ಜನರ ಮನಸ್ಥಿತಿ ಬದಲಾಯಿಸುವ ಪ್ರಯತ್ನ: ಉಪೇಂದ್ರ


Team Udayavani, Apr 3, 2019, 3:00 AM IST

janara

ಮೈಸೂರು: ಚುನಾವಣೆ ಎಂದರೆ ಗೆಲುವು-ಸೋಲು ಮುಖ್ಯವಲ್ಲ. ಗೆಲುವು -ಸೋಲೇ ಮುಖ್ಯ ಎಂಬ ಜನರ ಮನಸ್ಥಿತಿ ಬದಲಾಯಿಸುವುದು ನಮ್ಮ ಪ್ರಯತ್ನ ಎಂದು ಉತ್ತಮ ಪ್ರಜಾಕೀಯ ಪಕ್ಷದ ಸಂಸ್ಥಾಪಕ, ನಟ ಉಪೇಂದ್ರ ತಿಳಿಸಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಆಶಾರಾಣಿ ಪರ ಪ್ರಚಾರಕ್ಕಾಗಿ ಮಂಗಳವಾರ ಮೈಸೂರಿಗೆ ಆಗಮಿಸಿದ್ದ ಅವರು ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರಾಜಕೀಯ ವ್ಯವಸ್ಥೆಯನ್ನು ಸಂಪೂರ್ಣವಾಗಿ ಬದಲಾವಣೆ ಮಾಡುವ ದೃಷ್ಟಿಯಿಂದ ಉತ್ತಮ ಪ್ರಜಾಕೀಯ ಪಾರ್ಟಿ ಸ್ಥಾಪಿಸಲಾಗಿದ್ದು, ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮೊದಲ ಹಂತದಲ್ಲಿ ನಡೆಯುವ 14 ಕ್ಷೇತ್ರಗಳಲ್ಲೂ ಪ್ರಜಾಕೀಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ.

ರಾಜ್ಯದ 28 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, 2ನೇ ಹಂತದಲ್ಲಿ ಚುನಾವಣೆ ನಡೆಯುವ 14 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಏ.6 ಅಥವಾ 7ರಂದು ಬಿಡುಗಡೆ ಮಾಡುವುದಾಗಿ ಹೇಳಿದರು.

ವೃತ್ತಿಪರತೆ: ಇವತ್ತು ಪ್ರಜಾಪ್ರಭುತ್ವವೆಂದರೆ ಹಣಬಲ, ಜಾತಿ ಬಲ ಇರುವವರಿಗೆ ಒಂದು ದಿನ ಮತ ಹಾಕಿ 5 ವರ್ಷ ಅವರನ್ನು ಮಹಾರಾಜರಂತೆ ಮೆರೆಸುವುದಾಗಿದೆ. ಈ ವ್ಯವಸ್ಥೆ ಬದಲಾಗಬೇಖು ಶಿಸ್ತು ಬದ್ಧವಾಗಿ ವ್ಯಾಪಾರೀಕರಣದಿಂದ ರಾಜಕಾರಣವನ್ನು ತೆಗೆದು ವೃತ್ತಿಪರತೆಗೆ ತರಲು ಈ ಪ್ರಯತ್ನ ಮಾಡಲಾಗುತ್ತಿದೆ.

ಜಾತಿ, ಹಣಕ್ಕೆ ಬದಲಾಗಿ ವಿಚಾರಗಳಿಗೆ ಜನ ಮತ ನೀಡುವಂತಾಗಬೇಕು. 500 ಮತ ಬರಲಿ, ಸಾವಿರ ಮತ ಬರಲಿ ನಮ್ಮ ಪ್ರಯತ್ನವನ್ನು ಬಿಡುವುದಿಲ್ಲ. ಹಣವಿಲ್ಲದೆ, ಅಬ್ಬರದ ಪ್ರಚಾರವಿಲ್ಲದೆಯೂ ಜನರನ್ನು ತಲುಪಬಹುದು,

ರ್ಯಾಲಿ, ಸಮಾವೇಶಗಳಿಂದಲ್ಲ ವಿಚಾರಗಳಿಂದ ಜನರನ್ನು ತಲುಪಬೇಕು. ಬಾಯಿಂದ ಬಾಯಿಗೆ ಸತ್ಯ ತಲುಪಿಸುವ ಪ್ರಜಾಕೀಯ ಮಾಡುತ್ತಿದ್ದೇವೆ. ಚುನಾವಣೆಗೆ ಫ‌ಂಡ್‌ ಬರದೆ ರಾಜಕೀಯ ಪಕ್ಷಗಳವರು ಹೊರಗೇ ಬರುವುದಿಲ್ಲ.

ಮಧ್ಯವರ್ತಿಗಳಿಲ್ಲದ ಪ್ರಜಾಕೀಯ: ಜಾತಿ ಉಳಿದಿರುವುದೇ ರಾಜಕಾರಣದಿಂದ, ಒಡೆದಾಳುವುದೇ ರಾಜಕೀಯ- ಒಂದುಗೂಡಿಸುವುದೇ ಪ್ರಜಾಕೀಯ. ಮಧ್ಯವರ್ತಿಗಳಿಲ್ಲದ ಪ್ರಜಾಕೀಯ ನಮ್ಮದು. ನಾನೊಬ್ಬ ಬದಲಾದರೆ ಏನು ಪ್ರಯೋಜನ ಎಂಬ ಆದರೆ ಯನ್ನು ಮನಸ್ಸಿನಿಂದ ತೆಗೆದುಹಾಕಿ ನಾನೊಬ್ಬ ಬದಲಾದರೆ ನಿಧಾನಕ್ಕೆ ಸಮಾಜವು ಬದಲಾಗುತ್ತದೆ.

ನಮ್ಮ ಈ ಪ್ರಯತ್ನದಲ್ಲಿ 500 ಮತ ಬಂದರೆ 500 ಜನ ಗೆದ್ದ ಹಾಗೆ, 5 ಲಕ್ಷ ಮತ ಬಂದರೆ 5 ಲಕ್ಷ ಜನರು ಗೆದ್ದ ಹಾಗೆ ಎಂದರು. ರಾಜಕೀಯದಿಂದ ಶೇ.20ರಷ್ಟು ಜನರಿಗೆ ಅನುಕೂಲ ಆಗುತ್ತಿದ್ದು, ಇನ್ನುಳಿದ ಶೇ.80ರಷ್ಟು ಜನರಿಗೆ ತೊಂದರೆ ಆಗುತ್ತಿದೆ. ಇದು ಬದಲಾಗಿ ಶೇ.80ರಷ್ಟು ಜನರಿಗೆ ಅನುಕೂಲವಾದರೆ, ಇನ್ನುಳಿದ ಶೇ.20ರಷ್ಟು ಜನರಿಗೆ ತಾನೇ ತಾನಾಗಿ ಅನುಕೂಲವಾಗಲಿದೆ ಎಂದು ಹೇಳಿದರು.

ರಾಜಕೀಯ ಪಕ್ಷಗಳು ಚುನಾವಣೆಗೆ ಮುನ್ನ ಹೊರಡಿಸುವ ಪ್ರಣಾಳಿಕೆಗಳಿಗೆ ಬೆಲೆ ಇಲ್ಲದಂತಾಗಿದೆ. ಕಾನೂನಿಗೆ ತಿದ್ದುಪಡಿ ತಂದು ಪ್ರಣಾಳಿಕೆ ಪದ್ಧತಿ ಬದಲಾಗಬೇಕು ಎಂದರು. ಮೈಸೂರು-ಕೊಡಗು ಕ್ಷೇತ್ರದ ಪಕ್ಷದ ಅಭ್ಯರ್ಥಿ ವಿ.ಆಶಾರಾಣಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಸುಮಲತಾ, ಪ್ರಕಾಶ್‌ರಾಜ್‌ ಅವರಾಗೇ ನಮ್ಮ ವಿಚಾರ ಒಪ್ಪಿ ಬರಬೇಕು. ನಾವು ಅವರನ್ನು ನಮ್ಮ ಪಕ್ಷಕ್ಕೆ ಬನ್ನಿ ಎಂದು ಕರೆಯುವುದು ರಾಜಕೀಯವಾಗುತ್ತದೆ. ಹೀಗಾಗಿ ಸಹಜವಾಗಿ ಪ್ರಜಾಕೀಯದಲ್ಲಿ ನಂಬಿಕೆ ಇರುವವರು ಬರಬೇಕು.
-ಉಪೇಂದ್ರ, ನಟ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.