![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Nov 20, 2022, 6:24 PM IST
ಮೈಸೂರು: ‘ಟಿಪ್ಪು ನಿಜ ಕನಸು ನಾಟಕ ಪ್ರದರ್ಶನ’ ನಾಟಕ ನೋಡಲು ಬಂದ ರಂಗಾಯಣದ ಮಾಜಿ ನಿರ್ದೇಶಕ ಬಸವಲಿಂಗಯ್ಯ ಅವರನ್ನು ಪೊಲೀಸರು ತಡೆದು ಪ್ರಶ್ನಿಸಿರುವ ಪ್ರಸಂಗ ನಡೆದಿದೆ.
‘ಟಿಪ್ಪು ನಿಜ ಕನಸು ನಾಟಕ ಪ್ರದರ್ಶನ’ ನಾಟಕವನ್ನು ನಿಲ್ಲಿಸಬೇಕೆಂದು ನಿನ್ನೆಯಷ್ಟೇ ರಂಗಾಯಣದ ಮಾಜಿ ನಿರ್ದೇಶಕ ಬಸವಲಿಂಗಯ್ಯ ಪತ್ರ ಬರೆದಿದ್ದರು.
ಭಾನುವಾರ ರಂಗಾಯಣದಲ್ಲಿ ಪ್ರದರ್ಶನ ಕಾಣುವ ‘ಟಿಪ್ಪು ನಿಜ ಕನಸು ನಾಟಕ ಪ್ರದರ್ಶನ’ ನೋಡಲು ಟಿಪ್ಪು ಪುಸ್ತಕದ ಲೇಖಕ ಲೇಖಕ ಟಿ. ಗುರುರಾಜ್ ಜೊತೆ ಬಸವಲಿಂಗಯ್ಯ ಬಂದಿದ್ದಾರೆ. ಈ ವೇಳೆ ಪೊಲೀಸರು ಬಸವಲಿಂಗಯ್ಯ ಅವರನ್ನು ಒಳಗೆ ಬಿಡುವುದಿಲ್ಲ ಎಂದಿದ್ದಾರೆ. ಇದಕ್ಕೆ ಆಕ್ರೋಶಗೊಂಡ ಬಸವಲಿಂಗಯ್ಯ ರಂಗಾಯಣದ ಮುಂಭಾಗ ಧರಣಿ ಕುಳಿತಿದ್ದಾರೆ. ಟಿಕೆಟ್ ಖರೀದಿಸಿ ಬಂದಿದ್ದೇನೆ ಯಾಕೆ ಬಿಡುವುದಿಲ್ಲ ಎಂದು ಪೊಲೀಸರ ಜೊತೆ ವಾದ ಮಾಡಿದ್ದಾರೆ.
ಈ ವೇಳೆ ಮಧ್ಯ ಪ್ರವೇಶಿಸಿದ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಬಂದು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ನಂತರ ಬಸವಲಿಂಗಯ್ಯ ಹಾಗೂ ಟಿ. ಗುರುರಾಜ್ರನ್ನು ಪೊಲೀಸರು ಒಳಗೆ ಬಿಟ್ಟಿದ್ದಾರೆ.
ಅಡ್ಡಂಡ ಕಾರ್ಯಪ್ಪ ಇಬ್ಬರನ್ನೂ ಸ್ವಾಗತ ಕೋರಿ ಒಳಗೆ ಕರೆದುಕೊಂಡು ಹೋದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.