ನಂಜನಗೂಡಿನಲ್ಲಿ ಮತ್ತೆ ಹಾಡ ಹಗಲೇ ಹುಲಿ ದಾಳಿ; ರೈತ ಪಾರು
Team Udayavani, Dec 12, 2022, 6:17 PM IST
ಸಾಂದರ್ಭಿಕ ಚಿತ್ರ ಮಾತ್ರ
ನಂಜನಗೂಡು: ತಾಲೂಕಿನ ಬಳ್ಳೂರುಹುಂಡಿ ಗ್ರಾಮದಲ್ಲಿ ಹಾಡ ಹಗಲೇ ಹುಲಿಯೊಂದು ದಾಳಿ ಮಾಡಿದ್ದು, ರೈತ ಪಾರಾಗಿರುವ ಬೆಚ್ಚಿ ಬೀಳುವ ಘಟನೆ ಸೋಮವಾರ ನಡೆದಿದೆ.
ಜಮೀನಿನಲ್ಲಿ ಜಾನುವಾರುಗಳನ್ನು ಮೇಯಿಸುತ್ತಿದ್ದಾಗ ಹುಲಿ ಪ್ರತ್ಯಕ್ಷವಾಗಿ ಸ್ವಾಮಿ (52) ಎಂಬ ರೈತರ ಮೇಲೆ ಎರಗಿದೆ. ಸಾರ್ವಜನಿಕರು ಜೋರಾಗಿ ಕಿರುಚಿಕೊಂಡಾಗ ಅವರನ್ನು ಬಿಟ್ಟು ಪರಾರಿಯಾಗಿದೆ.
ಅರಣ್ಯ ಅಧಿಕಾರಿಗಳಿಗೆ ಕರೆ ಮಾಡಿದಾಗ ಸ್ಪಂದಿಸಿ ಸ್ವಾಮಿಯನ್ನು ತಕ್ಷಣ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು ಮಾಡಿರುತ್ತಾರೆ. ತಲೆ ಹಾಗೂ ಕೆನ್ನೆ ಮುಖದ ಭಾಗದಲ್ಲಿ ಗಂಭೀರ ಗಾಯವಾಗಿರುವ ಬಗ್ಗೆ ತಿಳಿದು ಬಂದಿದೆ.
ಸ್ವಲ್ಪ ದಿನಗಳ ಹಿಂದೆ ಹಾದನೂರು ಒಡೆಯನಪುರ ಗ್ರಾಮದಲ್ಲಿ ಹುಲಿ ದಾಳಿ ಮಾಡಿ ಪುಟ್ಟಸ್ವಾಮಿಗೌಡ ಎಂಬಾತ ಜೀವ ಕಳೆದುಕೊಂಡ ಬಳಿಕ ಭಯದ ವಾತಾವರಣ ಸೃಷ್ಟಿಯಾಗಿತ್ತು.ಇಂದಿನ ಈ ಘಟನೆಯ ಬಳಿಕ ಕಾಡಂಚಿನ ಪಕ್ಕದಲ್ಲಿರುವ ರೈತರು ತಮ್ಮ ತಮ್ಮ ಜಮೀನಿಗೆ ತೆರಳಿ ಕೆಲಸ ಮಾಡುವುದು ಹೇಗೆ ಎಂದು ಭಯದ ವಾತಾವರಣ ಸೃಷ್ಟಿಯಾಗಿದೆ.
ದಾಳಿ ಮಾಡಿದ ಹುಲಿಯನ್ನು ಸೆರೆ ಹಿಡಿಯದೆ ಹಾಗೆ ಬಿಟ್ಟಿರುವುದು ಅರಣ್ಯ ಅಧಿಕಾರಿಗಳ ನಿರ್ಲಕ್ಷತನ ಎಂಬ ಕೂಗು ಕೇಳಿ ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.