![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Apr 28, 2019, 3:00 AM IST
ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ಹೊಂದಿಕೊಂಡಿರುವ ಹುಣಸೂರು ಪ್ರಾದೇಶಿಕ ಅರಣ್ಯ ವಿಭಾಗಕ್ಕೆ ಸೇರಿದ ಆನೆ ಚೌಕೂರು ಸೆಕ್ಷನ್ನಲ್ಲಿ ಶುಕ್ರವಾರ ನಿತ್ರಾಣ ಗೊಂಡಿದ್ದ ಕಾಡಾನೆ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮಧ್ಯಹ್ನ ಸಾವನ್ನಾಪ್ಪಿದೆ.
ಹುಣಸೂರು-ವಿರಾಜಪೇಟೆ ರಸ್ತೆಯ ಪ್ರಾದೇಶಿಕ ಅರಣ್ಯ ವಿಭಾಗದ ಆನೆ ಚೌಕೂರು ಸೆಕ್ಷನ್ನ ಪಿರಿಯಾಪಟ್ಟಣ ವಲಯದ ಜೋಡಿಕಟ್ಟೆ ಕಳ್ಳ ಬೇಟೆ ತಡೆ ಶಿಬಿರದ ಬಳಿ ಸುಮಾರು 45-50 ವರ್ಷದ ಹೆಣ್ಣಾನೆಯೊಂದು ಶುಕ್ರವಾರ ಅಸ್ವಸ್ಥಗೊಂಡು ಬಿದ್ದಿದ್ದನ್ನು ಗಮನಿಸಿದ ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕಾಗಮಿಸಿದ ಹುಣಸೂರು ಡಿಸಿಎಫ್ ವಿಜಯಕುಮಾರ್ ತಕ್ಷಣವೇ ನಾಗರಹೊಳೆ ಪಶುವೈದ್ಯ ಡಾ.ಮುಜೀಬ್ ರೆಹಮಾನ್ರನ್ನು ಕರೆಸಿ ಚಿಕಿತ್ಸೆ ಕೊಡಿಸಿದ್ದರು.
ಆದರೆ, ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಮಧ್ಯಾಹ್ನದ ವೇಳೆಗೆ ಅಸುನೀಗಿದೆ. ಸಂಜೆ ವೇಳೆಗೆ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಆನೆಯ ಸಾವಿಗೆ ಕಲುಷಿತ ನೀರು ಸೇವನೆ ಹಾಗೂ ಆಹಾರ ಕೊರತೆಯಿಂದ ಡೀ ಹೈಡ್ರೇಷನ್ನಿಂದ ಬಳಲುತ್ತಿರಬಹುದೆಂದು ಶಂಕಿಸಲಾಗಿದೆ. ಆದರೆ, ನಿಖರವಾದ ಕಾರಣ ಶವ ಪರೀಕ್ಷೆ ವರದಿ ಬಂದ ನಂತರವೇ ಗೊತ್ತಾಗಲಿದೆ ಎಂದು ಡಿಸಿಎಫ್ ವಿಜಯಕುಮಾರ್ ತಿಳಿಸಿದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.