ಬಿಜೆಪಿ ಅಧಿಕಾರಕ್ಕೇರಿದಾಗಿಂದ ಅಭಿವೃದ್ಧಿ ಮರೀಚಿಕೆ


Team Udayavani, Mar 9, 2020, 3:00 AM IST

bjp-adhika

ಹುಣಸೂರು: ಹುಣಸೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಕೆಲ ಮುಖಂಡರು ಕಾಂಗ್ರೆಸ್‌ ಬೆಂಬಲಿಸಿದ್ದಾರೆ. ಕಾರ್ಯಕರ್ತರ ಶ್ರಮದೊಂದಿಗೆ ಕಟ್ಟಿರುವ ಜೆಡಿಎಸ್‌ ಪಕ್ಷ ನಿರ್ನಾಮಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ, ಸಾರ್ವತ್ರಿಕ ಚುನಾವಣೆವರೆಗೆ ಕಾಯಿರಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ನಗರದ ಅಂಬೇಡ್ಕರ್‌ ಭವನದಲ್ಲಿ ಭಾನುವಾರ ಜೆಡಿಎಸ್‌ ತಾಲೂಕು ಘಟಕದಿಂದ ಆಯೋಜಿಸಿದ್ದ ನೂತನ ನಗರಸಭಾ ಸದಸ್ಯರಿಗೆ ಸನ್ಮಾನ, ಮತದಾರರಿಗೆ ಕೃತ‌ಜ್ಞತಾ ಸಭೆ ಮತ್ತು ಬೆಂಗಳೂರಿನಲ್ಲಿ ಆಯೋಜಿಸಿರುವ ತಮ್ಮ ಪುತ್ರ ನಿಖೀಲ್‌ ವಿವಾಹ ಸಂಬಂಧ ಕಾರ್ಯಕರ್ತರನ್ನು ಆಹ್ವಾನಿಸಲು ಆಗಮಿಸಿದ್ದ ವೇಳೆ ಮಾತನಾಡಿದರು.

ಬೆನ್ನಿಗೆ ಚೂರಿ ಹಾಕಿದವರ ನಂಬಬೇಡಿ: ಕಳೆದ 40 ವರ್ಷಗಳಿಂದ ಪಕ್ಷದ ವರಿಷ್ಠ ದೇವೇಗೌಡರನ್ನು ಬೆಂಬಲಿಸಿಕೊಂಡು ಬಂದಿರುವ ರೈತಾಪಿ ವರ್ಗ ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಕಳೆದ ಉಪ ಚುನಾವಣೆಯ ಸೋಲು, ನಮಗೆ ಮೋಸ ಮಾಡಿದವರು ಗೆಲ್ಲಬಾರದೆಂದು ಕಾಂಗ್ರೆಸ್‌ ಬೆಂಬಲಿಸಿದ್ದಾರಷ್ಟೆ, ಬಿಜೆಪಿ ಸಖ್ಯ ಲೇಸೆಂದು ನಮ್ಮ ಬೆನ್ನಿಗೆ ಚೂರಿ ಹಾಕಿ ಹೋದವರು ಅಲ್ಲಿ ಏನು ಮಾಡಲು ಸಾಧ್ಯವೆಂಬುದನ್ನು ಜನತೆ ಗಮನಿಸುತ್ತಿದ್ದಾರೆ ಎಂದರು.

ಜನತೆಗೆ ಕೃತಜ್ಞತೆ: ಪಕ್ಷಕ್ಕೆ ಮುಖಂಡರು ಬರುವುದು-ಹೋಗುವುದು ಸಹಜ. ಆದರೆ ಕಾರ್ಯಕರ್ತರೇ ನಮ್ಮ ಪಕ್ಷದ ಆಸ್ತಿ, ತಮ್ಮ ಸರಕಾರ ಪಥನಗೊಳಿಸಿ ಹೊಸ ಸರಕಾರ ತಂದವರಿಗೆ ಮುಂದೆ ಗೊತ್ತಾಗಲಿದೆ, ಕಾದು ನೋಡಿರೆಂದು ಬೇಸರಿಸಿ, ಉಪ ಚುನಾವಣೆಯಲ್ಲಿ ಸೋಮಶೇಖರ್‌ ಸೋಲಿಗೆ ಮುಖಂಡರ ಗೊಂದಲವೇ ಕಾರಣ, ಇನ್ನು ನಗರಸಭೆ ಚುನಾವಣೆ ವೇಳೆ ತಾವು ಪ್ರಚಾರದಲ್ಲಿ ತೊಡಗಿಸಿಕೊಳ್ಳಲು ಸಾಧಯವಾಗಿಲ್ಲ, ಹಣಕಾಸಿನ ನೆರವಿಲ್ಲದೇ 7 ಸದಸ್ಯರನ್ನು ನಗರಸಭೆಗೆ ಆಯ್ಕೆ ಮಾಡಿ ಕಳುಹಿಸಿರುವ ನಗರದ ಜನತೆಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿ, ಸೋತವರು ಧೃತಿಗೆಡದೆ ಸಕ್ರಿಯವಾಗಿ ತೊಡಗಿಸಿಕೊಳ್ಳಿ, ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲವೂ ಒಳ್ಳೆಯದಾಗಲಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು.

ಬಿಜೆಪಿ ಬಂದಾಗಿನಿಂದ ಕಿಲುಬು ಕಾಸು ಕೊಟ್ಟಿಲ್ಲ: ತಾವು ಅಧಿಕಾರದಲ್ಲಿದ್ದಾಗ ಹುಣಸೂರಿಗೆ ನೀಡಿದ್ದ ಅನುದಾನವನ್ನೇ ತಮ್ಮ ಅಭಿವೃದ್ಧಿ, ಇದು ಬಿಜೆಪಿ ಸರಕಾರ ನೀಡಿದ್ದೆಂದು ಬಿಂಬಿಸುತ್ತಾರೆ. ಆದರೆ ವಾಸ್ತವವಾಗಿ ಬಿಜೆಪಿ ಅಧಿಕಾರ ಹಿಡಿದಾಗಿನಿಂದ ಬಡವರ ಏಳಿಗೆಗಾಗಿ ನಯಾಪೈಸೆ ಬಿಡುಗಡೆ ಮಾಡಿಲ್ಲ, ಇನ್ನು ಕ್ಷೇತ್ರಗಳ ಅಭಿವೃದ್ಧಿಗಾಗಿ ಕಿಲುಬು ಕಾಸು ಕೊಟ್ಟಿಲ್ಲ ಎಂದು ಟೀಕಿಸಿದರು.

ಅನ್ನದಾತರೊಂದಿಗೆ ಹೋರಾಟಕ್ಕೆ ಸಿದ್ಧ: 14 ತಿಂಗಳ ಅಧಿಕಾರವಧಿಯಲ್ಲಿ ರೈತರ ಸಾಲ ಮನ್ನಾ ಮಾಡಿದ್ದೆ ಆದರೆ ಬಿಜೆಪಿ ಸರಕಾರ 2020-21 ಬಜೆಟ್‌ನಲ್ಲಿ ಯಾವ ಹೊಸ ಯೋಜನೆಯೂ ತಂದಿಲ್ಲ, ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಸಿದೆ, ಇದನ್ನು ಪ್ರಶ್ನಿಸುವ ಯಾವ ರಾಜಕಾರಣಿಯೂ ಕಾಣುತ್ತಿಲ್ಲ. ಇದನ್ನು ವಿರೋಧಿಸಿದರೆ ಮಾಜಿಯಾಗಿದ್ದಕ್ಕೆ ವಿರೋಧಿಸಿದೆನೆಂದು ಬೊಬ್ಬಿಡುತ್ತಾರೆ, ಎಲ್ಲವನ್ನೂ ಗಮನಿಸುತ್ತಿರುವ ತಾವು ನಾಡಿನ ಅನ್ನದಾತರೊಂದಿಗೆ ಹೋರಾಟ ನಡೆಸುವ ದಿನ ಹತ್ತಿರವಿದೆ ಎಂದರು.

ಮದುವೆಗೆ ಆಹ್ವಾನ: ತಮ್ಮ ಪುತ್ರ ನಿಖೀಲ್‌ ಮದುವೆ ಓಡಾಟದಲ್ಲಿ ಎಲ್ಲರನ್ನೂ ಭೇಟಿಯಾಗಲು ಆಗುತ್ತಿಲ್ಲ, ಎಲ್ಲರಿಗೂ ಆಹ್ವಾನ ನೀಡುತ್ತಿದ್ದೇನೆ. ಹೋಗಿ ಬರಲು ಶಾಸಕ ಸಾರಾ ಮಹೇಶ್‌ ಹಾಗೂ ಮುಖಂಡ ದೇವರಹಳ್ಳಿ ಸೋಮಶೇಖರ್‌ಗೆ ತಿಳಿಸಿದ್ದೇನೆ ಎಲ್ಲ ಜವಾಬ್ದಾರಿ ಹೊತ್ತು ಮದುವೆಗೆ ಬಂದು ಆಶೀವರ್ದಿಸಿ ಎಂದು ಕೋರಿದರು.

ಸನ್ಮಾನ: ನೂತನ ಸದಸ್ಯರಾದ ಕೃಷ್ಣರಾಜಗುಪ್ತ, ದೇವರಾಜ್‌, ಶ್ರೀನಾಥ್‌, ಶರವಣ, ರಾಣಿಪೆರುಮಾಳ್‌, ತಾಹಿನಾತಾಜ್‌, ರಾಧಾ ಸತ್ಯನಾರಾಯಣ್‌ ಅವರನ್ನು ಸನ್ಮಾನಿಸಲಾಯಿತು. ದೇವರಹಳ್ಳಿಸೋಮಶೇಖರ್‌, ಜಿಪಂ ಮಾಜಿ ಸದಸ್ಯ ಫಜಲುಲ್ಲಾ, ಕಾರ್ಯದರ್ಶಿ ಆರ್‌.ಸ್ವಾಮಿ, ಎಸ್‌ಸಿ ಘಟಕದ ಅಧ್ಯಕ್ಷ ಪುಟ್ಟರಾಜು ಗೋವಿಂದೇಗೌಡ, ಅಣ್ಣಯ್ಯ, ಲಾರಿಸ್ವಾಮಿಗೌಡ, ಪಿಕಾರ್ಡ್‌ ಬ್ಯಾಂಕ್‌ ಸದಸ್ಯ ಬಿಳಿಕೆರೆಪ್ರಸನ್ನ, ಚಂದ್ರಮ್ಮ, ಮೋನಿಕಾ ಇತರರು ಇದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.