ಮ್ಯಾನ್‌ಹೋಲ್‌ ಸ್ವಚ್ಛತೆಗೆ ಪೌರಕಾರ್ಮಿಕರ ಬಳಕೆ


Team Udayavani, Jul 22, 2019, 3:00 AM IST

man-hole

ಮೈಸೂರು: ಮಲ ಹೊರಿಸುವುದು, ಮಲ ಹೊರುವುದು ಶಿಕ್ಷಾರ್ಹ ಅಪರಾಧ ಎಂಬ ಸುಪ್ರೀಂ ಕೋರ್ಟಿನ ತೀರ್ಪಿದ್ದರೂ, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈ ಪದ್ಧತಿ ಇನ್ನೂ ಜೀವಂತವಾಗಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ.

ನಿರ್ಮೂಲನೆಗೆ ಮುಂದಾಗಿಲ್ಲ: ಸ್ವಚ್ಛನಗರಿ ಮೈಸೂರಿನಲ್ಲಿ ಮನುಷ್ಯರಿಂದ ಮ್ಯಾನ್‌ಹೋಲ್‌ ಶುಚಿಗೊಳಿಸುವ ಅಮಾನವೀಯ ಪ್ರಕರಣಗಳು ಮತ್ತೆ ಮತ್ತೆ ವರದಿಯಾಗುತ್ತಲೇ ಇವೆ. ಆದರೆ, ಇಂತಹ ಪ್ರಕರಣಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಜಿಲ್ಲಾಡಳಿತ, ಪಾಲಿಕೆ ಮುಂದಾಗಿಲ್ಲ. ಮೈಸೂರಿನ ಅಗ್ರಹಾರದ ಬಸವೇಶ್ವರ ರಸ್ತೆಯ 15ನೇ ತಿರುವಿನಲ್ಲಿ ವ್ಯಕ್ತಿಯೊಬ್ಬರು ಮ್ಯಾನ್‌ಹೋಲ್‌ ಶುಚಿಗೊಳಿಸುತ್ತಿರುವ ಅಮಾನವೀಯ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ಮನುಷ್ಯನಿಂದ ಮ್ಯಾನ್‌ಹೋಲ್‌ಗೆ ಇಳಿಸಿ, ಮಲವನ್ನು ಮೇಲಕ್ಕೆ ತೆಗೆಸುವುದು ಶಿಕ್ಷಾರ್ಹ ಅಪರಾಧ ಎಂದು 2003ರಲ್ಲಿಯೇ ಸುಪ್ರೀಂ ಕೋರ್ಟ್‌ ಆದೇಶಿಸಿದ್ದರೂ, ಮೈಸೂರು ಜಿಲ್ಲೆ ಮತ್ತು ನಗರದಲ್ಲಿ ಇಂತಹ ಪ್ರಕರಣಗಳು ಆಗಾಗ ಮರುಕಳುಸುತ್ತಿವೆ.

ಮಾನವ ಹಕ್ಕು ಉಲ್ಲಂಘನೆ: ಬಸವೇಶ್ವರ ರಸ್ತೆಯಲ್ಲಿ ವ್ಯಕ್ತಿಯೊಬ್ಬರು ಮ್ಯಾನ್‌ಹೋಲ್‌ ಶುಚಿಗೊಳಿಸುತ್ತಿರುವುದನ್ನು ವಿಡಿಯೋ ಚಿತ್ರೀಕರಣ ಮಾಡಿದ ಹಿನ್ನೆಲೆ ಘಟನೆ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಹರಿದಾಡುತ್ತಿದ್ದು, ಪ್ರಕರಣದ ವಿರುದ್ಧ ಟೀಕೆಗಳು ವ್ಯಕ್ತವಾಗಿವೆ. ಮಾನವನಿಂದ ಮ್ಯಾನ್‌ಹೋಲ್‌ ಶುಚಿಗೊಳಿಸುವುದು, ಮಲ ಹೊರಿಸುವುದು ಮತ್ತು ಹೊರುವುದು ಮಾನವ ಹಕ್ಕು ಸ್ಪಷ್ಟ ಉಲ್ಲಂಘನೆಯಾಗಿದೆ. ದೇಶದಲ್ಲಿ ತಿಂಗಳಿಗೊಂದು ರಾಕೆಟ್‌ ಉಡಾವಣೆ ಮಾಡುವಷ್ಟು ತಂತ್ರಜ್ಞಾನವಿದ್ದರೂ, ಮ್ಯಾನ್‌ಹೋಲ್‌ ಶುಚಿಗೊಳಿಸುವ ಯಂತ್ರವೊಂದನ್ನು ಕಂಡು ಹಿಡಿಯಲು ಏಕೇ ಸಾಧ್ಯವಾಗಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಪ್ರಶ್ನಿಸಿದ್ದಾರೆ.

ಗಂಭೀರವಾಗಿ ಪರಿಗಣಿಸಿ: ಮೈಸೂರು ನಗರ ಸ್ವಚ್ಛತೆಯಲ್ಲಿ ಮೂರನೇ ಸ್ಥಾನದಲ್ಲಿದೆ ಎಂದು ಹೆಮ್ಮೆ ಪಟ್ಟುಕೊಳ್ಳುತ್ತೇವೆ. ಇದಕ್ಕೆ ಪೌರಕಾರ್ಮಿಕ ಶ್ರಮ ಸಾಕಷ್ಟಿದೆ. ಆದರೆ, ಅವರಿಂದ ಮ್ಯಾನ್‌ಹೋಲ್‌ ಶುಚಿಗೊಳಿಸಲು ಆಗಾಗ ಬಳಸಿಕೊಳ್ಳುತ್ತಿರುವುದು ಸಾರ್ವಜನಿಕ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಇಂತಹ ಪ್ರಕರಣಗಳು ಮತ್ತೆ ಮತ್ತೆ ಮರುಕಳಿಸಂತೆ, ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ಹಿಂದೆಯೂ ನಡೆದಿದೆ: ಕೆಲವು ತಿಂಗಳ ಹಿಂದೆ ಅಶೋಕಪುರಂನಲ್ಲಿ ಪೌರಕಾರ್ಮಿಕನನ್ನು ಮ್ಯಾನ್‌ಹೋಲ್‌ಗೆ ಇಳಿಸಿ ಶುಚಿಗೊಳಿಸಲಾಗಿತ್ತು. ನಂತರ ಈ ಬಗ್ಗೆ ಸಾರ್ವಜನಿಕರು ವಿರೋಧಿಸಿ, ದೂರು ದಾಖಲಿಸಿದ್ದರು. ಒಂದು ವರ್ಷದ ಹಿಂದೆ ಚಾಮುಂಡಿಬೆಟ್ಟದಲ್ಲೂ ಪೌರಕಾರ್ಮಿಕರನ್ನು ಮ್ಯಾನ್‌ಹೋಲ್‌ಗಿಳಿಸಿ ಶುಚಿಗೊಳಿಸಲಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಜಿಲ್ಲಾಡಳಿತ, ಪೌರಕಾರ್ಮಿಕರನ್ನು ಮ್ಯಾನ್‌ಹೋಲ್‌ಗೆ ಇಳಿಸಿದ್ದವರನ್ನು ಶಿಕ್ಷೆಗೆ ಒಳಪಡಿಸಿತ್ತು.

ಅಪಾಯಕ್ಕೆ ಆಹ್ವಾನ: ಮ್ಯಾನ್‌ಹೋಲ್‌ಗ‌ಳಿಗೆ ಮಾನುಷ್ಯರನ್ನು ಇಳಿಸುವುದು ಅಮಾನವೀಯ ಕೃತ್ಯವಾದರೂ, ಮತ್ತೂಂದೆಡೆ ಸಾವಿನ ದವಡೆಗೆ ಮನುಷ್ಯನನ್ನು ತಳ್ಳಿದಂತೆ. ಮ್ಯಾನ್‌ಹೋಲ್‌ ಒಳಗೆ ಶುದ್ಧಗಾಳಿ ಇಲ್ಲದ ಕಾರಣ, ರಾಸಾಯನಿಕ ಕ್ರಿಯೆಗೆ ಒಳಪಟ್ಟ ಮೀಥೆನ್‌ ಅನಿಲ ಮಾರಕವಾಗಿದ್ದು, ಹಲವರು ಮೃತಪಟ್ಟಿದ್ದಾರೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ.

ಸಚಿವರ ಪ್ರತಿಕ್ರಿಯೆ: ಘಟನೆ ಬಗ್ಗೆ ಫೋಟೋ ಸಹಿತ ಟ್ವಿಟರ್‌ನಲ್ಲಿ ಕಾನೂನು ವಿದ್ಯಾರ್ಥಿಯೊಬ್ಬರು ಟ್ವೀಟ್‌ ಮಾಡಿದ್ದು, ಇದಕ್ಕೆ ಕೂಡಲೆ ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಗಮನಹರಿಸಿ, ಸೂಕ್ತ ಕ್ರಮ ವಹಿಸಲಿದೆ ಎಂದು ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಪೌರಕಾರ್ಮಿಕರು ಅಥವಾ ವ್ಯಕ್ತಿಯಿಂದ ಮ್ಯಾನ್‌ಹೋಲ್‌ ಶುಚಿಗೊಳಿಸುವುದು ಅಕ್ಷಮ್ಯ ಅಪರಾಧ. ಜೊತೆಗೆ ಮನುಷ್ಯರಿಂದ ಮ್ಯಾನ್‌ಹೋಲ್‌ ಶುಚಿಗೊಳಿಸುವುದು ಮಹಾಪರಾಧವೆಂದು ನಾಗರಿಕರಿಗೆ ಅರಿವು ಮೂಡಿಸಬೇಕು. ಮತ್ತೆ ಇಂತಹ ಪ್ರಕರಣಗಳು ಮರುಕಳಿಸದಂತೆ ಅಧಿಕಾರ ಸ್ಥಾನದಲ್ಲಿರುವವರು ಎಚ್ಚರಿಕೆ ವಹಿಸಬೇಕು.
-ಪುನೀತ್‌, ಕಾನೂನು ವಿದ್ಯಾರ್ಥಿ

ಘಟನೆ ಬಗ್ಗೆ ಗಮನಕ್ಕೆ ಬಂದಿದೆ. ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತೇನೆ. ಈ ಸಂಬಂಧ ವರದಿ ತರಿಸಿಕೊಂಡು ಅಧಿಕಾರಿಗಳಿಗೆ ವರದಿ ಸಲ್ಲಿಸುತ್ತೇವೆ. ಪಾಲಿಕೆ ಜವಾಬ್ದಾರಿ ಇರುವುದರಿಂದ ಅವರು, ಈ ಬಗ್ಗೆ ಜಾಗೃತಿ ವಹಿಸಬೇಕು.
-ಬಿಂದ್ಯಾ, ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ

* ಸತೀಶ್‌ ದೇಪುರ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.