ತಂಬಾಕು ಕೊಯ್ಲು ಆರಂಭ, ಉತ್ತಮ ದರದ ನಿರೀಕ್ಷೆ


Team Udayavani, Jul 20, 2019, 3:00 AM IST

tambaku-koylu

ಪಿರಿಯಾಪಟ್ಟಣ: ರಾಜ್ಯದಲ್ಲಿಯೇ ಅತಿ ಹೆಚ್ಚು ವರ್ಜಿನೀಯ ತಂಬಾಕು ಉತ್ಪಾದನೆ ಮಾಡುವ ತಾಲೂಕು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಪಿರಿಯಾಪಟ್ಟಣ ತಾಲೂಕಿನಾದ್ಯಂತ ಬೆಳೆಗಾರರು, ತಂಬಾಕು ಹದ (ಕೊಯ್ಲು) ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಕಳೆದ ಮೇ ತಿಂಗಳಲ್ಲಿ ಬಿದ್ದ ಭರಣಿ ಮಳೆ ಮತ್ತು ನೀರಾವರಿ ವ್ಯವಸ್ಥೆ ಹೊಂದಿರುವ ರೈತರು ಏಪ್ರಿಲ್‌ ತಿಂಗಳಲ್ಲಿ ಜಮೀನಿಗೆ ತಂಬಾಕು ಗಿಡಗಳನ್ನು ನಾಟಿ ಮಾಡಿದ್ದ ತಂಬಾಕು ಎಲೆಗಳು ಇಂದು ಕೊಯ್ಲಿಗೆ ಬಂದು ನಿಂತಿವೆ. ಬೆಳೆಗಾರರು ತಂಬಾಕು ಸೊಪ್ಪನ್ನು ಹದ ಮಾಡುವ ಕೆಲಸದಲ್ಲಿ ನಿರತರಾಗಿರುವುದು ತಾಲೂಕಿನಾದ್ಯಂತ ಕಂಡು ಬರುತ್ತಿದೆ.

ಮೊದಲಿಗೆ ಜಮೀನಿನಲ್ಲಿ ಬೆಳೆದಿದ್ದ ಹೊಗೆಸೊಪ್ಪಿನ ಎಲೆಗಳನ್ನು ಕುಯ್ದು ತಂದು ನಂತರ ಅವುಗಳನ್ನು ಬಿದಿರು ಕಡ್ಡಿ, ನೀಲಗಿರಿ ಅಥವಾ ಅಡಕೆ ದಬ್ಬೆಗೆ ದಾರಕಟ್ಟಿ ಹೆಣೆದು ಅವುಗಳನ್ನು ಬ್ಯಾರೆನ್‌ಗೆ ನೇತು ಹಾಕಿದ ಸೊಪ್ಪಿಗೆ ಸುಮಾರು 5 ದಿನಗಳ ಕಾಲ ಬೆಂಕಿಯ ಶಾಖವನ್ನು ನೀಡಲಾಗುತ್ತದೆ. ಬಳಿಕ ಅವುಗಳನ್ನು ದಾರದಿಂದ ಹೊರತೆಗೆದು ಗಾಳಿಬೆಳಕು ಬೀಳದ ರೀತಿಯಲ್ಲಿ ಸಂಗ್ರಹಣೆ ಮಾಡ‌ಲಾಗುತ್ತದೆ.

ಅಗ್ನಿ ಅವಘಡ ಭಯ: ತಂಬಾಕು ಬೆಳೆಗಾರರು ತಂಬಾಕನ್ನು ಹದ ಮಾಡುವ ಸಂದರ್ಭದಲ್ಲಿ ಬ್ಯಾರನ್ನಿನಲ್ಲಿ ಶೇಖರಿಸಿಟ್ಟಿದ್ದ ಕಡ್ಡಿಗಳು ಜಾರುವುದರಿಂದ ಮತ್ತು ಎಲೆಗಳು ಉದುರುವುದರಿಂದ ಕೆಲವು ಬಾರಿ ಪೈಪ್‌ಗ್ಳಿಗೆ ಬೆಂಕಿತಾಗಿ ಅಗ್ನಿ ಅವಘಡಗಳು ಸಂಭವಿಸಿರುವ ಉದಾಹಣೆಗಳೂ ಕಣ್ಣು ಮುಂದಿದ್ದು, ಇಂತಹ ಅವಘಡಗಳು ಸಂಭವಿಸದಂತೆ ಎಚ್ಚರಿಕೆ ವಹಿಸಲು ಹಗಲು ರಾತ್ರಿ ಎನ್ನದೆ ನಿದ್ದೆಗೆಟ್ಟು ಕಾಯುತ್ತಾರೆ.

ತಂಬಾಕು ಬೆಳೆಯಲು ಅಧಿಕ ಖರ್ಚು: ತಂಬಾಕು ಬೆಳೆಯುವ ರೈತರಲ್ಲಿ ಕೆಲವರು ಸಿಂಗಲ್‌ ಮತ್ತು ಮತ್ತೆ ಕೆಲವರು ಡಬ್ಬಲ್‌ ಬ್ಯಾರನ್‌ ಲೈಸೆನ್ಸ್‌ ಹೊಂದಿರುತ್ತಾರೆ. ಸಿಂಗಲ್‌ ಬ್ಯಾರೆನ್‌ ಲೈಸೆನ್ಸ್‌ ಹೊಂದಿರುವ ರೈತರಿಗೆ ಒಂದು ಎಕರೆಯಲ್ಲಿ ತಂಬಾಕು ಬೆಳೆಯಲು ರಸಗೊಬ್ಬರಕ್ಕಾಗಿ 15 ಸಾವಿರ ರೂ., ಕೂಲಿಗೆ 20 ಸಾವಿರ ರೂ., ಸೌದೆಗೆ 40 ಸಾವಿರ ರೂ. ಇನ್ನಿತರೆ ಕೆಲಸಗಳಿಗೆ 35 ಸಾವಿರ ರೂ. ಹೀಗೆ ಒಟ್ಟು ಲಕ್ಷಕ್ಕೂ ಅಧಿಕ ಹಣ ಖರ್ಚಾಗುತ್ತದೆ.

ಇಳುವರಿ: ಒಂದು ಎಕರೆಯಲ್ಲಿ ಉತ್ತಮ ಇಳುವರಿ ಬಂದರೆ 700 ರಿಂದ 800 ಕೆ.ಜಿ. ತಂಬಾಕು ಬೆಳೆಯಬಹುದು. ಸರಾಸರಿ ಒಂದು ಕೆ.ಜಿ. ತಂಬಾಕು ಬೆಳೆಯಲು ರೈತರಿಗೆ 100 ರಿಂದ 120 ರೂ. ಖರ್ಚು ತಗಲುತ್ತದೆ. 2018-19ನೇ ಸಾಲಿನಲ್ಲಿ ಪಿರಿಯಾಪಟ್ಟಣ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ. ತಂಬಾಕಿಗೆ 168 ರೂ.ಗಳು ಬೆಳೆಗಾರರಿಗೆ ಸಿಕ್ಕ ಅತ್ಯಧಿಕ ಮೊತ್ತವಾಗಿದ್ದು, ಈ ಬಾರಿ ಸರಾಸರಿ 220 ರೂ.ಗೂ ಹೆಚ್ಚಿನ ಮೊತ್ತ ಸಿಕ್ಕಿದರೆ ಮಾತ್ರ ಪ್ರಸಕ್ತ ವರ್ಷ ತಂಬಾಕು ಬೆಳೆಗಾರರು ಚೇತರಿಕೊಂಡು, ಈಗಾಗಲೇ ಲಕ್ಷಾಂತರ ರೂ ಸಾಲ ಮಾಡಿ ಬೆಳೆ ಬೆಳೆದ ರೈತ ನೆಮ್ಮದಿಯಿಂದ ಬದುಕಲು ಸಾಧ್ಯ.

ಸೌದೆಗೆ ಬೇಡಿಕೆ: ತಂಬಾಕು ಹದಗೊಳಿಸಲು ಸಾಕಷ್ಟು ಸೌದೆ ಅತ್ಯಗತ್ಯವಿದ್ದು, ಈ ಸೌದೆಗೆ ಟನ್‌ಗೆ 3,500 ದಿಂದ 4,000 ರೂ.ಗೂ ಅಧಿಕವಾಗಿದೆ. ಈಗಾಗಲೇ ಪಿರಿಯಾಪಟ್ಟಣ ತಾಲೂಕು ಸೇರಿದಂತೆ ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಂದ ಕಾಫಿ, ನೀಲಗಿರಿ, ಹರ್ಕಿಲಸ್‌, ಹುಣಸೆ, ಹಲಸು, ಮಾವು ಸೇರಿದಂತೆ ವಿವಿಧ ಕಾಡು ಜಾತಿಯ ಸೌದೆಗಳನ್ನು ಪಟ್ಟಣಕ್ಕೆ ತಂದು ಮಾರಾಟ ಮಾಡಲಾಗುತ್ತಿದೆ. ಒಂದು ಎಕರೆಯಲ್ಲಿ ಬೆಳೆದ ತಂಬಾಕು ಹದ ಮಾಡಲು ಕನಿಷ್ಠ 50 ಸಾವಿರ ರೂ.ನಷ್ಟು ಸೌದೆ ಬೇಕಾಗುತ್ತಿದೆ.

ಉತ್ತಮ ಬೆಲೆ ನಿರೀಕ್ಷೆ: ಈ ಬಾರಿ ತಂಬಾಕು ಬೆಳೆಗಾರರು ತಾಲೂಕಿನಾದ್ಯಂತ ಸುಮಾರು 30 ಸಾವಿರ ಹೆಕ್ಟೇರ್‌ ಪ್ರದೇಶಗಳಿಂತಲೂ ಹೆಚ್ಚು ಪ್ರದೇಶದಲ್ಲಿ ತಂಬಾಕನ್ನು ಬೆಳೆದಿದ್ದು, ಉತ್ತಮ ದ‌ರ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ. ಈಗಾಗಲೇ ನೆರೆಯ ಆಂಧ್ರ ಪ್ರದೇಶದಲ್ಲಿ ತಂಬಾಕು ಖರೀದಿ ಕೇಂದ್ರ ಪ್ರಾರಂಭವಾಗಿ ರೈತರು ಬೆಳೆದಿರುವ ತಂಬಾಕಿಗೆ ಪ್ರತಿ ಕೆ.ಜಿ.ಗೆ 203 ರೂ. ನಿಗದಿ ಮಾಡಿ ರೈತರಿಂದ ಖರೀದಿಸಲಾಗುತ್ತಿದೆ.

ರಾಜ್ಯದಲ್ಲಿಯೂ ಇದಕ್ಕಿಂತ ಹೆಚ್ಚಿನ ಬೆಲೆ ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದಾರೆ. ರೈತರು ತಂಬಾಕು ಬೆಳೆ ಬೆಳೆಯುವುದಕ್ಕಾಗಿ ಬ್ಯಾಂಕುಗಳಿಂದ, ಖಾಸಗಿಯವರಿಂದ ಸಾಲ ಪಡೆದು ಹಾಗೂ ತಮ್ಮಲ್ಲಿದ್ದ ಒಡವೆಗಳನ್ನು ಗಿರವಿ ಇಟ್ಟು ಈಗಾಗಲೇ ಸಾಕಷ್ಟು ಹಣ ವ್ಯಯ ಮಾಡಿರುವ ಬೆಳೆಗಾರರು ತಂಬಾಕು ಖರೀದಿ ಮಾಡುವ ಕಂಪನಿಗಳು ನಿಗದಿ ಮಾಡುವ ಮೊತ್ತದ ಮೆಲೆ ತಮ್ಮ ಅಳಿವು ಉಳಿವಿನ ಪ್ರಶ್ನೆ ಇರುತ್ತದೆ ಎಂದು ಹೇಳುವುದನ್ನು ಅಲ್ಲಗಳಿಯುವಂತಿಲ್ಲ.

ತಂಬಾಕು ಕೆಲಸಕ್ಕೆ ಕೂಲಿ ದುಬಾರಿ: ತಂಬಾಕು ಹದ ಮಾಡುವ ಕೆಲಸದಲ್ಲಿ ನಿರತರಾದ ಪುರುಷರಿಗೆ ದಿನ ಒಂದಕ್ಕೆ 600 ರಿಂದ 700 ರೂ. ಹಾಗೂ ಮಹಿಳೆಯರಿಗೆ ಹೊಗೆಸೊಪ್ಪು ಕೊಯ್ಲು ಮಾಡಿ ತಂದು ಅದಕ್ಕೆ ದಾರ ಹಾಕಿ ಕಟ್ಟಲು ಒಂದು ಕಡ್ಡಿಗೆ( ಸರಕ್ಕೆ) 8 ರೂಪಾಯಿಗಳಂತೆ ನಿಗದಿಪಡಿಸಲಾಗಿದ್ದು, ಪ್ರತಿ ಮಹಿಳೆಯರು ದಿನಕ್ಕೆ 600 ರಿಂದ 700 ರೂ. ವರೆಗೆ ಕೂಲಿ ಪಡೆಯುತ್ತಾರೆ.

ಕೆಲವು ಭಾಗಗಳಲ್ಲಿ ಮಹಿಳಾ ಕಾರ್ಮಿಕರು 6 ರಿಂದ 7 ಜನರ ಗುಂಪು ಮಾಡಿಕೊಂಡು ಪ್ರತಿ ಬ್ಯಾರೆನ್‌ ಒಂದಕ್ಕೆ ಸೊಪ್ಪು ಕೊಯ್ಲು ಮಾಡಿ ಕಡ್ಡಿಗೆ ಧಾರ ಕಟ್ಟಲು ಸುಮಾರು ರೂ. 5000 ಕ್ಕೂ ಹೆಚ್ಚು ಹಣ ಪಡೆಯುತ್ತಿರುವುದು ಕಂಡುಬರುತ್ತದೆ. ಇದಲ್ಲದೇ ಈ ಕೆಲಸದಲ್ಲಿ ನಿತರರಾದವರಿಗೆ ಇದರೊಂದಿಗೆ ಕೂಲಿಯ ಜೊತೆಗೆ ಕಾಫೀ, ಟೀ, ಊಟ ತಿಂಡಿಯನ್ನು ನೀಡಬೇಕು. ಒಟ್ಟಾರೆ ಒಬ್ಬ ಕೂಲಿ ಆಳಿಗೆ ದಿನಕ್ಕೆ ಕನಿಷ್ಠ 600 ಕ್ಕೂ ಹೆಚ್ಚು ಖರ್ಚು ಬರುತ್ತಿದೆ ಎಂದು ಬೆಳೆಗಾರರು ಹೇಳುತ್ತಾರೆ.

* ಪಿ.ಎನ್‌.ದೇವೇಗೌಡ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.