![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Apr 2, 2019, 5:00 AM IST
ಮೈಸೂರು: ತ್ರಿವಿಧ ದಾಸೋಹಿ, ಲಿಂಗಕೈ ಡಾ.ಶಿವಕುಮಾರ ಸ್ವಾಮೀಜಿ 112ನೇ ಜನ್ಮ ದಿನವನ್ನು ಭಕ್ತರು ನಗರದ ಪ್ರಮುಖ ವೃತ್ತಗಳಲ್ಲಿ ಶ್ರದ್ಧಾ-ಭಕ್ತಿಯಿಂದ ಆಚರಿಸಿ ಸಿದ್ಧಗಂಗಾ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಪ್ರಸಾದ ವಿತರಿಸಲಾಯಿತು.
ನಗರದ ಆರ್ಟಿಒ ಕಚೇರಿ ಸಮೀಪದ ಶ್ರೀ ಬಸವೇಶ್ವರ ಎಂಟರ್ ಪ್ರೈಸಸ್ನಿಂದ ಸಿದ್ಧಗಂಗಾ ಶ್ರೀಗಳ 112ನೇ ಜನ್ಮ ದಿನೋತ್ಸವ ಪ್ರಯುಕ್ತ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ನೂರಾರು ಮಂದಿಗೆ ಪ್ರಸಾದ ವಿತರಿಸುವ ಮೂಲಕ ಶ್ರೀಗಳ ಜನ್ಮ ದಿನ ಆಚರಿಸಿ, ಸಮಾಜಕ್ಕೆ ಶ್ರೀಗಳ ಕೊಡುಗೆಯನ್ನು ಸ್ಮರಿಸಲಾಯಿತು.
ಮೈಸೂರಿನ ಪ್ರಜ್ಞಾವಂತ ನಾಗರಿಕ ವೇದಿಕೆಯ ವತಿಯಿಂದ ಚಾಮುಂಡಿಪುರಂ ವೃತ್ತದಲ್ಲಿರುವ ತಗಡೂರು ರಾಮಚಂದ್ರರಾವ್ ಉದ್ಯಾನದಲ್ಲಿ ವಿವಿಧ ತಳಿಯ ಸಸಿಗಳನ್ನು ನೆಡುವ ಮೂಲಕ ಪರಿಸರ ಗಂಗೆ ಎಂಬ ವಿಶಿಷ್ಠ ಕಾರ್ಯಕ್ರಮದ ಮೂಲಕ ಶ್ರೀಗಳನ್ನು ಸ್ಮರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ಕಸಾಪ ಜಿಲ್ಲಾಧ್ಯಕ್ಷ ಡಾ.ವೈ.ಡಿ.ರಾಜಣ್ಣ ಮಾತನಾಡಿ, ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಯವರು, ಅಕ್ಷರ,ಅನ್ನ, ವಸತಿ ನೀಡುವ ಮೂಲಕ ಕ್ರಾಂತಿ ಮಾಡಿ,111 ವರ್ಷಗಳ ಸಾರ್ಥಕ ಜೀವನ ನಡೆಸಿದ ಅವರು ಪರಿಸರ ಪ್ರೇಮಿಗಳಾಗಿದ್ದರು ಎಂದು ನೆನೆದರು.
ನಗರಪಾಲಿಕೆ ಸದಸ್ಯ ಮಾ.ವಿ.ರಾಮಪ್ರಸಾದ್, ಹೋಟೆಲ್ ಮಾಲಿಕರ ಸಂಘದ ಅಧ್ಯಕ್ಷ ಸಿ.ನಾರಾಯಣ ಗೌಡ, ಅಪೂರ್ವ ಸುರೇಶ್,ವಿಪ್ರ ಸಮುದಾಯದ ಮುಖಂಡರಾದ ಕೆ.ರಘುರಾಂ, ಡಿ.ಟಿ. ಪ್ರಕಾಶ್, ಯೋಗಾನರಸಿಂಹ, ಪ್ರಜ್ಞಾವಂತ ನಾಗರಿಕ ವೇದಿಕೆಯ ಅಧ್ಯಕ್ಷ ಕಡಕೊಳ ಜಗದೀಶ್, ಕಾರ್ಯದರ್ಶಿ ಜಯಸಿಂಹ, ರಂಗನಾಥ್, ಚಕ್ರಪಾಣಿ, ಸುಚೀಂದ್ರ, ಹರೀಶ್ ನಾಯ್ಡು, ಪರಿವರ್ತನಂ ಸಂಸ್ಥೆಯ ವಿನಯ್ ಕಣಗಾಲ್ ಹಾಜರಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.