ಮೊದಲ ಹಂತದ ಪಲ್ಸ್‌ ಪೋಲಿಯೋ ಯಶಸ್ವಿ


Team Udayavani, Jan 29, 2018, 12:52 PM IST

m4-modala.jpg

ಮೈಸೂರು: ಪೋಲಿಯೋ ಮುಕ್ತ ರಾಷ್ಟ್ರವನ್ನಾಗಿಸುವ ಉದ್ದೇಶದಿಂದ ನಡೆಸುವ ಮೊದಲ ಹಂತದ ಪಲ್ಸ್‌ ಪೋಲಿಯೋ ಮೊದಲ ಹಂತದ ಕಾರ್ಯಕ್ರಮವನ್ನು ಜಿಲ್ಲಾಡಳಿತದ ವತಿಯಿಂದ ಭಾನುವಾರ ಯಶಸ್ವಿಯಾಗಿ ನಡೆಸಲಾಯಿತು.

ಮೈಸೂರು ನಗರ ಹಾಗೂ ಜಿಲ್ಲೆಯ ವಿವಿಧ ಕಡೆಗಳಲ್ಲಿ ನಡೆದ ಪಲ್ಸ್‌ ಪೋಲಿಯೋ ಕಾರ್ಯಕ್ರಮಕ್ಕೆ ಶಾಸಕ ಎಂ.ಕೆ.ಸೋಮಶೇಖರ್‌ ಅವರು ಜಯನಗರದ ಆರೋಗ್ಯ ಕೇಂದ್ರದಲ್ಲಿ ಚಾಲನೆ ನೀಡಿದರು. ಮೂರು ದಿನಗಳ ಪಲ್ಸ್‌ ಪೋಲಿಯೋ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಜಿಲ್ಲೆಯಲ್ಲಿರುವ ಐದು ವರ್ಷದೊಳಗಿನ 2,63,480 ಮಕ್ಕಳಿಗೆ ಲಸಿಕೆ ಹಾಕಬೇಕೆಂಬ ಗುರಿ ಹೊಂದಿದೆ.

ಇದಕ್ಕಾಗಿ ನಗರದಲ್ಲಿನ 402 ಸೆಂಟರ್‌ಗಳು ಸೇರಿದಂತೆ ಜಿಲ್ಲೆಯಲ್ಲಿ 1,186 ಪಲ್ಸ್‌ ಪೋಲಿಯೋ ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದ್ದು, 27 ಮೊಬೈಲ್‌ ಯೂನಿಟ್‌ಗಳನ್ನು ಸಹ ಆರಂಭಿಸಲಾಗಿದೆ. ಪಲ್ಸ್‌ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಸಲುವಾಗಿ ಆರೋಗ್ಯ ಇಲಾಖೆ ಸಿಬ್ಬಂದಿ ಜತೆಗೆ 40 ಸ್ವಯಂಸೇವಕರು ಕೈಜೋಡಿಸಿದ್ದಾರೆ.

ಭಾರತವೂ 2014ರಲ್ಲಿ ಪೋಲಿಯೋ ಮುಕ್ತ ರಾಷ್ಟ್ರವೆಂದು ವಿಶ್ವ ಆರೋಗ್ಯ ಸಂಸ್ಥೆಯಿಂದ ಮನ್ನಣೆ ಪಡೆದಿದ್ದು, ಮುಂದಿನ ವರ್ಷಗಳಲ್ಲೂ ಇದೇ ಹೆಸರನ್ನು ಉಳಿಸಿಕೊಳ್ಳವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಪ್ರಯತ್ನಕೈಗೊಂಡಿದೆ.

ಹುಣಸೂರಿನಲ್ಲಿ ಶೇ.97 ಗುರಿ ಸಾಧನೆ
ಹುಣಸೂರು:
ತಾಲೂಕಾದ್ಯಂತ ಭಾನುವಾರದಂದು ನಡೆದ ಮೊದಲ ಹಂತದ ಪಲ್ಸ್‌ ಪೊಲೀಯೋ ಕಾರ್ಯಕ್ರಮ ಯಶಸ್ವಿಯಾಗಿದ್ದು, ಶೇ 97 ರಷ್ಟು ಗುರಿ ಸಾಧಿಸಲಾಗಿದೆ. ತಾಲೂಕಿನಲ್ಲಿ ಒಟ್ಟು 5 ವರ್ಷದ 23.023 ಮಕ್ಕಳ ಪೈಕಿ 22.308 ಮಕ್ಕಳಿಗೆ ಲಸಿಕೆ ಹಾಕಲಾಗಿದೆ. ಒಟ್ಟು 213 ಬೂತ್‌ಗಳನ್ನು ತೆರೆದಿದ್ದು, ಆರೋಗ್ಯ-ಆಶಾ,ಅಂಗನವಾಡಿ ಕಾರ್ಯಕರ್ತರು, ಸ್ವಯಂಸೇವಕರು ಸೇರಿದಂತೆ 852 ಮಂದಿ ಸಿಬ್ಬಂದಿಗಳು ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇನ್ನುಳಿದ ಮಕ್ಕಳಿಗೆ ಕಾರ್ಯಕರ್ತರು ಇನ್ನು ಎರಡು ದಿನ ಮನೆ-ಮನೆಗೆ ತೆರಳಿ ಲಸಿಕೆ ಹಾಕುವರೆಂದು ತಾಲೂಕು ಆರೋಗ್ಯಾಧಿಕಾರಿ ಡಾ.ದೇವತಾಲಕ್ಷಿ ತಿಳಿಸಿದರು. ಭಾನುವಾರ ನಡೆದ ಬಾಚಳ್ಳಿ ಜಾತ್ರೆಯಲ್ಲಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಮಹದೇವ್‌ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಯಿತು.

ತಾಪಂ ಅಧ್ಯಕ್ಷರಿಂದ ಉದ್ಘಾಟನೆ: ಹುಣಸೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ತಾಪಂ ಅಧ್ಯಕ್ಷೆ ಪದ್ಮಮ್ಮ ಬಸವರಾಜು ಉದ್ಘಾಟಿಸಿದರು. 

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.