ಅರಮನೆ ವೇದಿಕೆಯಲ್ಲಿ ಹರಿಯಲಿದೆ ಸಂಗೀತ ಸುಧೆ


Team Udayavani, Oct 8, 2018, 11:28 AM IST

m2-aramane.jpg

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಪ್ರಯುಕ್ತ ಮೈಸೂರು ಅರಮನೆ ವೇದಿಕೆಯಲ್ಲಿ ಖ್ಯಾತ ಕಲಾವಿದರು ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅ.10ರಂದು ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟನೆ ಮಾಡುವುದರೊಂದಿಗೆ 2018ನೇ ಸಾಲಿನ ಸಂಗೀತ ವಿದ್ವಾನ್‌ ಪ್ರಶಸ್ತಿಯನ್ನು ಖ್ಯಾತ ಸರೋದ್‌ ವಾದಕ ಮೈಸೂರಿನ ಪಂಡಿತ್‌ ರಾಜೀವ್‌ ತಾರಾನಾಥ್‌ ಅವರಿಗೆ ಪ್ರದಾನ ಮಾಡಲಿದ್ದಾರೆ.

ನಂತರ 7 ಗಂಟೆಗೆ ಬೆಂಗಳೂರಿನ ಡಾ.ವೀಣಾಮೂರ್ತಿ ವಿಜಯ್‌ ಮತ್ತು ತಂಡದಿಂದ ಗಜ ಗೌರವ ನೃತ್ಯರೂಪಕ, ರಾತ್ರಿ 8ರಿಂದ 10 ಗಂಟೆವರೆಗೆ ಜಾನಪದ ಜಾತ್ರೆ ನಡೆಯಲಿದೆ. ಅ.11 ರಂದು ಸಂಜೆ 6 ಗಂಟೆಗೆ ವಿದ್ವಾನ್‌ ಎ.ವಿ.ದತ್ತಾತ್ರೇಯ ಅವರಿಂದ ಶಾಸ್ತ್ರೀಯ ಮ್ಯಾಂಡೋಲಿನ್‌ ವಾದನ, ಸಂಜೆ 6.45ರಿಂದ ಮೈಸೂರಿನ ಸಮೀರ್‌ ರಾವ್‌ ಮತ್ತು ವಂಶಿಧರ್‌ ಅವರಿಂದ ಕೊಳಲು ವಾದನ ಜುಗಲ್‌ ಬಂದಿ, ರಾತ್ರಿ 7.30ರಿಂದ ಬೆಂಗಳೂರಿನ ನಾಗಚಂದ್ರಿಕಾ ಭಟ್‌ ಮತ್ತು ರವಿ ಮುರೂರು ತಂಡದಿಂದ ಗೀತಗಾಯನ ಜುಗಲ್‌ ಬಂದಿ, ರಾತ್ರಿ 8.30ರಿಂದ ಪ್ರಸಿದ್ಧ ನೃತ್ಯ ಕಲಾವಿದೆ ಲಕ್ಷ್ಮೀ ಗೋಪಾಲಸ್ವಾಮಿ ಅವರಿಂದ ನೃತ್ಯ ವೈಭವ.

ಅ.12 ರಂದು ಸಂಜೆ 6 ಗಂಟೆಗೆ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ, ಕೇರಳ ತಂಡದಿಂದ ಮೋಹಿನಿ ಆಟ್ಟಂ, 6.30ಕ್ಕೆ ರಾಯಚೂರಿನ ಪಂಡಿತ್‌ ನರಸಿಂಹಲು ವಡವಾಟಿ ಅವರಿಂದ ಕ್ಲಾರಿಯೋನೆಟ್‌, ರಾತ್ರಿ 7.30ಕ್ಕೆ ಬೆಂಗಳೂರಿನ ಮಂಜುಳಾ ಪರಮೇಶ್‌ ಅವರಿಂದ ನೃತ್ಯ ರೂಪಕ, ರಾತ್ರಿ  8.30ಕ್ಕೆ ಸಂಗೀತ ನಿರ್ದೇಶಕ ಮನೋಮೂರ್ತಿ ಅವರಿಂದ ಸಂಗೀತ ಸಂಭ್ರಮ. 

ಅ.13ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ಕಾಂಚನ ಸಹೋದರಿಯರ ಶ್ರೀರಂಜಿನಿ-ಶೃತಿ ರಂಜಿನಿ ತಂಡದಿಂದ ಕರ್ನಾಟಕ ಸಂಗೀತ ದ್ವಂದ್ವ ಗಾಯನ, 6.45ಕ್ಕೆ ಮೈಸೂರಿನ ಶಕ್ತಿಧಾಮ ತಂಡದಿಂದ ನೃತ್ಯರೂಪಕ, ರಾತ್ರಿ 7.15ರಿಂದ ಗ್ರ್ಯಾಮಿ ಪ್ರಶಸ್ತಿ ವಿಜೇತ ಬೆಂಗಳೂರಿನ ರಿಕಿಕೇಜ್‌ ಅವರಿಂದ ಸಂಗೀತ ಸಂಜೆ, ರಾತ್ರಿ 8.30ಕ್ಕೆ ಚೆನ್ನೈನ ಲಾಲ್‌ಗ‌ುಡಿ ಕೃಷ್ಣನ್‌-ಲಾಲ್‌ಗ‌ುಡಿ ವಿಜಯಲಕ್ಷ್ಮೀ ಅವರಿಂದ ಕರ್ನಾಟಿಕ್‌ ವಯೋಲಿನ್‌ ವಾದನ.

ಅ.14 ರಂದು ಸಂಜೆ 6ರಿಂದ ರಾತ್ರಿ 8 ಗಂಟೆವರೆಗೆ ಪೊಲೀಸ್‌ ಬ್ಯಾಂಡ್‌, ರಾತ್ರಿ 8 ಗಂಟೆಗೆ ಮೈಸೂರಿನ ನಿಮಿಷಾಂಭ ನೃತ್ಯಶಾಲೆಯ ಶ್ರೀಧರ್‌ ಜೈನ್‌ ಮತ್ತು ತಂಡದಿಂದ ನೃತ್ಯರೂಪಕ, ರಾತ್ರಿ 8.30ರಿಂದ 10 ಗಂಟೆವರೆಗೆ ಖ್ಯಾತ ಗಾಯನ ಡಾ.ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಅವರಿಂದ ಕನ್ನಡ ರಸಮಂಜರಿ.
ಅ.15 ರಂದು ಸಂಜೆ 6 ಗಂಟೆಗೆ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ ಅಂಡಮಾನ್‌-ನಿಕೋಬಾರ್‌ ತಂಡದಿಂದ ನಿಕೋಬಾರಿ ನೃತ್ಯ, ಸಂಜೆ 6.30ಕ್ಕೆ ರಂಗಗೀತೆಗಳು,ರಾತ್ರಿ 7.30ಕ್ಕೆ ಬೆಂಗಳೂರಿನ ಸೂರ್ಯ ಕಲಾವಿದರಿಂದ ಕರ್ನಾಟಕ ದರ್ಶನ ನೃತ್ಯರೂಪಕ, ರಾತ್ರಿ 8.30ಕ್ಕೆ ಬೆಂಗಳೂರಿನ ವಿದ್ಯಾಭೂಷಣ ಅವರಿಂದ ಹರಿದಾಸ ಕೀರ್ತನೆಗಳ ಗಾಯನ ರಾಗ-ತಾಳ-ಮೇಳ.

ಅ.16 ರಂದು ಸಂಜೆ 6ಕ್ಕೆ ಸುಪ್ರಿಯ ರಘುನಂದನ್‌, ರವೀಂದ್ರ ಸೊರಗಾವಿ, ಪಂಚಮ್‌ ಹಳಿಬಂಡಿ ಮತ್ತು ತಂಡದಿಂದ ಭಾವ ಬೆಳಗು ಗೀತ ನೃತ್ಯೋತ್ಸವ,ರಾತ್ರಿ 7.30ಕ್ಕೆ ಕದ್ರಿ ಗೋಪಾಲನಾಥ್‌- ಪಂಡಿತ್‌ ರೋನು ಮಜುಂದಾರ್‌ ಅವರಿಂದ ಸ್ಯಾಕೊಫೋನ್‌ ಕೊಳಲು ಜುಗಲ್‌ ಬಂದಿ, ರಾತ್ರಿ 8.30ಕ್ಕೆ ಮುಂಬೈನ ಖ್ಯಾತ ಗಾಯಕಿ ಅನುರಾಧಾ ಪೊಡ್ವಾಲ್‌ ಅವರಿಂದ ಭಜನ್‌ ಗಾಯನ.

ಅ.17ರಂದು ಸಂಜೆ 6ಕ್ಕೆ ದಕ್ಷಿಣವಲಯ ಸಾಂಸ್ಕೃತಿಕ ಕೇಂದ್ರ ಮಧ್ಯಪ್ರದೇಶ ತಂಡದಿಂದ ಬದಾಯಿ -ಬರೇಡಿ ನೃತ್ಯ,6.30ಕ್ಕೆ ನಾಗಪುರದ ಮುಕ್ತಿಯಾರ್‌ ಅಲಿಖಾನ್‌ ಅವರಿಂದ ಸೂಫಿ ಸಂಗೀತ, ರಾತ್ರಿ 7.30ಕ್ಕೆ ಬೆಂಗಳೂರಿನ ನಿರೂಪಮಾ ರಾಜೇಂದ್ರ ಮತ್ತು ತಂಡದಿಂದ ನೃತ್ಯ ಸಂಭ್ರಮ, ರಾತ್ರಿ 8.30ಕ್ಕೆ ಬೆಂಗಳೂರಿನ ಆಯಣ ನೃತ್ಯತಂಡದಿಂದ ದಕ್ಷಿಣ ಭಾರತ ನೃತ್ಯ ವೈಭವ ಕಾರ್ಯಕ್ರಮ ನಡೆಯಲಿದೆ. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.