ಹೆದ್ದಾರಿಯ ಮದ್ಯದಂಗಡಿಗಳ ತೆರವು ಅನಿವಾರ್ಯ
Team Udayavani, Jun 30, 2017, 12:46 PM IST
ಪಿರಿಯಾಪಟ್ಟಣ: ಸುಪ್ರೀಂ ಕೋರ್ಟ್ನ ಅದೇಶದಂತೆ ರಾಜಾದ್ಯಂತ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿರುವ ಮದ್ಯದಂಗಡಿಗಳು ಜು.1 ರಿಂದ ಅನಿವಾರ್ಯವಾಗಿ ಸ್ಥಳಾಂತರಗೊಳ್ಳಲೇಬೇಕಾದ ಪರಿಸ್ಥಿತಿ ಬಂದೊದಗಿದೆ.
ಈ ಬಗ್ಗೆ 3 ತಿಂಗಳ ಹಿಂದೆ ಉತ್ಛ ನ್ಯಾಯಾಲಯವು ಈ ರೀತಿ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳ ರಸ್ತೆ ಬದಿಗಳಲ್ಲಿ ವ್ಯಾಪಾರ ನಡೆಸುತ್ತಿರುವ ಮದ್ಯದಂಗಡಿಗಳಿಂದ ರಾತ್ರಿ ಸಮಯದಲ್ಲಿ ಪ್ರಯಾಣಿಸುವ ವಿವಿಧ ವಾಹನಗಳ ಚಾಲಕರು ಮದ್ಯಪಾನ ಮಾಡಿ ಅಪಘಾತಕ್ಕೀಡಾಗುವ ಹಿನ್ನೆಲೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಇತ್ಯರ್ಥ ಪಡಿಸುತ್ತಾ ಈ ಆದೇಶ ಹೊರಡಿಸಿತ್ತು.
ಅಲ್ಲದೆ ಸ್ಥಳಾಂತರಗೊಳ್ಳಲು ಜೂ.30 ಕೊನೆಯ ದಿನವೆಂದು ನಿಗದಿಗೊಳಿಸಿತ್ತು. ಈ ಹಿನ್ನೆಲೆ ತಾಲೂಕಿನಲ್ಲಿ 43 ವಿವಿಧ ಮದ್ಯದಂಗಡಿಗಳಿದ್ದು, ಇದರಲ್ಲಿ ರಾಷ್ಟ್ರೀಯ ಹೆದ್ದಾರಿಯಾದ ಮೈಸೂರು ಬಂಟವಾಳ ಮುಖ್ಯ ರಸ್ತೆಯಲ್ಲಿ ಬರುವ ಮದ್ಯದಂಗಡಿಗಳ ಪೈಕಿ 25 ಮದ್ಯದಂಗಡಿಗಳನ್ನು 500 ಮೀ ದೂರಕ್ಕೆ ಸ್ಥಳಾಂತರಿಸುವ ಅನಿವಾರ್ಯತೆ ಬಂದೊದಗಿದೆ.
ಕಸಬಾ ರಾವಂದೂರು, ಬೆಟ್ಟದಪುರ, ಹಾರನಹಳ್ಳಿ ಹಾಗೂ ಪಟ್ಟಣ ಸೇರಿದಂತೆ 32 ಅಂಗಡಿಗಳು ಸ್ಥಳಾಂತರಗೊಳ್ಳಬೇಕಾಗಿದೆ. ಶಾಲಾ-ಕಾಲೇಜು, ಮಸೀದಿ ಹಾಗೂ ದೇವಸ್ಥಾನಗಳಿಂದ 500 ಮೀ ದೂರಕ್ಕೆ ಮದ್ಯದಂಗಡಿಗಳು ಸ್ಥಳಾಂತರಗೊಳ್ಳಬೇಕಾಗಿದೆ ಎಂದು ಅಬಕಾರಿ ನಿರೀಕ್ಷಕ ಎನ್.ಟಿ.ಆನಂದ್ಕುಮಾರ್ ಹೇಳಿದರು.
ಒಟ್ಟಿನಲ್ಲಿ ಸರ್ಕಾರಿ ಬೊಕ್ಕಸಕ್ಕೆ ಬರುವ ಆದಾಯ ತಪ್ಪಿ ಹೋಗುವುದಲ್ಲದೆ ಸ್ಥಳಾಂತರಗೊಳ್ಳಲಿರುವ ಮಾಲೀಕರು 500 ಮೀ.ದೂರದಲ್ಲಿ ಕಟ್ಟಡಗಳನ್ನು ಹೊಂದಿ ವಹಿವಾಟ ನಡೆಸಬೇಕಾದ ಸ್ಥಿತಿ ಉಂಟಾಗಿ ಅತಂತ್ರಕ್ಕೆ ಒಳಗಾಗಿದ್ದಾರೆ. ತಾಲೂಕಿನ ಮದ್ಯದಂಗಡಿಗಳ ಪೈಕಿ ಸದ್ಯಕ್ಕೆ 11 ಅಂಗಡಿಗಳು ಮಾತ್ರ ಯಾವುದೇ ಸ್ಥಳಾಂತರ ವಿಲ್ಲದೆ ನಿರಾಳವಾಗಿ ವ್ಯವಹರಿಸಲಿವೆ. ಮಿಕ್ಕ ಮದ್ಯದಂಗಡಿಗಳು ಮುಂದಿನ ಸುಪ್ರೀಂ ಕೋರ್ಟ್ನ ಆದೇಶದಂತೆ ಬದ್ಧವಾಗಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
Mysuru Dasara: ಖಾಸಗಿ ದರ್ಬಾರ್ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ
MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್ ಎದುರಿಸಿ ಗೆಲ್ಲುವೆ: ಸಿಎಂ
MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ಸಾಧ್ಯತೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.