ತಾಪಮಾನ ನಿಯಂತ್ರಿಸದಿದ್ದರೆ ಸಂಕಷ್ಟ


Team Udayavani, Apr 23, 2017, 1:03 PM IST

mys1.jpg

ಮೈಸೂರು: ಹೆಚ್ಚುತ್ತಿರುವ ಜಾಗತಿಕ ತಾಪಮಾನ ಹಾಗೂ ಜನಸಂಖ್ಯೆ ನಿಯಂತ್ರಣದ ಬಗ್ಗೆ ಗಂಭೀರ ಚಿಂತನೆ ನಡೆಸದಿದ್ದಲ್ಲಿ ಮುಂದೆ ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ ಎಂದು ಗ್ರೀನ್‌ ಆಸ್ಕರ್‌ ಪ್ರಶಸ್ತಿ ಪುರಸ್ಕೃತ ವನ್ಯಜೀವಿ ಛಾಯಾಗ್ರಾಹಕ ಕೃಪಾಕರ ಕಳವಳ ವ್ಯಕ್ತಪಡಿಸಿದರು.

ನಗರದ ಮಹಾರಾಜ ಕಾಲೇಜು ಕ್ಯಾಂಟಿನ್‌ನಲ್ಲಿ ವಿಶ್ವಭೂಮಿ ದಿನಾಚರಣೆ ಹಿನ್ನೆಲೆಯಲ್ಲಿ ಆಯೋಜಿ ಸಿದ್ದ ವನ್ಯಜೀವಿ ಛಾಯಾಗ್ರಾಹಕ ಲೋಕೇಶ್‌ ಮೊಸಳೆ ಅವರ ಛಾಯಾಚಿತ್ರ ಪ್ರದರ್ಶನದಲ್ಲಿ ಮಾತ ನಾಡಿದ ಅವರು, ಈ ಆಚರಣೆ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತಗೊಳ್ಳದೆ ವರ್ಷವೀಡಿ ಆಚರಣೆ ಯಾಗಬೇಕು.

ಇತ್ತೀಚಿನ ದಿನಗಳಲ್ಲಿ ಜಾಗತಿಕ ತಾಪಮಾನ ಹೆಚ್ಚಾಗುತ್ತಿದ್ದು, ಮತ್ತೂಂದೆಡೆ ಜನಸಂಖ್ಯೆ ಯಲ್ಲೂ  ಭಾರೀ  ಏರಿಕೆಯಾಗುತ್ತಿದೆ. ಹೀಗಾಗಿ ಈ ವಿಷಯಗಳ ಕುರಿತು ಗಂಭೀರ ಚಿಂತನೆ ಮಾಡಬೇಕಿದ್ದು, ಕುತ್ತಿಗೆಗೆ ಬಂದಾಗ ಎಚ್ಚೆತ್ತುಕೊಳ್ಳದೆ ಈಗಿನಿಂದಲೇ ಪರಿಹಾರ ಕಂಡುಕೊಳ್ಳಬೇಕು ಎಂದರು.

ವನ್ಯಜೀವಿ ಛಾಯಾಗ್ರಾಹಕ ಲೋಕೇಶ್‌ ಮೊಸಳೆ ಮಾತನಾಡಿ, ರಂಗನತಿಟ್ಟು, ಕೆರೆ, ಹೊಲ, ಬಂಡೀಪುರ, ಹಿಮಾಲಯ, ಮೈಸೂರು ಹಾಗೂ ಸುತ್ತಮುತ್ತ ಕಡೆಗಳಲ್ಲಿ ಸೆರೆ ಹಿಡಿದ ಛಾಯಾಚಿತ್ರ ಗಳನ್ನು ಪ್ರದರ್ಶನಕ್ಕಿಡಲಾಗಿದೆ. ಒಂದು ಚಿತ್ರದಿಂದ ಒಬ್ಬರಿಗೆ ಪರಿಸರದ ಬಗ್ಗೆ ಅರಿವು ಮೂಡಿದರೆ ಪ್ರದರ್ಶನ ಸಾರ್ಥಕವಾದಂತೆ ಎಂದರು.

ಛಾಯಾಚಿತ್ರ ಪ್ರದರ್ಶನದಲ್ಲಿ ಬೇಟೆಗಾಗಿ ಕಾಯುತ್ತಿರುವ ಚಿರತೆ, ಯಾರ ಹಂಗಿಲ್ಲದೇ ಸ್ವತ್ಛಂದ ವಾಗಿ ವಿಹರಿಸುತ್ತಿರುವ ಹುಲಿ, ಮೈ ಮೇಲೆ ಧೂಳು ಎರಚಿಕೊಳ್ಳುತ್ತಿರುವ ಆನೆ, ಗೂಡು ಕಟ್ಟುತ್ತಿರುವ ಕೊಕ್ಕರೆ, ಮರಿಯೊಂದಿಗೆ ಕಾಲ ಕಳೆಯುತ್ತಿರುವ ಕರಡಿ, ಈಗಷ್ಟೇ ಜನಿಸಿ ಗೂಡಿನಿಂದ ಜಾರಿ ನೆಲಕ್ಕೆ ಬೀಳುತ್ತಿರುವ ಹಕ್ಕಿ,

ಕೂಗುತ್ತಿರುವ ಹುಂಜ, ಗರ್ಜಿಸುತ್ತಿರುವ ಹುಲಿ, ತನ್ನ ಮರಿಗಳಿಗೆ ಕಾಳು ತಿನ್ನಿಸುತ್ತಿರುವ ಹಕ್ಕಿ ಸೇರಿದಂತೆ ಮೈಸೂರಿನಿಂದ ಜಮ್ಮು ಕಾಶ್ಮೀರದವರೆಗೆ ಲೋಕೇಶ್‌ ಮೊಸಳೆ ತಮ್ಮ ಕ್ಯಾಮರದಲ್ಲಿ ಸೆರೆ ಹಿಡಿದಿರುವ ಚಿತ್ರಗಳು ನೋಡುಗರ ಗಮನ ಸೆಳೆಯಿತು.ಪೊ›.ಸಿ.ಪಿ.ಸುನೀತಾ, ಐಕ್ಯೂಸಿ ನಿರ್ದೇಶಕಿ ಪೊ›.ಅನಿತಾ ಬ್ರಾಕ್ಸ್‌,  ಪೊ›.ಲಿಂಬ್ಯಾ ನಾಯ್ಕ,  ಪ್ರಮೀಳಾ ಇತರರಿದ್ದರು.

ಟಾಪ್ ನ್ಯೂಸ್

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

Udupi: ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್

Udupi: ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್

15-bng

Bengaluru: ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್‌ ಕದಿಯಲು ಸುಪಾರಿ!

pejavar

Pejawar Swamiji; ಸರಕಾರದ ನಿಯಂತ್ರಣದಿಂದ ದೇವಸ್ಥಾನಗಳು ಮುಕ್ತವಾಗಲಿ

IPL: Foreign players can no longer get crores; This is the new rule

IPL: ವಿದೇಶಿ ಆಟಗಾರರಿಗೆ ಇನ್ನು ಕೋಟಿ ಕೋಟಿ ಹಣ ಪಡೆಯಲು ಸಾಧ್ಯವಿಲ್ಲ; ಹೀಗಿದೆ ಹೊಸ ನಿಯಮ

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

4

Kundapura: ಚರಂಡಿ ದುರಸ್ತಿಗಾಗಿ ಕಿತ್ತ ಸ್ಲ್ಯಾಬ್‌ಗಳೂ ಅಳವಡಿಕೆಯಾಗಿಲ್ಲ

Shooting-Film

Coastal Wood; 3 ತಿಂಗಳಲ್ಲಿ 8 ಶೂಟಿಂಗ್‌: ತುಳು ಸಿನೆಮಾರಂಗದಲ್ಲಿ ಕಮಾಲ್‌!

3

Kinnigoli: ಅಂಗಡಿಗಳಿಂದ ಆದಾಯ ಬಂದರೂ ದುರಸ್ತಿ ಇಲ್ಲ

2(1)

Mudbidri: ಚರಂಡಿ ವ್ಯವಸ್ಥೆ ಇಲ್ಲದೆ ಕುಸಿದ ಆವರಣ ಗೋಡೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.