ನೆರೆಗೆ ನೆಲೆ ಕಳೆದುಕೊಂಡ ಹಾಡಿಗರ ಯಾತನೆ


Team Udayavani, Aug 16, 2019, 3:00 AM IST

nerege

ಹುಣಸೂರು: ಮನೆ-ಗುಡಿಸಲಿನೊಳಗೆ ಚಿಮ್ಮುವ ವಸ್ತಿ(ಶೀತ) ನೀರು, ಮೇಲ್ಛಾವಣಿಯಿಂದ ಸೋರುವ ಮಳೆ ನೀರು, ಶೀತಮಯ ನೆಲದಿಂದ ಮಲಗಲಾಗದೆ ಪರದಾಡುತ್ತಿರುವ ಕಾಡುಕುಡಿಗಳು… ಮಹಾಮಳೆ ಹಾಗೂ ಲಕ್ಷ್ಮೀಣತೀರ್ಥ ನದಿಯ ಪ್ರವಾಹದಿಂದ ಹಾಡಿಗಳಲ್ಲಿ ಇಂತಹ ಹೃದಯವಿದ್ರಾವಕ ದೃಶ್ಯಗಳು ಕಂಡು ಬರುತ್ತಿವೆ.

ನಾಗರಹೊಳೆ ಉದ್ಯಾನ, ಲಕ್ಷ್ಮಣತೀರ್ಥ ನದಿಯಂಚಿನ ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ನೇರಳಕುಪ್ಪೆ ಗ್ರಾಪಂನ ಬಿಲ್ಲೇನಹೊಸಹಳ್ಳಿ (ಲಕ್ಷ್ಮಣಪುರ) ಗಿರಿಜನರು ನೆರೆಗೆ ತತ್ತರಿಸಿ ಹೋಗಿದ್ದಾರೆ. ಈ ಹಾಡಿಯಲ್ಲಿ 24 ಕುಟುಂಬಗಳು ವಾಸಿಸುತ್ತಿದ್ದರೆ, ನಾಲ್ಕೈದು ಕುಟುಂಬಗಳು ತಮ್ಮ ಜಮೀನಿನಲ್ಲಿ ಶೆಡ್‌ ನಿರ್ಮಿಸಿಕೊಂಡು ವಾಸಿಸುತ್ತಿದ್ದು, ಪ್ರವಾಹದಿಂದ ಎಲ್ಲಾ ಕುಟುಂಬಗಳ ಬದುಕು ಬೀದಿಗೆ ಬಿದ್ದಿದೆ.

ಮನೆಯೊಳಗೆ ವಸ್ತಿ ನೀರು: ಅಪಾರ ಮಳೆಯಿಂದ ಮನೆಯೊಳಗಿನ ನೆಲದಲ್ಲಿ ಬುಗ್ಗೆಯಂತೆ ನೀರು ಚಿಮ್ಮುತ್ತಿತ್ತು. ಇದೀಗ ನೀರು ಚಿಮ್ಮುವಿಕೆ ಕಡಿಮೆಯಾಗಿದ್ದರೂ ವಸ್ತಿ ಕಡಿಮೆಯಾಗಿಲ್ಲ, ನೆಲವೆಲ್ಲಾ ಶೀತ ಹಿಡಿದಿದೆ. ಮಲಗುವುದು, ಅಡುಗೆ ಮಾಡುವುದು, ಮಕ್ಕಳ ಲಾಲನೆ-ಪಾಲನೆ, ಗರ್ಭಿಣಿ-ಬಾಣಂತಿಯರ ಪಾಡು ಹೇಳತೀರದಾಗಿದೆ. ನೀರು ಇಂಗಿಸಲು ಮನೆಮುಂದೆ ತೆಗೆದಿರುವ ಚಿಕ್ಕ ಹೊಂಡದಲ್ಲಿ ಶೇಖರವಾಗುತ್ತಿದೆ.

ಕೊಚ್ಚಿ ಹೋದ ಗುಡಿಸಲು: ಹಾಡಿಗೆ ಹೊಂದಿಕೊಂಡಂತಿರುವ ತಮ್ಮ ಜಮೀನುಗಳಲ್ಲೇ ನಿರ್ಮಿಸಿಕೊಂಡಿದ್ದ ಶಿವು-ಮಂಗಳ ದಂಪತಿಯ ಮನೆ ಗೋಡೆ ಸಂಪೂರ್ಣ ಕುಸಿದಿದ್ದರೆ, ಇದರ ಸಮೀಪದಲ್ಲೇ ಹಾಡಿಯ ಗೋಪಾಲ, ಹಾಗಲ, ಶಿವಣ್ಣ ನಿರ್ಮಿಸಿಕೊಂಡಿದ್ದ ಗುಡಿಸಲುಗಳು, ಅದರೊಳಗಿದ್ದ ಪಡಿತರ, ಜೋಳ, ಹತ್ತಿ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದೆ. ಮಧ್ಯರಾತ್ರಿಯೇ ಓಡೋಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಸಂತಸ್ತರಾಗಿರುವ ಇಡೀ ಹಾಡಿಯ ಎಲ್ಲಾ ಕುಟುಂಬಗಳು ಇದೀಗ ಬಿಲ್ಲೇನಹೊಸಹಳ್ಳಿಯ ಪರಿಹಾರ ಕೇಂದ್ರದಲ್ಲಿ ಆಶ್ರಯಪಡೆದಿದ್ದು, ಮುಂದಿನ ಜೀವನ ಹೇಗೆಂಬ ಚಿಂತೆಯಲ್ಲಿದ್ದಾರೆ.

ಶಿಥಿಲಾವಸ್ಥೆಯ ಮನೆಗಳು: ಈ ಹಿಂದೆ ಸರ್ಕಾರ ನಿರ್ಮಿಸಿಕೊಟ್ಟಿರುವ ಮನೆಗಳ ಮೇಲ್ಛಾವಣಿ ಕಿತ್ತು ಹೋಗಿದೆ. ಕಲಾ°ರ್‌ ಶೀಟ್‌ಗಳು ಒಡೆದಿವೆ. ಹಲವರು ಪ್ಲಾಸ್ಟಿಕ್‌ ಹೊದಿಕೆ ಹಾಕಿದ್ದಾರೆ. ಹೀಗಾಗಿ ಮಳೆ ಬಂದರೆ ನೀರು ಮನೆಯೊಳಗೆ ಸುರಿಯುತ್ತಿದ್ದು, ದಿನವಿಡೀ ಮನೆ ಸಂರಕ್ಷಣೆಯಲ್ಲೇ ಇರುವಂತಾಗಿ, ಕೂಲಿ ಕೆಲಸಕ್ಕೆ ಕಲ್ಲು ಬಿದ್ದಿದೆ.

ರಸ್ತೆಯೋ ಕೆಸರು ಗದ್ದೆಯೋ: ಈ ಹಾಡಿಯೊಳಗಿನ ಚರಂಡಿ ಇಲ್ಲದ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು, ಅಸಹ್ಯ ಹುಟ್ಟಿಸುವ ಈ ಕೆಸರು ರಸ್ತೆಯಲ್ಲೇ ಗಿರಿಜನರು ಓಡಾಡುತ್ತಿರುವುದು ಅದರಲ್ಲೂ ಮಕ್ಕಳು ಆಟವಾಡುತ್ತಿರುವ ದೃಶ್ಯ ಎಂಥವರನ್ನೂ ಮರುಗುವಂತೆ ಮಾಡಿದೆ. ಇದರಿಂದ ಹಾಡಿಯ ಮಂದಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ.

ಪ್ರತಿ ಕುಟುಂಬದಲ್ಲೂ ಯಾತನೆ: ಹಾಡಿಯ ಸುರೇಶ್‌ ಮನೆಯೊಂದರಲ್ಲೇ ಮೂರು ಕುಟುಂಬಗಳ ಆರು ಮಕ್ಕಳು ಸೇರಿದಂತೆ ಒಟ್ಟು 13 ಮಂದಿ ವಾಸಿಸುತ್ತಿದ್ದರೆ, ಸರೋಜ ಎಂಬುವವರ ಮನೆಯಲ್ಲಿ ಮೂವರು ಪುಟ್ಟ ಮಕ್ಕಳು ಸೇರಿದಂತೆ 10 ಮಂದಿ ವಾಸವಿದ್ದಾರೆ. ಹೀಗೆ ಎಲ್ಲಾ ಕುಟುಂಬಗಳು ಯೋಗ್ಯವಲ್ಲದ ಮನೆಗಳಲ್ಲಿ ವಾಸಿಸುತ್ತಿದ್ದರೆ ನಿತ್ಯ ಕೂಲಿಯನ್ನೇ ಅವಲಂಬಿಸಿ ಬದುಕಿನ ಬಂಡಿ ಸಾಗಿಸಬೇಕಾದ ಇವರೆಲ್ಲ ಈಗ ಪರಿಹಾರ ಕೇಂದ್ರದಲ್ಲಿದ್ದಾರೆ.

ಹಾಡಿಯ ಮನೆಗಳಲ್ಲಿ ವಾಸಿಸಲು ಆಗುತ್ತಿಲ್ಲ, ಜೀವನ ಸಾಗಿಸುವುದೇ ಕಷ್ಟವಾಗಿದೆ. ಸರ್ಕಾರದ ಯೋಗ್ಯವಾದ ಮನೆ ನಿರ್ಮಿಸಿ, ಮೂಲಭೂತ ಸೌಲಭ್ಯ ಕಲ್ಪಿಸಬೇಕು ಎಂದು ಹಾಡಿ ನಿವಾಸಿ ಸುರೇಶ್‌, ರಾಣಿ ಮತ್ತಿತರರು ಆಗ್ರಹಿಸಿದ್ದಾರೆ.

ಹಾಡಿಯ ಹಾನಿಗೊಳಗಾದ ಮನೆಗಳ ದುರಸ್ತಿಗೆ ಸೂಕ್ತ ಪರಿಹಾರ ನೀಡಲಾಗುವುದು. ಇದೀಗ ಸಂತ್ರಸ್ತರಿಗೆ ಪರಿಹಾರ ಕೇಂದ್ರದಲ್ಲಿ ಆಶ್ರಯ ಕಲ್ಪಿಸಲಾಗಿದ್ದು, ಎಲ್ಲಾ ರೀತಿಯ ಪರಿಹಾರ ನೀಡಲಾಗುವುದು.
-ಬಸವರಾಜು. ತಹಶೀಲ್ದಾರ್‌

ಬಲ್ಲೇನಗಳ್ಳಿಯ ಹಾಡಿಯ ಅಗತ್ಯವುಳ್ಳವರಿಗೆ ಹೊಸ ಮನೆ ನಿರ್ಮಿಕೊಡುವ ಹಾಗೂ ಹಾಡಿಯ ರಸ್ತೆ-ಚರಂಡಿ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು.
-ಗಿರೀಶ್‌, ತಾಪಂ ಇಒ

* ಸಂಪತ್‌ ಕುಮಾರ್‌

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.