ಮೈಸೂರಿನಲ್ಲಿ ನಡೆದ ಹನಿಟ್ರ್ಯಾಪ್‌ನಲ್ಲಿ ನಗರದ ಮೂವರ ಸೆರೆ


Team Udayavani, Mar 12, 2017, 11:33 AM IST

honey-trap.jpg

ಮೈಸೂರು: ಮೈಸೂರಿನಲ್ಲಿ ನಡೆದ ಹನಿ ಟ್ರ್ಯಾಪ್‌ ಪ್ರಕರಣವೊಂದರಲ್ಲಿ ಬೆಂಗಳೂರಿನ ಮೂವರು ಸೇರಿ ಒಟ್ಟು ಆರು ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಾಗಿರುವ ಲತೀಫ್(29), ಸಿ.ಪಿ.ನೌಶಾದ್‌(39) ಹಾಗೂ ರಶೀದ್‌(32) ಕೇರಳ ಮೂಲದವರಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿದ್ದರು. ಇವರೊಂದಿಗೆ ಚಿಕ್ಕಮಗಳೂರಿನ ಯೂಸೂಫ್(40), ಮೈಸೂರಿನ ಉದಯಗಿರಿ ನಿವಾಸಿ ಹೀನಾ(22) ಹಾಗೂ ಮಡಿಕೇರಿಯ ಅನಿತಾ(32) ಬಂಧನಕ್ಕೊಳ ಗಾಗಿದ್ದಾರೆ.ಇವರಿಂದ ಡಿವಿಡಿ, ಮೊಬೈಲ್‌ ಹಾಗೂ ಕಾರು ವಶಪಡಿಸಿಕೊಳ್ಳಲಾಗಿದೆ.

ಪ್ರಕರಣದ ಹಿನ್ನೆಲೆ: ಕೇರಳ ಮೂಲದ ಆಭರಣ ವ್ಯಾಪಾರಿ ಟಿ.ವಿ.ನಿರಝಾರ್‌ ಎಂಬು ವರು ಕೆಲಸದ ನಿಮಿತ್ತ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದರು. ನಿರಝಾರ್‌ ಹಿನ್ನೆಲೆ ತಿಳಿದಿದ್ದ ಆರೋಪಿಗಳಾದ ನೌಶಾದ್‌ ಹಾಗೂ ಶಾಯಿದ್‌ ವ್ಯಾಪಾರಿಯನ್ನು ಹನಿ ಟ್ರಾÂಪ್‌ ಮಾಡಲು ತೀರ್ಮಾನಿಸಿದ್ದರು. ಇದಕ್ಕಾಗಿ ಹೀನಾ ಹಾಗೂ ಅನಿತಾ ಎಂಬ ಯುವತಿಯರನ್ನು ಬಳಸಿಕೊಂಡಿದ್ದರು.

ಯುವತಿಯರು ನಿರಝಾರ್‌ ಅವರಿಗೆ ಅಪರಿಚಿತರಂತೆ ದೂರವಾಣಿ ಕರೆಮಾಡಿ, ಸ್ನೇಹ ಬೆಳಸಿಕೊಂಡಿದ್ದರು. ಇದಾದ ಬಳಿಕ ತಮ್ಮೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗುವಂತೆ ನಿರಝಾರ್‌ರನ್ನು ಪ್ರೇರೇಪಿಸಿದ ಅನಿತಾ ಹಾಗೂ ಹೀನಾ, ಲೈಂಗಿಕ ಕ್ರಿಯೆಯನ್ನು ಪೂರ್ವ ನಿಯೋಜನೆಯಂತೆ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದರು. ನಂತರ ದೃಶ್ಯಾವಳಿಗಳನ್ನು ಡಿವಿಡಿ ಮಾಡಿಕೊಂಡಿದ್ದಾರೆ.

ವಿಡಿಯೋವನ್ನು ನಿರಝಾರ್‌ಗೆ ತೋರಿಸಿ 25 ಲಕ್ಷ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದು, ಹಣ ನೀಡದಿದ್ದಲ್ಲಿ ಟಿವಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುವುದಾಗಿ ಮೊಬೈಲ್‌ ಮೂಲಕ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ ಈ ವಿಷಯವನ್ನು ಪೊಲೀಸರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿಯೂ ಬೆದರಿಕೆವೊಡ್ಡಿದ್ದ ಆರೋಪಿಗಳು, ಕಳೆದ ಕೆಲವು ದಿನ ಗಳಿಂದ ಹಣ ನೀಡುವಂತೆ ಮೇಲಿಂದ ಮೇಲೆ ಕರೆ ಮಾಡುತ್ತಿದ್ದರು.

ಆರೋಪಿಗಳ ಕಿರುಕುಳ ದಿಂದ ಆತಂಕಗೊಂಡ ನಿರಝಾರ್‌, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣದ ತೀವ್ರತೆಯನ್ನು ಅರಿತ ಪೊಲೀಸರು, ಇದನ್ನು ಸಿಸಿಬಿ ತನಿಖೆಗೆ ವಹಿಸಿದ್ದರು. ಇದಕ್ಕಾಗಿ ವಿಶೇಷ ತಂಡವನ್ನು ರಚಿಸಿಕೊಂಡ ಸಿಸಿಬಿ ಪೊಲೀಸರು, ಮಾ.9ರಂದು ನಗರದ ಹೈವೇ ವೃತ್ತದ ಸಮೀಪದಲ್ಲಿರುವ ಹೋಟೆಲ್‌ ಬಳಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರ ವಿಚಾರಣೆ ನಡೆಸಿದ ಸಂದರ್ಭ, ಆರೋಪಿಗಳ ವಿರುದ್ಧ ಈ ಹಿಂದೆಯೇ ಕೇರಳ ಮತ್ತು ಬೆಂಗಳೂರಿನಲ್ಲಿ ಕ್ರಿಮಿನಲ್‌ ಪ್ರಕರಣಗಳು ದಾಖಲಾಗಿರುವುದು ಗೊತ್ತಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಡಾ.ಸುಬ್ರಹ್ಮಣ್ಯೇಶ್ವರ ರಾವ್‌ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಡಿಸಿಪಿಗಳಾದ ಡಾ. ಎಚ್‌.ಟಿ.ಶೇಖರ್‌, ಎನ್‌.ರುದ್ರಮುನಿ, ಸಿಸಿಬಿ ಎಸಿಬಿ ಸಿ.ಗೋಪಾಲ್‌, ಇನ್ಸ್‌ಪೆಕ್ಟರ್‌ಗಳಾದ ಕೆ.ಸಿ.ಪ್ರಕಾಶ್‌, ಪ್ರಸನ್ನಕುಮಾರ್‌, ಪಿಎಸ್‌ಐ ಎಂ.ಜೆ.ಜಯಶೀಲನ್‌ ಇನ್ನಿತರರಿದ್ದರು.

ಟಾಪ್ ನ್ಯೂಸ್

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

Mysuru-Simhasana

Mysuru Dasara: ಖಾಸಗಿ ದರ್ಬಾರ್‌ಗೆ ಸ್ವರ್ಣ ಖಚಿತ ಸಿಂಹಾಸನ ಜೋಡಣೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

028

IPL players: ಐಪಿಎಲ್‌ ಆಟಗಾರರಿಗೆ ಬಂಪರ್‌ ಸಂಭಾವನೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

085

Puttur: ಕಾಂಗ್ರೆಸ್‌ ಕಾರ್ಯಕರ್ತನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.