ಚೀನಿಯರ ದಬ್ಬಾಳಿಕೆ ವಿರುದ್ಧ ಟಿಬೆಟಿಯನ್ನರ ಬಂಡಾಯ ದಿನ ಆಚರಣೆ


Team Udayavani, Mar 11, 2019, 7:41 AM IST

m5-chini.jpg

ಮೈಸೂರು: ಟಿಬೆಟಿಯನ್ನರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಧರ್ಮಗುರು ದಲೈಲಾಮರವರ ಮಧ್ಯಸ್ಥಿಕೆಯನ್ನು ಒಪ್ಪಿಕೊಳ್ಳಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಟಿಬೆಟಿಯನ್ನರು ನಗರದಲ್ಲಿ ಭಾನುವಾರ ಬೃಹತ್‌ ಪ್ರತಿಭಟನಾ ರ್ಯಾಲಿ ನಡೆಸಿದರು.

ಬೈಲಕುಪ್ಪೆ, ಕೊಳ್ಳೇಗಾಲ ಮತ್ತು ಹುಣಸೂರಿನ ಟಿಬೆಟಿಯನ್‌ ಯುವ ಕಾಂಗ್ರೆಸ್‌, ಪ್ರಾಂತೀಯ ಟಿಬೆಟಿಯನ್‌ ಮಹಿಳಾ ಸಂಘಟನೆ ಹಾಗೂ ಮೈಸೂರು ನಗರ ಟಿಬೆಟಿಯನ್‌ ಸಂಘಟನೆಗಳು ಒಟ್ಟಾಗಿ ಭಾನುವಾರ ಅರಮನೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಆವರಣದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದರು.

ವಾಕ್‌ ಸ್ವಾತಂತ್ರ್ಯ: ಕೇಂದ್ರೀಯ ಟಿಬೆಟಿಯನ್‌ ಆಡಳಿತದೊಂದಿಗೆ ಮಾತುಕತೆ ನಡೆಸಬೇಕು. ಪಂಚೆನ್‌ಲಾಮಾ, ತಾಷಿ ವಾಂಗ್‌ಚುಕ್‌ ಹಾಗೂ ಇತರೆ ರಾಜಕೀಯ ಕೈದಿಗಳನ್ನು ಬಿಡುಗಡೆ ಮಾಡಬೇಕು. ಟಿಬೆಟಿಯನ್ನರ ಧಾರ್ಮಿಕ, ಸಾಂಸ್ಕೃತಿಕ ಹಾಗೂ ವಾಕ್‌ ಸ್ವಾತಂತ್ರ್ಯವನ್ನು ಗೌರವಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ದುಷ್ಕೃತ್ಯ, ದಬ್ಬಾಳಿಕೆ: ಚೀನಿಯರು, ಟಿಬೆಟಿಯನ್ನರ ಮೇಲೆ ನಡೆಸುತ್ತಿರುವ ದಬ್ಬಾಳಿಕೆಯು ಈ ಶತಮಾನದ ಹೇಯ ಕೃತ್ಯವಾಗಿದೆ. ಚೀನಿಯರ ದುಷ್ಕೃತ್ಯಗಳಾದ ಚಿತ್ರಹಿಂಸೆ, ಶಿರಶ್ಚೇಧ, ಸೆರೆವಾಸ ಹಾಗೂ ಬಲವಂತದ ಗುಲಾಮಗಿರಿಗೆ 1.2 ದಶಲಕ್ಷ ಟಿಬೆಟಿಯನ್ನರು ಬಲಿಪಶುಗಳಾಗಿದ್ದಾರೆ.

ಧರ್ಮಗುರು ದಲೈಲಾಮಾರವರ ಅರಮನೆ ಹಾಗೂ ಅತ್ಯಂತ ಪವಿತ್ರ ಸ್ಥಳವಾದ ಲಾಸಾದ ಪೊಟಾಲಾ ಅರಮನೆ ಮೇಲೆ 1959ರ ಮಾ.10ರಂದು ಕಮ್ಯುನಿಷ್ಟ್ ಚೀನಿಯರು ನಡೆಸಿದ ಹೀನ ದಾಳಿಯ ವಿರುದ್ಧ ಟಿಬೆಟಿಯನ್ನರು ಸಿಡಿದೆದ್ದ ಬಂಡಾಯ ದಿನದ 60ನೇ ವರ್ಷಾಚರಣೆ ಇದಾಗಿದೆ ಎಂದು ತಿಳಿಸಿದರು.

ದೇಶಗಳು ದನಿ ಎತ್ತಲಿ: ಕಳೆದ 60 ವರ್ಷಗಳಿಂದ ಟಿಬೆಟಿಯನ್ನರು ಮಾನವಹಕ್ಕು, ಆರ್ಥಿಕ ಬಿಕ್ಕಟ್ಟು ಹಾಗೂ ಮಾನವೀಯ ನೆಲೆಗಳಿಂದ ವಂಚಿತರಾಗಿದ್ದಾರೆ. ಇದರ ವಿರುದ್ಧ ಪ್ರಪಂಚದ ಗಮನ ಸೆಳೆಯಲು 160ಕ್ಕೂ ಹೆಚ್ಚು ಟಿಬೆಟಿಯನ್ನರು ಸ್ವಯಃ ಆತ್ಮಾಹುತಿಗೆ ಒಳಗಾಗಿದ್ದಾರೆ. ನಮ್ಮ ಮೇಲಿನ ಚೀನಿಯರ ದಬ್ಬಾಳಿಕೆಯ ವಿರುದ್ಧ ಶಾಂತಿಪ್ರಿಯ ರಾಷ್ಟ್ರಗಳು ಧ್ವನಿ ಎತ್ತಬೇಕು ಎಂದು ಪ್ರತಿಭಟನಾನಿರತ ಟಿಬೆಟಿಯನ್‌ ಮುಖಂಡರು ಆಗ್ರಹಿಸಿದರು.

ಟಾಪ್ ನ್ಯೂಸ್

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ…  ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore ಮುಡಾ ಅಕ್ರಮ: ನಿವೇಶನ ಹಂಚಿಕೆ ರದ್ದು

Mysore ಮುಡಾ ಅಕ್ರಮ: ನಿವೇಶನ ಹಂಚಿಕೆ ರದ್ದು

robbers

Hunsur; ಮನೆಗೆ ಕನ್ನ ಹಾಕಿದ ಕಳ್ಳರಿಂದ ಕೋಟ್ಯಂತರ ರೂ. ನಗ, ನಗದು ದರೋಡೆ

Mysore: ವರಕೂಡು ಮೊರಾರ್ಜಿ ಶಾಲೆ ಪಕ್ಕ ಹುಲಿ ಪ್ರತ್ಯಕ್ಷ; ಆತಂಕದಲ್ಲಿ ಗ್ರಾಮಸ್ಥರು!

Mysore: ವರಕೂಡು ಮೊರಾರ್ಜಿ ಶಾಲೆ ಪಕ್ಕ ಹುಲಿ ಪ್ರತ್ಯಕ್ಷ; ಆತಂಕದಲ್ಲಿ ಗ್ರಾಮಸ್ಥರು!

5-hunsur

Hunsur: ಕೊಡಗು, ನಾಗರಹೊಳೆಯಲ್ಲಿ ಭಾರೀ ಮಳೆಗೆ ತುಂಬಿದ ಹನಗೋಡು ಅಣೆಕಟ್ಟೆ

Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು

Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.