ಕೋಮುವಾದಿ, ಜಾತ್ಯತೀತ ಶಕ್ತಿಗಳ ಮಧ್ಯೆ ಹೋರಾಟ


Team Udayavani, Mar 27, 2019, 12:59 PM IST

m1-komuvadi

ತಿ.ನರಸೀಪುರ: ಲೋಕಸಭಾ ಚುನಾವಣೆಯು ಜಾತ್ಯತೀತ ಹಾಗೂ ಕೋಮುವಾದಿ ಶಕ್ತಿಗಳ ನಡುವೆ ನಡೆಯುತ್ತಿರುವ ಹೋರಾಟವಾಗಿದ್ದು, ಜಾತ್ಯತೀತ ಶಕ್ತಿ ಗೆಲ್ಲಿಸಲು ಕಾಂಗ್ರೆಸ್‌ ಬೆಂಬಲಿಸುವಂತೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆರ್‌. ಧ್ರುವನಾರಾಯಣ್‌ ಮನವಿ ಮಾಡಿದರು.

ತಾಲೂಕಿನ ತಲಕಾಡು ನಾಯಕರ ಸಮುದಾಯ ಭವನದಲ್ಲಿ ನಡೆದ ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಕೇಂದ್ರದಲ್ಲಿದ್ದ ಯುಪಿಎ ಸರ್ಕಾರ 10 ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿತ್ತು. ನಂತರ ಬಂದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಭಿವೃದ್ಧಿಗೆ ಆದ್ಯತೆ ನೀಡಲಿಲ್ಲ.

ಉದ್ಯೋಗದ ಭರವಸೆ ಹುಸಿಯಾಗಿದೆ. ಸರ್ಜಿಕಲ್‌ ಸ್ಟ್ರೈಕ್‌ ನೆಪವಿಟ್ಟು ರಾಜಕೀಯ ಮಾಡುತ್ತಿದ್ದಾರೆ. ವಿದೇಶದಲ್ಲಿನ ಕಪ್ಪು ಹಣ ತಂದು ಬಡವರ ಖಾತೆಗಳಿಗೆ ಹಣ ಹಾಕುವುದಾಗಿ ಹೇಳಿ ಜನರನ್ನು ವಂಚಿಸಿದ್ದಾರೆ. ಇಂತಹ ಸರ್ಕಾರವನ್ನು ದೂರಡಲು ಮತ್ತೆ ಕಾಂಗ್ರೆಸ್‌ಗೆ ಅಧಿಕಾರ ನೀಡಬೇಕು ಎಂದು ಕೋರಿದರು.

ಚುನಾವಣಾ ಗಿಮಿಕ್‌: ಐದು ವರ್ಷ ಆಡಳಿತ ನಡೆಸಿದ ಮೋದಿಯವರು ಚುನಾವಣೆ ಸಮೀಪಿಸುತ್ತಿದ್ದಂತೆ ರೈತರ ಬ್ಯಾಂಕ್‌ ಖಾತೆಗಳಿಗೆ 6 ಸಾವಿರ ರೂ. ನೀಡುವುದಾಗಿ ಘೋಷಿಸಿದ್ದಾರೆ. ನಾಲ್ಕು ವರ್ಷಗಳಲ್ಲಿ ಈ ಬಗ್ಗೆ ಆಲೋಚಿಸಿದ ಮೋದಿ ಈಗ ಮಾಡುತ್ತಿದ್ದಾರೆ. ಇದು ಚುನಾವಣಾ ಗಿಮಿಕ್‌, ಇದರ‌ ಬದಲು ರೈತರ ಸಾಲಮನ್ನಾ ಮಾಡಿದ್ದರೆ ಎಷ್ಟೋ ರೈತರ ಬದುಕಿಗೆ ಅನುಕೂಲವಾಗುತ್ತಿತ್ತು ಎಂದರು.

ಪರಿಷತ್‌ ಸದಸ್ಯ ಧರ್ಮಸೇನಾ, ಕೋಟೆ ಶಾಸಕ ಅನಿಲ್‌ ಚಿಕ್ಕಮಾದು ಮಾತನಾಡಿದರು. ಮಾಜಿ ಸಂಸದ ಎಂ. ಶಿವಣ್ಣ, ಮಾಜಿ ಶಾಸಕ ಕೃಷ್ಣಪ್ಪ, ಬಾಲರಾಜು ಜಿಪಂ ಸದಸ್ಯ ಮಂಜುನಾಥ, ತಾಪಂ ಅಧ್ಯಕ್ಷ ಚೆಲುವರಾಜು, ಸದಸ್ಯ ಕುಕ್ಕೂರು ಗಣೇಶ್‌, ಸುಧಾ ಮಹದೇವಯ್ಯ, ಮುಖಂಡರಾದ ವಜ್ರೆಗೌಡ, ಕೆ.ಸಿ. ಬಲರಾಮ, ಹೇಳವರಹುಂಡಿ ಸೋಮು ಇತರರಿದ್ದರು.

ಮಹದೇವಪ್ಪ ಗೈರು:
ತಲಕಾಡಿನಲ್ಲಿ ನಡೆದ ಕಾಂಗ್ರೆಸ್‌ ಪ್ರಚಾರ ಸಭೆಗೆ ಮಾಜಿ ಸಚಿವ ಡಾ. ಎಚ್‌.ಸಿ ಮಹದೇವಪ್ಪ ಗೈರು ಹಾಜರಾಗಿರುವುದು ಎದ್ದು ಕಾಣುತ್ತಿತ್ತು. ಈ ಹಿಂದೆ ನಡೆದ ಜನಸಂಪರ್ಕ ಅಭಿಯಾನದಲ್ಲಿ ಗೈರಾಗಿದ್ದ ಅವರು ಇಂದಿನ ಪ್ರಚಾರ ಸಭೆಗೆ ಬರುತ್ತಾರೆಂಬ ಮಾತಿತ್ತು. ಆದರೆ, ಗೈರಾಗಿರುವುದು ಹಲವು ಚರ್ಚೆಗೆ ಗ್ರಾಸವಾಗಿತ್ತು.

ಬೆಲೆ ಏರಿಸಿದ್ದೇ ಮೋದಿ ಸಾಧನೆ: ವರುಣಾ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ಯುಪಿಎ ಸರ್ಕಾರದ ಅವಧಿಯಲ್ಲಿ ದೇಶ ವಿಶ್ವದಲ್ಲಿ 65ನೇ ಸ್ಥಾನದಲ್ಲಿತ್ತು. ಬಿಜೆಪಿ ಸರ್ಕಾರ ಬಂದ ವೇಳೆ 111ನೇ ಸ್ಥಾನಕ್ಕೆ ಇಳಿದಿದೆ. ಇದು ಪ್ರಧಾನಿ ನರೇಂದ್ರ ಮೋದಿ ಸಾಧನೆ. ಪೆಟ್ರೋಲ್‌, ಡಿಸೇಲ್‌ ಅಡುಗೆ ಅನಿಲ ಬೆಲೆ ಏರಿಸಿದ್ದೇ ಇವರ ಸಾಧನೆ. ಕಪ್ಪು ಹಣದ ತರುವ ಪರಿಕಲ್ಪನೆ ಬರಿ ಸುಳ್ಳಾಗಿದೆ. ರೈತರ ಸಾಲ ಮನ್ನಾ ಮಾಡಿಲ್ಲ. ಮೋದಿ ಬರೀ ಪ್ರಚಾರಕ್ಕಾಗಿ ಹಣ ಖರ್ಚು ಮಾಡಿದ್ದಾರೆ ಎಂದು ಕಿಡಿಕಾರಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.