ಪರಿಸರ ಸ್ನೇಹಿ ಸ್ಯಾನಿಟರಿ ಪ್ಯಾಡ್‌ ಬಳಸಿ


Team Udayavani, Oct 26, 2019, 3:00 AM IST

parisara-sne

ನಂಜನಗೂಡು: ಕಾಲ ಬದಲಾದಂತೆ ಸಮಾಜವೂ ಬದಲಾಗಬೇಕು. ಮಹಿಳೆಯರು ಪರಿಸರ ಸ್ನೇಹಿ ಸ್ಯಾನಿಟರಿ ಪ್ಯಾಡ್‌ ಬಳಸಬೇಕು ಎಂದು ಹಸಿರು ದಳ ಸಂಸ್ಥೆಯ ಸಚಿತ ಶರ್ಮಿಳಾ ಡಿಸೋಜಾ ಮನವಿ ಮಾಡಿದರು.

ನಗರದ ಜ್ಯುಬಲಿಯೇಂಟ್ಸ್‌ ಭಾರತೀಯ ಫೌಂಡೇಷ‌ನ್‌ ಆವರಣದಲ್ಲಿ ನಂಜನಗೂಡು ನಗರಸಭೆ, ಜ್ಯುಬಿಲಿಯಂಟ್‌ ಭಾರತೀಯ ಫೌಂಡೇಷನ್‌ ಹಾಗೂ ಹಸಿರು ದಳ ಸಂಸ್ಥೆ ಸಹಯೋಗದಲ್ಲಿ ಶುಕ್ರವಾರ ಆಯೋಜಿಸದ್ದ ಆಧುನಿಕ ಯುಗದಲ್ಲಿ ಮುಟ್ಟಿನ ಆಯ್ಕೆ ಹಾಗೂ ಮರುಬಳಕೆಗೆ ಅವಕಾಶವಿಲ್ಲದ ಪ್ಯಾಡ್‌ನಿಂದಾಗುವ ಸಮಸ್ಯೆಗಳ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ನಾವು ಉಪಯೋಗಿಸಿ ಬಿಸಾಡುವ ಪ್ಯಾಡ್‌ಗಳು ಪರಿಸರ ಹಾಗೂ ನಮ್ಮ ಆರೋಗ್ಯಕ್ಕೆ ಮಾರಕವಾಗಿವೆ. ಇವುಗಳನ್ನು ಸಂಪೂರ್ಣವಾಗಿ ನಿಷೇಧಿಸಬೇಕಾಗಿದೆ. ಪರಿಸರಕ್ಕೆ ಮಾರಕವಾಗುವ ರಾಸಾಯನಿಕ ಯುಕ್ತ ಸ್ಯಾನಿಟರಿ ಪ್ಯಾಡ್‌ ಬದಲು ಹೊಸದಾಗಿ ಅವಿಷ್ಕರಿಸಿರುವ ಸಿಲಿಕಾನ್‌ ಕಫ್ ಉಪಯೋಗಿಸಿ. ಇದರಿಂದ ಸುಸ್ಥಿರ ಪರಿಸರಕ್ಕೂ ನೆರವಾಗಲಿದೆ ಎಂದರು.

ಮುಟ್ಟಿನ ಸಮಯದಲ್ಲಿ ಈ ಹಿಂದೆ ಮಹಿಳೆಯರು ಹತ್ತಿ ಬಟ್ಟೆ ಬಳಸಲಾಗುತ್ತಿತ್ತು. ಬದಲಾದ ಕಾಲದಲ್ಲಿ ರಾಸಾಯನಿಕ ಯುಕ್ತ ಪ್ಯಾಡ್‌ ಬಂತು. ಈಗ ಅದರ ಬದಲಾಗಿ ಹತ್ತು ವರ್ಷಗಳ ಕಾಲ ಬಳಸಬಹುದಾದ ( ಒಂದೇ ಕಪ್‌) ಸಿಲಿಕಾನ್‌ ಕಫ್ ಆವಿಷ್ಕಾರವಾಗಿದೆ. ಇದು ಪರಿಸರ ಹಾಗೂ ಮಹಿಳೆಯರ ಆರೋಗ್ಯ ಹಾಗೂ ಪರಿಸರದ ಮೇಲೆ ಯಾವುದೇ ಹಾನಿಯಾಗುವುದಿಲ್ಲ. ಇಂತಹ ಪರಿಸರ ಸ್ನೇಹಿ ವಸ್ತುಗಳ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕಾಗಿದೆ ಎಂದು ತಿಳಿಸಿದರು.

ಇತ್ತೀಚೆಗೆ ಮುಟ್ಟಿನ ಸಮಸ್ಯೆಗೆ ಸ್ಯಾನಿಟರಿ ಪ್ಯಾಡ್‌ ಖರೀದಿಗೆ ಪ್ರತಿಯೊಬ್ಬರೂ ಸಹಸ್ರಾರು ರೂ. ವ್ಯಯಿಸುತ್ತಾರೆ. ಬಳಸಿ ಬಿಸಾಡುವ ಈ ಸ್ಯಾನಿಟರ್‌ ಪ್ಯಾಡ್‌ ಭೂಮಿಯಲ್ಲಿ ಬೇಗ ಕರಗುವುದಿಲ್ಲ. ಇದರ ಬದಲು ಕೇವಲ ನಾಲ್ಕು ಸಾವಿರ ರೂ. ನೀಡಿದರೆ ಮರು ಬಳಕೆಯ ಸಿಲಿಕಾನ್‌ ಕಪ್‌ ದೊರೆಯಲಿದೆ. ಜೀವತಾವಧಿ ಇದನ್ನು ಉಪಯೋಗಿಸಬಹುದು. ಜೊತೆಗೆ ಪರಿಸರ ಹಾಗೂ ಆರೋಗ್ಯಕ್ಕೂ ಸಹಕಾರಿಯಾಗಿರಲಿದೆ ಎಂದು ಹೇಳಿದರು.

ನಂಜನಗೂಡು ನಗರದಲ್ಲಿ ಸುಮಾರು 18 ಸಾವಿರ ಸ್ಯಾನಿಟರ್‌ ಪ್ಯಾಡ್‌ಗಳನ್ನು ಬಳಸಿ ಬಿಸಾಡಲಾಗುತ್ತಿದೆ. ಇದು ನಗರ ಸ್ವತ್ಛತೆ ಹಾಗೂ ನಗರಸಭೆಗೂ ತೊಂದರೆಯಾಗಲಿದೆ. ಪ್ರತಿಯೊಬ್ಬರೂ ಸ್ವತ್ಛ ನಂಜನಗೂಡು ಅಭಿಯಾನದಲ್ಲಿ ಪಾಲ್ಗೊಂಡು ಪರಿಸರ ಸ್ನೇಹಿ ವಸ್ತುಗಳ ಬಳಕೆಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ಕಾರ್ಯಾಗಾರದಲ್ಲಿ ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಸುಷ್ಮಾ, ಸಹಾಯಕ ಅಧಿಕಾರಿ ಬಸಂತ್‌ ಕುಮಾರ್‌, ಜ್ಯುಬಿಲಿಯಂಟ್‌ ಭಾರತೀಯ ಫೌಂಡೇಷ‌ನ್‌ನ ದೀಪಕ್‌, ರವಿ, ಹಸಿರು ದಳದ ಕಾವ್ಯಾ, ನಟರಾಜ ಇತರರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.