ಇದೇ ಕಡೇ ಚುನಾವಣೆ: ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಸ್ಪರ್ಧೆ


Team Udayavani, Oct 4, 2017, 12:39 PM IST

mu4.jpg

ಮೈಸೂರು: ಮುಂಬರುವ 2018ರ ವಿಧಾನಸಭೆ ಚುನಾವಣೆಯೇ ನನ್ನ ಕಡೆಯ ಚುನಾವಣೆ. ನನಗೆ ರಾಜಕೀಯವಾಗಿ ಜನ್ಮ ನೀಡಿದ, ಉಪ ಚುನಾವಣೆಯಲ್ಲಿ ಮರುಜನ್ಮ ನೀಡಿದ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹೂಟಗಳ್ಳಿಯ ಸಂತೇ ಮೈದಾನದಲ್ಲಿ ಮಂಗಳವಾರ ಏರ್ಪಡಿಸಿದ್ದ ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್‌ ಕಾರ್ಯಕರ್ತರ ಬೃಹತ್‌ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

2013ರ ಚುನಾವಣೆಯೇ ಅಂತಿಮ ಇನ್ನು ಸ್ಪರ್ಧೆ ಮಾಡಲ್ಲ ಎಂದು ಹೇಳಿದ್ದೆ, ಆದರೆ, ಕಾಂಗ್ರೆಸ್‌ ಹೈಕಮಾಂಡ್‌ ನನ್ನ ನಾಯಕತ್ವದಲ್ಲೇ ಚುನಾವಣೆಗೆ ಹೋಗಲು ಹೇಳಿರುವುದರಿಂದ ಅನಿವಾರ್ಯವಾಗಿ 2018ರ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಇದೊಂದೇ ಚುನಾವಣೆ, ಇನ್ನು ಯಾರು ಹೇಳಿದರೂ ಚುನಾವಣೆಗೆ ನಿಲ್ಲಲ್ಲ ಎಂದರು.

1983ರಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿದಾಗ ಹರಸಿ ಕಳುಹಿಸಿದ ಚಾಮುಂಡೇಶ್ವರಿ ಕ್ಷೇತ್ರ ನನಗೆ ರಾಜಕೀಯವಾಗಿ ಜನ್ಮ ಕೊಟ್ಟ ಕ್ಷೇತ್ರ. 2006ರಲ್ಲಿ ನಡೆದ ಉಪಚುನಾವಣೆಯಲ್ಲಿ ಇಡೀ ಜೆಡಿಎಸ್‌-ಬಿಜೆಪಿ ಸಮ್ಮಿಶ್ರ ಸರ್ಕಾರವೇ ಇಲ್ಲಿ ಬಂದು ಕುಳಿತು, ನನ್ನನ್ನು ರಾಜಕೀಯವಾಗಿ ಮುಗಿಸಲೇಬೇಕು ಎಂದು ಅಂದಿನ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಯಡಿಯೂರಪ್ಪ ಹರ ಸಾಹಸಪಟ್ಟರೂ ಕ್ಷೇತ್ರದ ಜನತೆ ಆರ್ಶೀವದಿಸಿ ರಾಜಕೀಯ ಮರು ಜನ್ಮ ನೀಡಿದಿರಿ ಎಂದು ನೆನೆದರು.

ಗಳಗಳನೆ ಅತ್ತಿದ್ದೆ: ಸಾಮಾನ್ಯವಾಗಿ ನನಗೆ ಅಳು ಬರುವುದಿಲ್ಲ. ನನ್ನ ತಂದೆ-ತಾಯಿ ಸತ್ತಾಗಲೂ ನಾನು ಅತ್ತಿರಲಿಲ್ಲ. ಆದರೆ, ಚಾಮುಂಡೇಶ್ವರಿ ಕ್ಷೇತ್ರ ಬಿಟ್ಟು ಹೋಗುವಾಗ ಕಾರ್ಯಕರ್ತರ ಸಭೆಯಲ್ಲಿ ಗಳಗಳನೆ ಅತ್ತಿದ್ದೆ, ಅಷ್ಟರ ಮಟ್ಟಿಗೆ ಕ್ಷೇತ್ರದ ಜತೆಗೆ ನನಗೆ ಬಾಂಧವ್ಯ ಬೆಳೆದಿತ್ತು ಎಂದರು. ಎರಡು ಬಾರಿ ನನ್ನದೇ ತಪ್ಪಿನಿಂದ ಸೋತಿದ್ದೇನೆ.

ಐದು ಬಾರಿ ಗೆಲ್ಲಿಸಿದ್ದೀರಿ, ವರುಣ ಕ್ಷೇತ್ರದಲ್ಲಿಯೂ ಎರಡು ಬಾರಿಯೂ ದೊಡ್ಡ ಅಂತರದಿಂದ ಗೆಲ್ಲಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಜನತೆ 2004ರ ಚುನಾವಣೆಯಲ್ಲಿ 35 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿದ್ದರು, ಈಗಲೂ ಅದೇ ಪ್ರೀತಿ-ಅಭಿಮಾನ ಇಟ್ಟುಕೊಂಡಿದ್ದಾರೆ. ನಾನು ಮುಖ್ಯಮಂತ್ರಿಯಾಗಲು ಚಾಮುಂಡೇಶ್ವರಿ ಕ್ಷೇತ್ರದ ಜನರ ಆರ್ಶೀವಾದವೇ ಕಾರಣ ಎಂದು ನಮಿಸಿದರು.

ಮತ್ತೆ ನಾವೇ ಅಧಿಕಾರಕ್ಕೆ: ಅಧಿಕಾರಕ್ಕೆ ಬರುತ್ತೇವೆಂದು ಬಿಜೆಪಿ ಭ್ರಮಾಲೋಕದಲ್ಲಿದ್ದರೆ, ಜೆಡಿಎಸ್‌ ಭರವಸೆಯಲ್ಲಿದೆ. ಆದರೆ, ಮುಂಬರುವ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುವ ಬಗ್ಗೆ ನನಗೆ ನೂರಕ್ಕೆ ನೂರು ಭರವಸೆ ಇದೆ ಎಂದರು.

ಯಡಿಯೂರಪ್ಪಮುಂದಿನ ಮುಖ್ಯಮಂತ್ರಿ ನಾನೇ, ಮಿಷನ್‌ 150 ಅಂತಾರೆ. ಪ್ರಧಾನಿ ನರೇಂದ್ರಮೋದಿ, ಅಮಿತ್‌ ಶಾ ಅವರ ನಾಮಬಲದಿಂದ ಚುನಾವಣೆ ಗೆಲ್ಲಬಹುದು ಅಂದು ಕೊಂಡಿದ್ದಾರೆ. ಇಲ್ಲಿ ಅವರ ಆಟ ನಡೆಯುವುದಿಲ್ಲ. ಕರ್ನಾಟಕ, ಉತ್ತರಪ್ರದೇಶವಲ್ಲ ಎಂದು ತಿರುಗೇಟು ನೀಡಿದರು.

ಅವಕಾಶವಾದಿ ಪಕ್ಷ: ಜೆಡಿಎಸ್‌ ಅವಕಾಶವಾದಿ ರಾಜಕಾರಣಕ್ಕಾಗಿ ಕಾದು ಕುಳಿತಿದೆ. ಪಕ್ಷ ಬಹುಮತ ಬರದಿದ್ದರೆ ಯಾವುದಾದರೂ ಪಕ್ಷಕ್ಕೆ ಬೆಂಬಲಕೊಟ್ಟು ಮುಖ್ಯಮಂತ್ರಿ ಆಗಬಹುದು ಅಂದುಕೊಂಡಿದ್ದಾರೆ ಎಚ್‌.ಡಿ.ಕುಮಾರಸ್ವಾಮಿ, ಆದರೆ, ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳು ರಾಜ್ಯದ ಪ್ರತಿಯೊಬ್ಬರಿಗೂ ಒಂದಲ್ಲಾ ಒಂದು ರೀತಿಯಲ್ಲಿ ತಲುಪಿರುವುದರಿಂದ ಸ್ಪಷ್ಟ ಬಹುಮತದೊಂದಿಗೆ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ಎಐಸಿಸಿ ಕಾರ್ಯದರ್ಶಿ ವಿಷ್ಣುನಾದನ್‌, ಮಾಜಿ ಶಾಸಕ ಸತ್ಯನಾರಾಯಣ, ಜಿಪಂ ಮಾಜಿ ಅಧ್ಯಕ್ಷ ಕೆ.ಮರಿಗೌಡ ಮಾತನಾಡಿದರು. ವಿಧಾನಪರಿಷತ್‌ ಸದಸ್ಯ ಆರ್‌.ಧರ್ಮಸೇನ, ಡಾ.ಯತೀಂದ್ರ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯದರ್ಶಿ ಡಾ.ಗುರಪ್ಪನಾಯ್ಡು, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್‌, ಚಾಮುಂಡೇಶ್ವರಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಉಮಾಶಂಕರ್‌, ಇಲವಾಲ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಿದ್ದರಾಜು ಮೊದಲಾದವರು ಹಾಜರಿದ್ದರು.

ಡಿ.15ರಿಂದ ರಾಜ್ಯ ಪ್ರವಾಸ: ಸಿಎಂ
ಮುಂಬರುವ ಚುನಾವಣೆ ದೃಷ್ಟಿಯಿಂದ ಡಿಸೆಂಬರ್‌ 15ರಿಂದ ಸಂಕ್ರಾಂತಿವರೆಗೆ (ಜ.15) ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇವೆ. ಈ ಒಂದು ತಿಂಗಳ ಪ್ರವಾಸದ ಅವಧಿಯಲ್ಲಿ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಗೂ ಭೇಟಿ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಟಾಪ್ ನ್ಯೂಸ್

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ

ANAKU-operation

Udupi: “ಸಾಗರ್‌ ಕವಚ್‌’ ಅಣಕು ಕಾರ್ಯಾಚರಣೆ; 21 ಮಂದಿ ಬಂಧನ, 2 ಬೋಟ್‌, ವಾಹನಗಳು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur-1

Hunsur: ತಂಬಾಕು ಬೆಳೆಗಾರರ ರಕ್ಷಣೆಗೆ ಬದ್ದ: ಸಂಸದ ಯದುವೀರ್ ಒಡೆಯರ್

ಮುಡಾ ಅಧ್ಯಕ್ಷ ಕೆ.ಮರಿಗೌಡ ತಲೆದಂಡ?

MUDA Chairman: ಕೆ.ಮರಿಗೌಡ ತಲೆದಂಡ? ಇಂದು ಅಥವಾ ನಾಳೆ ರಾಜೀನಾಮೆ ನೀಡುವ ಸಾಧ್ಯತೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

Mysuru: ದೀಪಾಲಂಕಾರ ವಿಸ್ತರಣೆ: ವಾಹನ ಸಂಚಾರ ನಿರ್ಬಂಧವೂ ಮುಂದುವರಿಕೆ

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

MUDA Case: ಸಾಕ್ಷ್ಯನಾಶ ಮಾಡಲು ಅದೇನು ಕೊಲೆ ಕೇಸಾ?: ಎಂ.ಲಕ್ಷ್ಮಣ್‌

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.