ಕಾಳ್ಗಿಚ್ಚು ತಡೆಯಲು ಬೆಂಕಿರೇಖೆ ಸೃಷ್ಟಿ


Team Udayavani, Jan 23, 2017, 12:06 PM IST

mys2.jpg

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದೊಳಗೆ ಬೇಸಿಗೆ ಆರಂಭಕ್ಕೂ ಮುನ್ನ ಬೆಂಕಿ ನಿಯಂತ್ರಿಸಲು 300ಕ್ಕೂ ಹೆಚ್ಚು ಸಿಬ್ಬಂದಿ ಬೆಂಕಿ ರೇಖೆ (ಫೈರ್‌ಲೈನ್‌) ನಿರ್ಮಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಕಾಡಿನೊಳಗೆ ಅಕ್ರಮ ಚಟುವಟಿಕೆ- ಕಾಡಿನಲ್ಲಿ ಕಿಡಿ ಇಡುವವವ ಮೇಲೆ ಕಣ್ಗಾವಲು ಇಡಲಾಗಿದೆ. ನಾಗರಹೊಳೆ ಉದ್ಯಾನವನ ಒಂದೆಡೆ ಕೇರಳದ ವಯನಾಡು, ತಮಿಳುನಾಡಿನ ಮಧುಮಲೈ, ಬಂಡೀಪುರ ಅರಣ್ಯಕ್ಕೂ ಸಂಪರ್ಕವಿದೆ.

ಜೊತೆಗೆ ಉದ್ಯಾನದ ಕೆಲ ಪ್ರದೇಶ ಪಶ್ಚಿಮಘಟ್ಟಗಳ ಸಾಲಿಗೂ ಸೇರಲಿದೆ. ಮೈಸೂರು ಹಾಗೂ ಮಡಿಕೇರಿ ಜಿಲ್ಲೆ ವ್ಯಾಪ್ತಿಗೆ ಒಳಪಡುತ್ತದೆ. 643 ಚದರ ಕಿಲೋ ಮೀಟರ್‌ ವ್ಯಾಪ್ತಿಯ 8 ವಲಯಗಳ ಪೈಕಿ 4 ವಲಯಗಳಲ್ಲಿ ಈಗಾಗಲೇ ಮಳೆ ಕೊರತೆ, ಬಿರು ಬಿಸಿಲಿಗೆ ಕಾಡು ಒಣಗಿದೆ. ನೆಲಹುಲ್ಲು ಹಾಗೂ ಮರಗಳ ಎಲೆಗಳು ಉದುರಿದೆ. ಬಹುತೇಕ ಕೆರೆಕಟ್ಟೆಗಳಲ್ಲಿ ನೀರು ಕಡಿಮೆ- ಬರಿದಾಗಿದೆ.

ಉದ್ಯಾನದ ಸುರಕ್ಷತೆಯ ದೃಷ್ಟಿಯಿಂದ ಫೈರ್‌ಲೈನ್‌ ಸೇರಿದಂತೆ ವೀಕ್ಷಣಾ ಗೋಪುರ, ಅಟ್ಟಣೆ ಮೇಲೆ ಕಣ್ಗಾವಲು, ಅರಣ್ಯದಂಚಿನಲ್ಲಿ ಕ್ಯಾಮರಾ ಅಳವಡಿಸಲಾಗಿದೆ ಹಾಗೂ ಫೈರ್‌ಲೈನ್‌ ನಿರ್ಮಾಣಕ್ಕೆ ಅವಶ್ಯವಾದ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವದಲ್ಲಿ ವೀರನಹೊಸಹಳ್ಳಿ, ಮತ್ತಿಗೋಡು, ಆನೆಚೌಕೂರು, ಕಲ್ಲಹಳ್ಳ, ನಾಗರಹೊಳೆ, ಬಳ್ಳೆ (ಅಂತರಸಂತೆ) ಡಿ.ಬಿ.ಕುಪ್ಪೆ (ದೊಡ್ಡಬೈರನಕುಪ್ಪೆ), ಮೇಟಿಕುಪ್ಪೆ ವಲಯಗಳನ್ನಾಗಿ ವಿಂಗಡಿಸಲಾಗಿದೆ.

ಜೊತೆಗೆ ಹೊಸದಾಗಿ ಹುಣಸೂರು ವಲಯ ಸೇರಿಸಲಾಗಿದೆ. ಉದ್ಯಾನವನದಾದ್ಯಂತ 1800 ಕಿ.ಮೀ ಬೆಂಕಿ ರೇಖೆ ನಿರ್ಮಿಸಲು ಈಗಾಗಲೇ ಎಲ್ಲೆಡೆ ಫೈರ್‌ಲೈನ್‌ ಮಾರ್ಗದಲ್ಲಿ ಬೆಳೆದು ನಿಂತಿರುವ ಲಂಟಾನಾ ಮತ್ತಿತರ ಗಿಡಗುಂಟಿಗಳನ್ನು ಕಡಿಯಲಾಗಿದೆ. ಬಹುತೇಕ ಕಡೆ ಒಣಗಿದ್ದು, ವೀರನಹೊಸಹಳ್ಳಿ, ಹುಣಸೂರು, ಮತ್ತಿಗೋಡು, ಕಲ್ಲಹಳ್ಳ, ಅಂತರಸಂತೆ ವಲಯಗಳಲ್ಲಿ ಗಿಡಗಂಟಿಗಳನ್ನು ಸುಟ್ಟು, ಒಂದೆಡೆಯಿಂದ ಮತ್ತೂಂದೆಡೆಗೆ ಬೆಂಕಿ ಹರಡದಂತೆ ಫೈರ್‌ಲೈನ್‌ ನಿರ್ಮಿಸುವ ಕಾರ್ಯ ಭರದಿಂದ ಸಾಗಿದೆ.

250-300 ಮಂದಿ ನೇಮಕ: ಪ್ರತಿ ವಲಯಕ್ಕೆ 40-50 ಮಂದಿ ಫೈರ್‌ವಾಚರ್ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ನಿತ್ಯ ಕೆಲಸ ನಿರ್ವಹಿಸುವವರಿಗೆ ಕೂಲಿಯೊಂದಿಗೆ ಊಟ, ಕುಡಿಯುವ ನೀರು ಹಾಗೂ ವಾಹನ ಸೌಲಭ್ಯ ಕಲ್ಪಿಸಲಾಗಿದೆ. ಉದ್ಯಾನದಲ್ಲಿ ಹಾಲಿ ಇರುವ ದೊಡ್ಡದಾದ 15 ವಾಚ್‌ ಟವರ್‌ ಮೂಲಕ ಹಾಗೂ ಉದ್ಯಾನದಂಚಿನ ಪ್ರದೇಶದ ಅಲ್ಲಲ್ಲಿ ಮರದ ಮೇಲೆ ಅಟ್ಟಣೆ ನಿರ್ಮಿಸಲಾಗಿದೆ. ಸಿಬ್ಬಂದಿ ದಿನವಿಡಿ(24/7) ಮಾದರಿ ಕಣ್ಗಾವಲು ವ್ಯವಸ್ಥೆ ಮಾಡಲಾಗಿದೆ. ಅರಣ್ಯದಂಚಿನ ಪ್ರದೇಶಗಳಲ್ಲಿ ಅಕ್ರಮವಾಗಿ ಒಳ ನುಸುಳುವವರ ಪತ್ತೆಗಾಗಿ ಹೊಸದಾಗಿ ಹೆಚ್ಚುವರಿ ಕ್ಯಾಮರಾ ಅಳವಡಿಸಲಾಗುತ್ತಿದೆ.

ಹೆಚ್ಚುವರಿ ವಾಹನಗಳ ವ್ಯವಸ್ಥೆ: ಹಾಲಿ ಪ್ರತಿ ವಲಯಕ್ಕೆ 2 ವಾಹನಗಳಿದ್ದು, ಇದರೊಂದಿಗೆ ಮತ್ತೆ ರಡು ಬಾಡಿಗೆ ವಾಹನ ನಿಯೋಜಿಸಲಾಗಿದೆ. ಇದ ರೊಂದಿಗೆ ಹಳೆಯ ವಾಕಿ ಟಾಕಿ ದುರಸ್ತಿ ಜೊತೆಗೆ ಮತ್ತಷ್ಟು ಹೊಸ ವಾಕಿಟಾಕಿ ಖರೀದಿಸಲು ಯೋಜಿಸ ಲಾಗಿದೆ. ಬೆಂಕಿ ಬಿದ್ದವೇಳೆ ತಕ್ಷಣವೇ ಆರಿಸಲು ನೆರವಾಗಲು ಚಿಕ್ಕ ವಾಹನಗಳಲ್ಲಿ ಟ್ಯಾಂಕ್‌ ಮೂಲಕ ನೀರು ಕೊಂಡೊಯ್ಯುವ ವಾಹನಗಳಲ್ಲಿ ಸಣ್ಣ ಸಬ್‌ಮರ್ಸಿಬಲ್‌ ಪಂಪ್‌ ಸಹ ಬಳಸಲು ಉದ್ದೇಶಿಸ ಲಾಗಿದ್ದು, ಖರೀದಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಅಗ್ನಿಶಾಮಕ ವಾಹನವೂ ಸಜ್ಜು: ಉದ್ಯಾನವನ ದೊಳಗೆ ಬೆಂಕಿ ಅವಘಡ ಸಂಭವಿಸಿದಲ್ಲಿ ತಕ್ಷಣಕ್ಕೆ ಕ್ರಮವಹಿಸಲು ಹುಣಸೂರು, ಎಚ್‌.ಡಿ.ಕೋಟೆ ಹಾಗೂ ಕೊಡಗು ಜಿಲ್ಲೆಯ ವಿರಾಜಪೇಟೆ ವಿಭಾಗದಲ್ಲಿ ತಾತ್ಕಾಲಿಕವಾಗಿ 3 ಅಗ್ನಿಶಾಮಕ ವಾಹನ ಹಾಗೂ ಸಿಬ್ಬಂದಿಯನ್ನು ನಿಯೋಜಿಸಲು ಅಗ್ನಿಶಾಮಕ ಇಲಾಖೆಗೆ ಪತ್ರ ಬರೆಯಲಾಗಿದೆ.

ಬೀದಿ ನಾಟಕದ ಮೂಲಕ ಅರಿವು: ನಾಗರ ಹೊಳೆ ಉದ್ಯಾದಂಚಿನ ಗ್ರಾಮಗಳಲ್ಲಿ ನುರಿತ ಕಲಾ ತಂಡಗಳಿಂದ ಅರಣ್ಯದ ಮಹತ್ವ, ಬೆಂಕಿ ಹಾಕಿದ್ದಲ್ಲಿ ಪರಿಸರದ ಮೇಲಾಗುವ ಪರಿಣಾಮ ಹಾಗೂ ಅರಣ್ಯ ಜನರದ್ದು ಎನ್ನುವ ಮನೋಭಾವ ಮೂಡಿಸುವ ನಿಟ್ಟಿನಲ್ಲಿ ಬೀದಿ ನಾಟಕ ಪ್ರದರ್ಶಿಸಲಾಗುತ್ತದೆ. ಜೊತೆಗೆ ಆಸಕ್ತ ಯುವಕರ ಬೆಂಕಿ ತಡೆಗಟ್ಟುವ ಪಡೆಯನ್ನು ಸಹ ರಚಿಸಲಾಗುತ್ತದೆ. ಈಗಾಗಲೇ ಕಾಡಂಚಿನಲ್ಲಿ ಜಾಥಾ ನಡೆಸಲಾಗಿದೆ. ರೇಡಿಯೋದಲ್ಲೂ ಸಹ ಮಾಹಿತಿ ನೀಡಲಾಗಿದೆ.

ಹೆಲಿಕಾಪ್ಟರ್‌ ಬಳಕೆಗೆ ಚಿಂತನೆ: ಈಗಾಗಲೇ ನೀರಿನ ಕೊರತೆ ಇದೆ. ಫೆಬ್ರವರಿ- ಮಾರ್ಚ್‌ನಲ್ಲಿ ಮಳೆ ಬಾರದಿದ್ದಲ್ಲಿ ಮತ್ತಷ್ಟು ತೊಂದರೆಯಾಗಬಹುದು. ಬೆಂಕಿ ತಡೆಗೆ ಮುನ್ನೆಚ್ಚರಿಕೆಯಾಗಿ ಸಕಲ ಸಿದ್ಧತೆ ಮಾಡಿಕೊಂಡಿದ್ದರೂ, ತುರ್ತು ಸಂದರ್ಭದಲ್ಲಿ ಹೆಲಿಕಾಪ್ಟರ್‌ ಬಳಸಿ ಬೆಂಕಿ ನಂದಿಸುವ ಬಗ್ಗೆಯೂ ಹಿರಿಯ ಅಧಿಕಾರಿಗಳಲ್ಲಿ ಚರ್ಚಿಸಿದ್ದು, ಈಗಾಗಲೇ ಹೆಲಿಕಾಪ್ಟರ್‌ಗಾಗಿ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ.

ಅರಣ್ಯಕ್ಕೆ ತಂತಾನೆ ಬೆಂಕಿ ಬೀಳುವು ದಿಲ್ಲ. ಬೆಂಕಿ ಬೀಳುವುದನ್ನು ತಡೆಯು ವುದರಲ್ಲಿ ಸಾರ್ವಜನಿಕರ ಜವಾ ಬ್ದಾರಿಯೂ ಇದೆ. ಬೆಂಕಿ ಹಚ್ಚಿ ಅರಣ್ಯನಾಶ ಮಾಡುವ ಕಿಡಿಗೇಡಿಗಳ ಹಾಗೂ ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ ಕಾಡಂಚಿನವನರು ಮಾಹಿತಿ ನೀಡಬೇಕು, ಅರಣ್ಯನಾಶವಾದಲ್ಲಿ ವಾತಾವರಣದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಇಲಾಖೆ ಸಾಕಷ್ಟು ಮುನ್ನೆಚ್ಚರಿಕೆವಹಿಸಿದೆ. ಆದರೂ ಅರಣ್ಯದಂಚಿನ ಗ್ರಾಮಗಳ ರೈತರು, ಬೆಂಕಿ ತಡೆಗಟ್ಟುವಲ್ಲಿ ಯುವಕರು, ವಿದ್ಯಾರ್ಥಿಗಳ ಸಹಕಾರವೂ ಅಗತ್ಯ.
-ಮಣಿಕಂಠನ್‌, ಅರಣ್ಯ ಸಂರಕ್ಷಣಾಕಾರಿ

* ಸಂಪತ್‌ಕುಮಾರ್‌

ಟಾಪ್ ನ್ಯೂಸ್

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

ಲೋಕಾಯುಕ್ತ ಪೊಲೀಸರಿಂದ 14 ನಿವೇಶನಗಳ ಸ್ಥಳ ಮಹಜರು

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

H. Vishwanath: “ಚಮಚಗಿರಿ ಭಾಷಣದಿಂದ ದಸರಾ ಪಾವಿತ್ರ್ಯತೆ ಹಾಳು’

1 ವರ್ಷದ ಆಶೀರ್ವಾದ ಕೇಳಿದ ಸಿಎಂ ಸಿದ್ದರಾಮಯ್ಯ: ಕುತೂಹಲ

1 ವರ್ಷದ ಆಶೀರ್ವಾದ ಕೇಳಿದ ಸಿಎಂ ಸಿದ್ದರಾಮಯ್ಯ: ಕುತೂಹಲ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

Royal; ಟಾಂಗ್‌ ಕೊಡಲು ವಿರಾಟ್‌ ರೆಡಿ: ದಿನಕರ್‌ ನಿರ್ದೇಶನದ ಸಿನಿಮಾ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.