ಕಟಾವಿಗೆ ಬಂದ ಬಾಳೆ ಬೆಳೆ ಕೊಚ್ಚಿ ಕೆಡವಿದ ಕಿಡಿಗೇಡಿಗಳು
Team Udayavani, Jan 3, 2018, 1:17 PM IST
ಬನ್ನೂರು: ಕಷ್ಟಪಟ್ಟು ಬೆಳೆದ ಬಾಳೆ ಬೆಳೆ ಇನ್ನೇನು ಕೈ ಸೇರಬೇಕು ಎನ್ನುವಷ್ಟರಲ್ಲಿ, ಸೂಮಾರು 1900 ಬಾಲೆ ಗಿಡವನ್ನು ಕಿಡಿಗೇಡಿಗಳು ಮನಬಂದತೆ ಕೊಚ್ಚಿ ಕೆಡವಿರುವ ಘಟನೆ ಬನ್ನೂರು ಬಳಿಯ ಅತ್ತಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ.
ಬನ್ನೂರಿಗೆ ಸಮೀಪದ ಅತ್ತಳ್ಳಿ ಗ್ರಾಮದಲ್ಲಿ ವಾಸವಾಗಿರುವ ರಾಮಪ್ರಸಾದ್ ಎಂಬುವರಿಗೆ ಸೇರಿದ ಒಂದೂವರೆ ಎಕರೆ ಬಾಳೆಯನ್ನು ಬೆಳೆಯಲಾಗಿದ್ದು, ಕಟಾವಿಗೆ ಕೇವಲ ಎರಡೇ ತಿಂಗಳು ಇದ್ದಂತ ಬೆಳೆಯನ್ನು ರಾತ್ರಿ ವೇಳೆ ದುಷ್ಕರ್ಮಿಗಳು ಸಂಪೂರ್ಣವಾಗಿ ಕತ್ತರಿಸಿ ಹಾಕುವ ಮೂಲಕ ಅಟ್ಟಹಾಸ ಮೆರೆದಿದ್ದಾರೆ.
ಎಂದಿನಂತೆ ಬೆಳಗ್ಗೆ ಗದ್ದೆಗೆ ಮಾಲೀಕರ ಮಕ್ಕಳು ಹೋಗಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ. ಗದ್ದೆಯ ಮಾಲಿಕ ಕೈ ಸಾಲ ಮಾಡಿ ಕಷ್ಟಪಟ್ಟು ಬೆಳೆದ ಬೆಳೆಯನ್ನು ಸಹಿಸದಂತವರು ಈ ಕೆಲಸ ಮಾಡಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.
ಕುಂತನಹಳ್ಳಿ ಗ್ರಾಮಕ್ಕೆ ಹೊಂದಿಕೊಂಡಂತೆ ಇರುವಂತ ಗದ್ದೆ ಇದಾಗಿದ್ದು, ಸಮೀಪದಲ್ಲಿಯೇ ಜನರ ಓಡಾಟ ಇದೆ. ಆದರೂ ಹೊಸ ವರ್ಷದ ಭಾನುವಾರ ಸುಮಾರು ಒಂದೂವರೆ ಎಕರೆಯಲ್ಲಿರುವ ಸುಮಾರು 1900 ಗಿಡಗಳನ್ನು ಸಂಪೂರ್ಣವಾಗಿ ಕಿಡಿಗೇಡಿಗಳು ಕಡಿದಿದ್ದು, ಘಟನೆ ವೇಳೆ ಮಾಲಿಕ ಹಾಗೂ ಅವರ ಮಕ್ಕಳು ಅನ್ಯ ಕೆಲಸಕ್ಕೆ ತೆರಳಿದ್ದ ವೇಳೆ ದುಷ್ಕರ್ಮಿಗಳು ಕೃತ್ಯ ಎಸಗಿದ್ದಾರೆ.
ನಷ್ಟ ಭರಿಸಿ: ಘಟನಗೆ ಸಂಬಂಧಿಸಿದಂತೆ ಕಬ್ಬು ಬೆಳೆಗಾರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಳ್ಳಿ ದೇವರಾಜು ಮಾತನಾಡಿ, ರಾಜ್ಯದಲ್ಲಿ ರೈತಗೂ ಮತ್ತು ರೈತ ಬೆಳೆದ ಬೆಳೆಗೂ ಯಾವ ರೀತಿಯಲ್ಲು ರಕ್ಷಣೆ ಇಲ್ಲವಾಗಿದೆ. ಸಾಲ ಮಾಡಿ ಬೆಳೆದ ಬೆಳೆ ಕೈಗೆ ಬಾರದೆ ನನ್ನ ಸ್ನೇಹಿತ ಎಲ್ಲಿ ಧೃತಿಗೆಡುತ್ತಾನೋ ಎಂದು ಆತಂಕವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕೃತ್ಯ ಎಸಗಿರುವವರನ್ನು ಕೂಡಲೇ ಬಂಧಿಸಿ. ನಷ್ಟವನ್ನು ಸಂಪೂರ್ಣವಾಗಿ ಮಾಲಿಕನಿಗೆ ಒದಗಿಸಿಕೊಡುವ ಮೂಲಕ ನಷ್ಟಕ್ಕೆ ಒಳಗಾಗಿರುವ ರೈತನಿಗೆ ನ್ಯಾಯ ಒದಗಿಸಿ ಕೊಡಬೇಕು ಎಂದು ತಿಳಿಸಿದರು.
ಕ್ರಮ ಕೈಗೊಳ್ಳಿ: ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಂಗೂರು ಶಂಕರ್ ಮಾತನಾಡಿ, ಸುಮಾರು 3 ಲಕ್ಷ ಖರ್ಚು ಮಾಡಿ ಬೆಳೆದ ಬೆಳೆ ನಾಶವಾಗಿದ್ದು, ಪೊಲೀಸ್ ಇಲಾಖೆ ತಕ್ಷಣೆವೆ ಕ್ರಮ ಕೈಗೊಂಡು ಆರೋಪಿಗಳನ್ನ ಬಂಧಿಸಬೇಕು ಎಂದು ಆಗ್ರಹಿಸಿದರು. ಗದ್ದೆಮೋಳೆ ಶಿವಣ್ಣ , ಕುಂತನಹಳ್ಳಿ ಸ್ವಾಮಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
Mysuru Dasara: ಖಾಸಗಿ ದರ್ಬಾರ್ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ
MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್ ಎದುರಿಸಿ ಗೆಲ್ಲುವೆ: ಸಿಎಂ
MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ಸಾಧ್ಯತೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.