Hunsur; 3.5 ಲಕ್ಷ ರೂನ ಆಭರಣವಿದ್ದ ಬ್ಯಾಗ್ ಮಾಲಕರಿಗೊಪ್ಪಿಸಿದ ಪೊಲೀಸರು

ಆಟೋದಲ್ಲಿ ಬಿಟ್ಟು ಹೋಗಿದ್ದ ಬ್ಯಾಗ್

Team Udayavani, Apr 24, 2023, 10:29 PM IST

1-sdsads

ಹುಣಸೂರು: ಅಪರಿಚಿತ ಆಟೋದಲ್ಲಿ ಬಿಟ್ಟು ಹೋಗಿದ್ದ ಚಿನ್ನಾಭರಣವಿದ್ದ ಬ್ಯಾಗನ್ನು ಪತ್ತೆಮಾಡಿ 3.5 ಲಕ್ಷರೂ ಬೆಲೆಬಾಳುವ ಆಭರಣವನ್ನು ಕಳೆದುಕೊಂಡಿದ್ದ ಮಾಲಿಕರಿಗೆ ನಗರ ಠಾಣೆ ಪೊಲೀಸರು ಒಪ್ಪಿಸಿದ್ದಾರೆ.

ಹುಣಸೂರು ನಗರದ ಶಬ್ಬೀರ್‌ನಗರದ ಸಫೀರ್ ಅಹಮದ್, ರಜಿಯಾ ಬೇಗಂ ಚಿನ್ನಾಭರಣದ ಬ್ಯಾಗ್ ಕಳೆದುಕೊಂಡಿದ್ದವರು.

ಶಬ್ಬೀರ್‌ನಗರದ ಸಫೀರ್ ಅಹಮದ್ ಮತ್ತವರ ಪತ್ನಿ ರಜಿಯಾಬೇಗಂ ತಮ್ಮ ಮನೆಯ ಬಳಿಯಿಂದ ಶನಿವಾರ ಸಂಜೆ 6 ಗಂಟೆ ವೇಳೆಯಲ್ಲಿ ಆಟೋ ಹತ್ತಿ ನಗರದ ಬಸ್ ನಿಲ್ದಾಣಕ್ಕೆ ಬಂದು ಕೆ.ಆರ್.ನಗರ ಕಡೆಗೆ ತೆರಳುವ ಬಸ್ ಹತ್ತಿ ಹಾಸನದತ್ತ ಪ್ರಯಾಣ ಬೆಳೆಸಿದ್ದರು, ಹಾಸನಕ್ಕೆ ಹೋಗುವ ವೇಳೆ ಚಿನ್ನಾಭರಣವಿದ್ದ ಬ್ಯಾಕ್ ಕಾಣೆಯಾಗಿರುವುದು ಪತ್ತೆಯಾಗಿದೆ. ತಕ್ಷಣವೇ ವಾಪಸ್ ಮರಳಿ ಮನೆಯಲ್ಲಿ ಹುಡುಕಾಡಿ ನಂತರ ರಾತ್ರಿ ಠಾಣೆಗೆ ಬಂದು ರಾತ್ರಿ 10 ರ ವೇಳೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ.

ಆಟೋ ಪತ್ತೆಗೆ ಕ್ರಮ
ದೂರು ದಾಖಲಾಗುತ್ತಿದ್ದಂತೆ ಕಾರ್ಯ ಪ್ರವೃತ್ತರಾದ ಇನ್ಸ್ಪೆಕ್ಟರ್ ದೇವೇಂದ್ರರ ನೇತೃತ್ವದಲ್ಲಿ ಎ.ಎಸ್.ಐ.ರವಿ ಹಾಗೂ ಸಿಬ್ಬಂದಿಗಳು ನಗರದ ವಿವಿಧ ಆಟೋ ನಿಲ್ದಾಣ ಮತ್ತಿತರ ಕಡೆಗಳಲ್ಲಿ ಹುಡುಕಾಟ ನಡೆಸಿ, ಬಸ್ ನಿಲ್ದಾಣದ ರಸ್ತೆ ಬದಿಯ ಅಂಗಡಿಗಳ ಸಿ.ಸಿ.ಕ್ಯಾಮರಾದಲ್ಲಿ ದಾಖಲಾಗಿದ್ದ ಆಟೋವನ್ನು ಕೊನೆಗೂ ಲಾಲ್‌ಬಂದ್ ಬೀದಿಯ ಮನೆ ಬಳಿಯಲ್ಲಿ ನಿಂತಿರುವುದು ಪತ್ತೆಯಾಯಿತು. ಆಟೋ ಚಾಲಕ ಮಹಮದ್ ಇಲಿಯಾಸ್ ಚಿನ್ನಾಭರಣವಿದ್ದ ಬ್ಯಾಂಗ್‌ನ್ನು ಗಮನಿಸದೆ ತನ್ನ ಆಟೋವನ್ನು ಮನೆ ಮುಂದೆ ನಿಲ್ಲಿಸಿದ್ದರು. ಆಟೋದಲ್ಲಿ ಹುಡುಕಾಟ ನಡೆಸಿದ ವೇಳೆ ಚಿನ್ನಾಭರಣ ಇದ್ದ ಬ್ಯಾಗ್ ಸೀಟಿನ ಹಿಂಬದಿಯಲ್ಲಿ ಪತ್ತೆಯಾಯಿತು.

ಆಟೋಸೀಟಿನ ಹಿಂಬದಿಯಲ್ಲಿ ಇಟ್ಟು ಪ್ರಯಾಣಿಕ ಸಫೀರ್ ಅಹಮದ್ ಇಳಿದು ಬಸ್ ಹತ್ತಿದ್ದರು. ಚಾಲಕ ಸಹ ಗಮನಿಸದೆ ಮನೆಗೆ ತೆರಳಿದ್ದರು. ಇನ್ಸ್ಪೆಕ್ಟರ್ ದೇವೇಂದ್ರರವರು ಚಿನ್ನಾಭರಣವಿದ್ದ ಬ್ಯಾಗನ್ನು ಮಾಲಿಕ ಸಫೀರ್ ಅಹಮದ್‌ರಿಗೆ ಒಪ್ಪಿಸಿದರು. ಕಳೆದು ಹೋಗಿದ್ದ ೬೫ ಗ್ರಾಂ.ಚಿನ್ನಾಭರಣ ಸಿಕ್ಕ ಸಂಭ್ರಮದಲ್ಲಿ ಸಫೀರ್ ಅಹಮದ್ ಪೊಲೀಸರು ಹಾಗೂ ಆಟೋ ಚಾಲಕನಿಗೆ ಧನ್ಯವಾದ ಹೇಳಿ ಮನೆಯತ್ತ ತೆರಳಿದರೆ, ಮಾಲಿಕರಿಗೆ ಆಭರಣವನ್ನು ಮರಳಿಸಿದ ಸಂತಸದಲ್ಲಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.