![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 30, 2019, 3:00 AM IST
ಹುಣಸೂರು: ತಾಲೂಕಿನ ಶೆಟ್ಟಹಳ್ಳಿ ಗಿರಿಜನ ಪುನರ್ವಸತಿ ಕೇಂದ್ರದಲ್ಲಿ ಮೈಸೂರು ವೈದ್ಯಕೀಯ ತಜ್ಞರ ಸಂಘವು ಜೆಎಸ್ಎಸ್ ಆಸ್ಪತ್ರೆ ಸಹಕಾರದಲ್ಲಿ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣೆ ಶಿಬಿರದಲ್ಲಿ 350ಕ್ಕೂ ಹೆಚ್ಚು ಮಂದಿ ತಪಾಸಣೆಗೊಳಗಾದರು.
ಶೆಟ್ಟಹಳ್ಳಿ ಕೇಂದ್ರದ ಸಮುದಾಯ ಭವನದಲ್ಲಿ ನಡೆದ ಆರೋಗ್ಯ ತಪಾಸಣೆ ಶಿಬಿರದಲ್ಲಿ ಹೆಚ್ಚು ಗಿರಿಜನರಲ್ಲಿ ಅಪೌಷ್ಟಿಕತೆ, ರಕ್ತಹೀನತೆ ಇರುವುದು ಪತ್ತೆಯಾಗಿದೆ. ಅಲ್ಲದೇ 26 ಮಂದಿಗೆ ರಕ್ತದೊತ್ತಡ, 49 ಮಂದಿಗೆ ಮಧುಮೇಹ ಹಾಗೂ ಬಹುತೇಕ ಮಕ್ಕಳಿಗೆ ಚರ್ಮದ ಕಾಯಿಲೆ ಇರುವುದು ಕಂಡು ಬಂದಿದೆ. 14 ಮಂದಿಗೆ ಇಸಿಜಿ ಪರೀಕ್ಷೆ ನಡೆಸಲಾಯಿತು. ಇಬ್ಬರಲ್ಲಿ ಹೃದಯ ಕಾಯಿಲೆ ಪತ್ತೆಯಾಯಿತು.
ಶಿಬಿರದಲ್ಲಿ ಮಾತನಾಡಿದ ಮೈಸೂರು ವೈದ್ಯಕೀಯ ತಜ್ಞರ ಸಂಘದ ಅಧ್ಯಕ್ಷ ಡಾ.ಬಾನುಕುಮಾರ್, ಆದಿವಾಸಿ ಕೇಂದ್ರವನ್ನು ಆಯ್ಕೆ ಮಾಡಿಕೊಂಡು ಶಿಬಿರ ನಡೆಸಲಾಗುತ್ತಿದ್ದು, ಸಂಘದ ವತಿಯಿಂದಲೇ ಉಚಿತ ಔಷಧ ವಿತರಿಸಲಾಗಿದೆ ಎಂದರು.
ಶಿಬಿರದಲ್ಲಿ ಸಂಘದ ಕಾರ್ಯದರ್ಶಿ ಡಾ.ಅಶೋಕ್, ಸದಸ್ಯರಾದ ಡಾ.ಉದಯಕುಮಾರ್, ಡಾ.ಶಂಕರಪ್ಪ, ಡಾ.ಶಿವಸ್ವಾಮಿ, ಡಾ.ಅಯ್ಯಪ್ಪ, ಹುಣಸೂರಿನ ಡಾ.ವೃಷಬೇಂದ್ರಪ್ಪ, ಡಾ.ಮಹೇಶ್ಶೆಟ್ಟಿ, ಲೋಕೇಶ್, ವಿನೋದ್ಕುಮಾರ್, ಗಂಗೂ, ಪುನರ್ವಸತಿ ಕೇಂದ್ರದ ಅಧ್ಯಕ್ಷರಾದ ರಾಜಪ್ಪ, ಚಂದ್ರು, ಆಶ್ರಮ ಶಾಲೆ ಮುಖ್ಯ ಶಿಕ್ಷಕ ಶಿವಕುಮಾರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೇವಾ ಪ್ರತಿನಿ ಶೋಭಾ, ಸಂಜು, ದೀಪು ಇತರರಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.