ಮೂಲ ಸೌಲಭ್ಯವಿಲ್ಲದಕ್ಕೆ ಮತದಾನ ಬಹಿಷ್ಕಾರ


Team Udayavani, Apr 14, 2019, 3:00 AM IST

moola

ಹುಣಸೂರು: ತಾಲೂಕಿನ ನೇರಳಕುಪ್ಪೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಿಲ್ಲೇನಹೊಸಳ್ಳಿ, ಕೆ.ಜಿ.ಹೆಬ್ಬನಕುಪ್ಪೆ ಹಾಗೂ ವಿವಿಧ ಹಾಡಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಈ ಬಾರಿ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಲು ಗ್ರಾಮಸ್ಥರು ತೀರ್ಮಾನ ಕೈಗೊಂಡಿದ್ದಾರೆ.

ಬಿಲ್ಲೇನಹೊಸಹಳ್ಳಿ ಹಾಡಿಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಗ್ರಾಮದ ಮುಖಂಡ ಎಂ.ಕೆ.ಪೂಣಚ್ಚ ಮತ್ತಿತರರು ಮಾತನಾಡಿ, ನೇರಳಕುಪ್ಪೆ ಜಂಕ್ಷನ್‌ನಿಂದ ಬಿಲ್ಲೇನಹೊಸಹಳ್ಳಿ ಸಂಪರ್ಕ ಕಲ್ಪಿಸುವ 3 ಕಿ.ಮೀ.ವರೆಗಿನ ರಸ್ತೆಯಲ್ಲಿ ಗುಂಡಿ ಬಿದ್ದು 10 ವರ್ಷ ಕಳೆದರೂ ದುರಸ್ತಿಪಡಿಸಿಲ್ಲ. ಈ ರಸ್ತೆ ಸಂಪೂರ್ಣ ಹಾಳಾಗಿದ್ದು, ಯಾವ ವಾಹನಗಳು ಓಡಾಡಲಾಗದ ಸ್ಥಿತಿ ತಲುಪಿದೆ ಎಂದು ಕಿಡಿಕಾರಿದರು.

ಬಿಲ್ಲೇನಹೊಸಹಳ್ಳಿಯ ಹೊಸಕೆರೆ, ತಾವರೆಕೆರೆ, ಅಮಕನಕಟ್ಟೆ ಕೆರೆಗಳಿಗೆ ಪಕ್ಕದಲ್ಲೇ ಇರುವ ಲಕ್ಷ್ಮಣತೀರ್ಥ ನದಿಯಿಂದ ನೀರು ತುಂಬಿಸಬೇಕು. ತೋಟದೊಳಗೆ ಇರುವ ಗ್ರಾಮದ ಮನೆಗಳಿಗೆ ನಿರಂತರ ಜ್ಯೋತಿ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಹುಲಿ, ಕಾಡಾನೆ ಹಾವಳಿ: ನಾಗರಹೊಳೆ ಉದ್ಯಾನದಂಚಿನಲ್ಲಿರುವ ಈ ಗ್ರಾಮಗಳ ಸುತ್ತ ರೈಲ್ವೆ ಹಳಿ ಬೇಲಿ ಅಳವಡಿಕೆ ಯೋಜನೆ ಅಧಕ್ಕೆ ಸ್ಥಗಿತಗೊಂಡಿದೆ. ಹಗಲು ವೇಳೆಯೇ ಹುಲಿ, ಚಿರತೆ, ಕಾಡಾನೆಗಳು ಸೇರಿದಂತೆ ವನ್ಯಜೀವಿಗಳು ಗ್ರಾಮದೊಳಗೆ ನಿರಾತಂಕವಾಗಿ ಓಡಾಡುತ್ತವೆ. ಕಳೆದ ಆರು ತಿಂಗಳಿನಿಂದ ಹುಲಿ ಆಗಾಗ್ಗೆ ಕಾಣಿಸಿಕೊಂಡು ಜೀವ ಭಯ ಹುಟ್ಟಿಸಿದ್ದರೂ ಅರಣ್ಯ ಇಲಾಖೆ ನಿರ್ಲಕ್ಷ್ಯವಹಿಸಿದೆ. ಸಾಕಷ್ಟು ಜಾನುವಾರುಗಳನ್ನು ಕೊಂದು ಹಾಕಿದೆ ಎಂದು ಉದಯ್‌, ಅಪ್ಪಣ್ಣ ಅವಲತ್ತುಕೊಂಡರು.

ಸೌಲಭ್ಯವಂಚಿತ ಹಾಡಿಗಳು: ಬಿಲ್ಲೇನಹೊಸಹಳ್ಳಿ ಹಾಗೂ ಚಂದನಗಿರಿ ಗಿರಿಜನ ಹಾಡಿಗೆ ಮೂಲಭೂತ ಸೌಕರ್ಯ ಕಲ್ಪಿಸಿಲ್ಲ. ಗಿರಿಜನರ ಭೂಮಿಗೆ ನೀರಾವರಿ ಸೌಲಭ್ಯ ನೀಡಿಲ್ಲ. ಜಮೀನಿಗೆ ತೆರಳಲು ರಸ್ತೆ ಸಂಪರ್ಕವಿಲ್ಲ, ಹೀಗೆ ಹತ್ತು ಹಲವು ಸಮಸ್ಯೆಗಳಿದ್ದರೂ ಸ್ಪಂದಿಸಬೇಕಾದ ಅರಣ್ಯ ಇಲಾಖೆ ಮತ್ತು ತಾಲೂಕು ಆಡಳಿತ ನಿರ್ಲಕ್ಷ್ಯವಹಿಸಿದೆ. ಈ ಎಲ್ಲಾ ಸಮಸ್ಯೆಗಳ ಬಗ್ಗೆ ಹೇಳಿ-ಕೇಳಿ ಸುಸ್ತಾಗಿದ್ದೇವೆ.

ಜಡ್ಡುಗಟ್ಟಿರುವ ಆಡಳಿತ, ಸ್ಪಂದಿಸದ ಜನಪ್ರತಿನಿಧಿಗಳ ತಾತ್ಸಾರ ಮನೋಭಾವದಿಂದ ಬೇಸತ್ತು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದೇವೆಂದು ಗ್ರಾಮಸ್ಥರು ತಿಳಿಸಿದರು. ಸಭೆಯಲ್ಲಿ ಮೂರು ಗ್ರಾಮಗಳ ಮುಖಂಡರಾದ ಉದಯ, ಪಾಲಾಕ್ಷ, ಜಿ.ಡಿ.ಮೋಹನ್‌, ಅಪ್ಪಣ್ಣ, ವಾಸು, ಕೆ.ರಮೇಶ್‌, ಅಣ್ಣಯ್ಯ, ರಮೇಶ ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ಉಪಸ್ಥಿತರಿದ್ದರು. ನಂತರ ಹುಣಸೂರು ನಗರಕ್ಕೆ ಆಗಮಿಸಿ, ಮನವಿ ಪತ್ರವನ್ನು ಶಿರಸ್ತೇದಾರ್‌ ಲೋಕೇಶ್‌ ಅವರಿಗೆ ಸಲ್ಲಿಸಲಾಯಿತು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.