ದಲಿತರಿಗೆ ಮೀಸಲಿಟ್ಟ ಹಣ ಇತರೆ ಯೋಜನೆಗೆ ಬಳಕೆ


Team Udayavani, Apr 17, 2018, 12:49 PM IST

m6-dalita.jpg

ಹುಣಸೂರು: ಕಳೆದ 5 ವರ್ಷಗಳಿಂದ ದಲಿತರ ಉದ್ಧಾರಕ್ಕಾಗಿ 84 ಸಾವಿರ ಕೋಟಿ ರೂ. ಮೀಸಲಿಟ್ಟು, ಯೋಜನೆ ಜಾರಿಗೊಳಿಸದ ಅಧಿಕಾರಿಗಳನ್ನು ಜೈಲಿಗಟ್ಟುತ್ತೇನೆಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಆ ಹಣವನ್ನು ಇತರೆ ಯೋಜನೆಗೆ ಬಳಸಿದ್ದಾರೆ ಎಂದು ಜೆಡಿಎಸ್‌ ಅಭ್ಯರ್ಥಿ, ಮಾಜಿ ಸಂಸದ ಎಚ್‌.ವಿಶ್ವನಾಥ್‌ ಆರೋಪಿಸಿದರು.

ನಗರದ ಆದಿಚುಂಚನಗಿರಿ ಸಮುದಾಯ ಭವನದ ಆವರಣದಲ್ಲಿ ಅಂಬೇಡ್ಕರ್‌ ಹಾಗೂ ಬಾಬು ಜಗಜೀವನರಾಂ ಜಯಂತಿ ಅಂಗವಾಗಿ ಜೆಡಿಎಸ್‌ನಿಂದ ನಡೆದ ದಲಿತರ ಜಾಗೃತಿ ಸಮಾವೇಶದಲ್ಲಿ ಮಾತನಾಡಿ, ಅಂಬೇಡ್ಕರ್‌ ಜಗತ್ತಿನ ಮೇಧಾವಿ. ದೇಶಕ್ಕೆ ಸಾರ್ವಕಾಲಿಕ ಸಂವಿಧಾನ ನೀಡಿದ ಮೇರುಪ್ರತಿಭೆ. ಈ ಸಂವಿಧಾನವೇ ಭಾರತೀಯರ ಹೃದಯವಾಗಿದೆ ಎಂದು ಹೇಳಿದರು.

ಬಾಬು ಜಗಜೀವನರಾಂ ಗರೀಬಿ ಹಟಾವೋ ಮೂಲಕ ಬಡವರ ಕಲ್ಯಾಣ ಯೋಜನೆ ಜಾರಿಗೊಳಿಸಿದ್ದರು. ಅದೇರೀತಿ ಸಂವಿಧಾನದ ಆಶಯದಂತೆ ದೇಶ ಮೆಚ್ಚುವ ಕೆಲಸ ಮಾಡಿದ್ದ ಅರಸರ ಆದರ್ಶದಂತೆ ಆಡಳಿತ ನಡೆಸುತ್ತೇನೆ ಎಂದಿದ್ದ ಸಿದ್ದರಾಮಯ್ಯ ಮಾಡಿದ್ದು ಕೇವಲ ಲೂಟಿ ಮತ್ತು ಭ್ರಷ್ಟಾಚಾರದ ಆಡಳಿತ ಎಂದು ಆರೋಪಿಸಿದರು. 

ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣ ಖರ್ಚು ಮಾಡದ ಅಧಿಕಾರಿಗಳನ್ನು ಜೈಲಿಗಟ್ಟುತ್ತೇನೆಂದು ಹೇಳಿ ಇದೀಗ ಅದೇ ಹಣವನ್ನು ನೀರಾವರಿ,ರಸ್ತೆ, ಗ್ರಾಮೀಣಾಭಿವೃದ್ಧಿಗೆ ಖರ್ಚು ಮಾಡಿದ್ದಾರೆ. ಇನ್ನು ಈ ಹಣದಿಂದ 2 ಸಾವಿರ ಕೋಟಿ ರೂ. ತೆಗೆದು ರೈತರ ಸಾಲಮನ್ನಾ ವಿನಿಯೋಗಿಸಿರುವುದು ಅವರ ಆಡಳಿತ ವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ.

ಇನ್ನು ತಾಲೂಕಿನಲ್ಲಿ ಅಭಿವೃದ್ಧಿ ಮಾಡಿದ್ದೇನೆನ್ನುವ ಶಾಸಕ ಎಚ್‌.ಪಿ.ಮಂಜುನಾಥ್‌ ತಾಲೂಕಿನಲ್ಲಿ ಸಾಮಾಜಿಕ ಸ್ವಾಸ್ಥ್ಯವನ್ನೇ ಕೆಡಿಸಿದ್ದಾರೆ. ಅಭಿವೃದ್ಧಿಯ ಹೆಸರಲ್ಲಿ ಲೂಟಿ ಮಾಡಿರುವ ಹಣ ಜನರದ್ದದಾಗಿದೆ. ಜನರ ಹಣ ತಿಂದವರು ಉದ್ಧಾರವಾಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಗತಿಪರ ಚಿಂತಕ ಗೋವಿಂದಯ್ಯ ಮಾತನಾಡಿದರು. ನಗರಸಭಾಧ್ಯಕ್ಷ ಎಂ.ಶಿವಕುಮಾರ್‌, ಶಿವಶೇಖರ್‌, ಬಿಳಿಕೆರೆ ರಾಜು, ಹರಿಹರಾನಂದಸ್ವಾಮಿ, ನಿಂಗರಾಜಮಲ್ಲಾಡಿ, ಮುಖಂಡರಾದ ಗಣೇಶ್‌ಕುಮಾರಸ್ವಾಮಿ, ಶಂಕರ್‌, ಲ್ಯಾಂಪ್ಸ್‌ ಕೃಷ್ಣಯ್ಯ ಮಾತನಾಡಿದರು.

ಜಿಪಂ ಸದಸ್ಯ ಎಂ.ಬಿ.ಸುರೇಂದ್ರ, ಮುಖಂಡರಾದ ಡಿ.ಕೆ.ಕುನ್ನೇಗೌಡ, ಜೆಡಿಎಸ್‌ ತಾಲೂಕು ಅಧ್ಯಕ್ಷ ಹರಳಹಳ್ಳಿ ಮಾದೇಗೌಡ, ಶಿವಣ್ಣ, ತಿಮ್ಮನಾಯ್ಕ, ಅಣ್ಣಯ್ಯನಾಯ್ಕ, ಯುವ ಅಧ್ಯಕ್ಷ ಲೋಕೇಶ್‌, ಪುಟ್ಟರಾಜು ಇದ್ದರು. 

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur-1

Hunsur: ತಂಬಾಕು ಬೆಳೆಗಾರರ ರಕ್ಷಣೆಗೆ ಬದ್ದ: ಸಂಸದ ಯದುವೀರ್ ಒಡೆಯರ್

ಮುಡಾ ಅಧ್ಯಕ್ಷ ಕೆ.ಮರಿಗೌಡ ತಲೆದಂಡ?

MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.