![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 13, 2020, 3:00 AM IST
ಮೈಸೂರು: ಮೈಸೂರಿನ ಸಹಜ ಸಮೃದ್ಧ ಸಂಸ್ಥೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಆಯೋಜಿಸಿದ ಗೆಡ್ಡೆ ಗೆಣಸು ಮೇಳದಲ್ಲಿ ಭೂತಾಯಿ ಮಡಿಲಿನ ಅದ್ಭುತ ಸೃಷ್ಟಿ , ಮಣ್ಣಿನ ಕಸುವನ್ನು ಪಡೆದ ಪುಷ್ಟಿದಾಯಕ ಹಾಗೂ ಶಕ್ತಿದಾಯಕ ಆಹಾರ, ಬರಗಾಲದ ಬಂಧು ಗೆಡ್ಡೆ ಗೆಣಸುಗಳ ಲೋಕ ಅನಾವರಣಗೊಂಡಿತ್ತು. ನಿಸರ್ಗದ ಕೊಡುಗೆಯಾದ ಗೆಡ್ಡೆ ಗೆಣಸುಗಳ ಅದ್ಭುತ ಲೋಕವನ್ನು ಮೈಸೂರಿನ ಗ್ರಾಹಕರಿಗೆ ಪರಿಚಯಿಸಲು ಮೊದಲಬಾರಿಗೆ ಏರ್ಪಡಿಸಿದ್ದ ಮೇಳ ಮೈಸೂರಿಗರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಯಿತು.
ಅಪರೂಪದ ಗೆಡ್ಡೆ ಗೆಣಸು: ಮೇಳದಲ್ಲಿ ವಿವಿಧ ಬಗೆಯ ಕಾಡು ಮತ್ತು ನಾಡಿನ ಗೆಡ್ಡೆ ಗೆಣಸುಗಳು, ಮೌಲ್ಯವರ್ಧಿತ ಪದಾರ್ಥಗಳು, ಗೆಣಸಿನ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ಇತ್ತು. ಜೇನು ಕುರುಬ, ಬೆಟ್ಟ ಕುರುಬ, ಕುಣಬಿ, ಸಿದ್ಧಿ, ಸೋಲಿಗ, ಇರುಳಿಗ ಸಮುದಾಯದ ಪ್ರತಿನಿಧಿಗಳು ಅಪರೂಪದ ಗೆಡ್ಡೆ ಗೆಣಸು ಮತ್ತು ಮೂಲಿಕೆಗಳನ್ನು ತಂದು ಸಾಂಸ್ಕೃತಿಕ ನಗರಿಯ ಜನತೆಗೆ ನೈಸರ್ಗಿಕವಾಗಿ ಬೆಳೆಯುವ, ವಿಷಮುಕ್ತವಾದ ಗೆಡ್ಡೆ ಗೆಣಸುಗಳು ಪೋಷಕಾಂಶದ ಕಣಜ ಎಂಬುವನ್ನು ಮನವರಿಕೆ ಮಾಡಿಕೊಟ್ಟರು.
ನಿಸರ್ಗದ ಅಮೂಲ್ಯ ಸಂಪತ್ತು: ಮೇಳ ಉದ್ಘಾಟಿಸಿದ ಜಾನಪದ ವಿದ್ವಾಂಸ ಡಾ.ಕಾಳೇಗೌಡ ನಾಗವಾರ ಮಾತನಾಡಿ, ಗೆಡ್ಡೆ ಗೆಣಸುಗಳು ನಮ್ಮ ನಿಸರ್ಗದ ಅಮೂಲ್ಯ ಸಂಪತ್ತು. ಅನ್ನ ಸಂಸ್ಕೃತಿಯ ರಾಯಭಾರಿ. ಅದನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸದ ಹೊರತು ಭವಿಷ್ಯವಿಲ್ಲ ಎಂದು ಹೇಳಿದರು.
ನಮ್ಮ ಪೂರ್ವಿಕರ ಆಹಾರ: ನಮ್ಮ ಪೂರ್ವಿಕರ ಆಹಾರವಾಗಿದ್ದ, ಪೋಷಕಾಂಶಗಳಿಂದ ಸಮೃದ್ಧವಾದ ನೈಸರ್ಗಿಕ ಗೆಡ್ಡೆ ಗೆಣಸುಗಳನ್ನು ಮತ್ತೆ ನಮ್ಮ ಅನ್ನದ ತಟ್ಟೆಗೆ ಬರಮಾಡಿಕೊಳ್ಳಬೇಕು. ಕಾಡಿನ ಗೆಣಸುಗಳನ್ನು ಬೇಯಿಸಿ ತಿನ್ನುವುದರ ಮೂಲಕ ಈ ಬಾರಿಯ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಹೇಳಿದರು.
ಪಾಲೀಶ್ ಅಕ್ಕಿಯಿಂದ ಅನಾರೋಗ್ಯ: ಗಿರಿಜನರು, ಪಡಿತರ ಅಕ್ಕಿ ನೋಡುವ ಮೊದಲು ಕಾಡಿನ ಗೆಡ್ಡೆಗಳು ಅವರ ಅನ್ನದ ಅಗತ್ಯವನ್ನು ನೀಗಿಸುತ್ತಿದ್ದವು. ಗೆಡ್ಡೆಗಳು ಕಾಬೊìಹೈಡ್ರೇಟ್ ಹಾಗೂ ಮಾಂಸ ಪ್ರೋಟಿನ್ ಕೊಡುತ್ತಿತ್ತು. ಗೆಣಸು ಕೀಳುವ ಕ್ರಮ ಕೂಡ ನಿಸರ್ಗದ ಜತೆ ಹೊಂದಾಣಿಕೆಯಾಗಿತ್ತು. ಅರ್ಧ ಭಾಗವನ್ನು ನೆಲದಲ್ಲೇ ಬಿಟ್ಟು, ಮುಂದಿನ ಹಂಗಾಮಿಗೆ ಬಳ್ಳಿ ಬರುವಂತೆ ಅನುವು ಮಾಡಿಕೊಡಲಾಗುತ್ತಿತ್ತು. ಅವರ ಕಾಡಿನ ಜ್ಞಾನ ಮತ್ತು ಅನ್ನ ಸಂಸ್ಕೃತಿಯ ಸಂಭ್ರಮವನ್ನು ಹಾಳು ಮಾಡಿ, ಅನಾರೋಗ್ಯ ಆಹ್ವಾನಿಸುವ ಪಾಲೀಶ್ ಅಕ್ಕಿ ನೀಡುತ್ತಿದ್ದೇವೆ ಎಂದು ಕಳವಳ ವ್ಯಕ್ತಪಡಿಸಿದರು.
ಪ್ರಕೃತಿಯ ಅಮೂಲ್ಯ ಕೊಡುಗೆ: ಜಾನಕಮ್ಮ ಮಾತನಾಡಿ, ನಿಸರ್ಗದ ಕಾಣಿಕೆಯಾದ ಗೆಡ್ಡೆ ಗೆಣಸನ್ನು ವ್ಯವಸಾಯದ ಒಂದು ಭಾಗವನ್ನಾಗಿ ಮಾಡಿಕೊಳ್ಳಬೇಕು. ಹೆಚ್ಚು ಶ್ರಮವಿಲ್ಲದೆ ಬೆಳೆಯಬಹುದಾದ ಕಂದಮೂಲಗಳು ಪ್ರಕೃತಿಯ ಅಮೂಲ್ಯ ಕೊಡುಗೆಯಾಗಿದ್ದು, ಅದನ್ನು° ಉಳಿಸಿಕೊಳ್ಳಬೇಕಿದೆ ಎಂದರು. ಧಾರವಾಡದ ಪ್ರಾದೇಶಿಕ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ವಿಜ್ಞಾನಿ ಡಾ.ಅರುಣ ಕುಮಾರ್ ಭಾದೊಡ್ಡಿ ಹಾಜರಿದ್ದರು. ಎಪಿಎಂಸಿ ಉಪಾಧ್ಯಕ್ಷ ಜೆ. ಚಿಕ್ಕ ಜವರಪ್ಪ ಗೆಡ್ಡೆ ಗೆಣಸಿನ ಅದ್ಭುತ ಲೋಕ ಪುಸ್ತಕ ಬಿಡುಗಡೆ ಮಾಡಿದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.