿಷತ್ತಿನ ವತಿಯಿಂದ ಸಾಹಿತ್ಯ ಭವನ ನಿರ್ಮಾಣಕ್ಕೆ ಅಗತ್ಯ ಆರ್ಥಿಕ ನೆರವು ನೀಡಲಾಗುವುದು. -ಡಾ. ಮಹೇಶ್‌ಜೋಷಿ, ರಾಜ್ಯಾಧ್ಯಕ್ಷರು ಕಸಾಪ.

ಜಿಲ್ಲಾ ಕೇಂದ್ರಗಳಂತೆ ತಾಲೂಕು ಕೇಂದ್ರಗಳು ಸ್ವಂತ ಕಟ್ಟಡ ಹೊಂದಬೇಕು ಎಂಬುದು ರಾಜ್ಯಾಧ್ಯಕ್ಷರು ಚಿಂತನೆಯಾಗಿದ್ದು. ಇದರಂತೆ ಜಿಲ್ಲೆಯಲ್ಲಿ ಮೊದಲು ನಿವೇಶನ ಮಂಜೂರಾಗಿರುವುದು ಸಂತಸ ತಂದಿದೆ.-ಗೊರಳ್ಳಿಜಗದೀಶ್ ನಿಕಟಪೂರ್ವ ಅಧ್ಯಕ್ಷರು

ಪಿರಿಯಾಪಟ್ಟಣದಲ್ಲಿ ತಾಲೂಕು ಮಟ್ಟದಲ್ಲಿಯೂ ಸಾಹಿತ್ಯ ಭವನಗಳು ನಿರ್ಮಾಣವಾಗಬೇಕು ಎಂಬ ಹಲವು ವರ್ಷಗಳ ಹೋರಾಟಕ್ಕೆ ಫಲದೊರಕಿದೆ. ಇದಕ್ಕೆ ಸಹಕರಿಸಿದ ಶಾಸಕ ಕೆ.ಮಹದೇವ್, ಕಸಾಪ ಪದಾಧಿಕಾರಿಗಳಿಗೆ ಅಭಿನಂದನೆಗಳು,  ರೂ.1 ಕೋಟಿ ವೆಚ್ಚದಲ್ಲಿ ಮಾದರಿ ಸಾಹಿತ್ಯ ಭವನ ನಿರ್ಮಾಣಮಾಡಬೇಕಾಗಿದೆ ಇದಕ್ಕೆ ಎಲ್ಲರ ಸಹಕಾರ ಅತ್ಯಗತ್ಯ. – ನವೀನ್ ಕುಮಾರ ಕಸಾಪ ತಾ.ಅಧ್ಯಕ್ಷರು

-ಪಿಎನ್.ದೇವೇಗೌಡ ಪಿರಿಯಾಪಟ್ಟಣ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.