ಅಲೆಮಾರಿಗಳಿಗೆ ಏಕಲವ್ಯ ನಗರದಲ್ಲಿ “ಮನೆ ಭಾಗ್ಯ’


Team Udayavani, Jul 16, 2017, 11:44 AM IST

mys5.jpg

ಮೈಸೂರು: ಬದುಕು ಕಟ್ಟಿಕೊಳ್ಳಲು ಊರೂರು ಮೇಲೆ ಅಲೆಯುವ ಅಲೆಮಾರಿಗಳಿಗೆ ನೆಲೆ ಸಿಕ್ಕಿದ್ದು ತಮಗೆ ಖುಷಿ ಕೊಟ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರ್ಷ ವ್ಯಕ್ತಪಡಿಸಿದರು. ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ನಾಗನಹಳ್ಳಿ ಪಂಚಾಯ್ತಿಗೆ ಸೇರಿದ ಶ್ಯಾದನಹಳ್ಳಿ ಸ.ನಂ. 53ರ 8.30 ಎಕರೆ ಪ್ರದೇಶದಲ್ಲಿ ಜೆ-ನರ್ಮ್ ಯೋಜನೆಯಡಿ ನಿರ್ಮಿಸಿರುವ ಏಕಲವ್ಯ ನಗರದಲ್ಲಿ 1040 ಮನೆಗಳನ್ನು ಉದ್ಘಾಟಿಸಿ, ಫ‌ಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು.

ಹಿಂದೆ ತಾವು ಚಾಮುಂಡೇಶ್ವರಿ ಕ್ಷೇತ್ರದ ಶಾಸಕನಾಗಿದ್ದಾಗಿನಿಂದಲೂ ಈ ಸರ್ಕಾರಿ ಜಾಗದಲ್ಲಿ ಅಲೆಮಾರಿಗಳು ಏಕಲವ್ಯ ನಗರ ಎಂದು ಹೆಸರಿಟ್ಟುಕೊಂಡು ವಾಸಿಸುತ್ತಿದ್ದರು. ಹಕ್ಕಿಪಿಕ್ಕಿ, ದೊಂಬಿದಾಸರು, ಕೊರಮ, ಕೊರಚ, ಸೋಲಿಗರು ಸೇರಿದಂತೆ ಹತ್ತಾರು ಜಾತಿಗಳವರು ಇಲ್ಲಿ ನೆಲೆಸಿದ್ದು, ಅಲೆಮಾರಿಗಳಾದ ಇವರು ಒಂದೇ ಜಾಗದಲ್ಲಿ ನೆಲೆ ನಿಲ್ಲುವುದು ಕಡಿಮೆ ಎಂದರು.

ಸಮುದಾಯ ಭವನ: ವಸತಿಹೀನರಿಗೆ ಜಿ+3 ಮನೆಗಳನ್ನು ಕೇಂದ್ರದ ಯುಪಿಎ ಸರ್ಕಾರ ಮಂಜೂರು ಮಾಡಿತ್ತು. ಕೊಳಚೆ ನಿರ್ಮೂಲನಾ ಮಂಡಳಿಯಿಂದ 48 ಕೋಟಿ ವೆಚ್ಚದಲ್ಲಿ ಹಾಲ್‌, ಬೆಡ್‌ ರೂಂ, ಅಡುಗೆ ಮನೆ, ಸ್ನಾನಗೃಹ, ಶೌಚಾಲಯ ಹೊಂದಿರುವ ಮನೆಯನ್ನು ನಿರ್ಮಿಸಿಕೊಡಲಾಗಿದೆ. ಸಣ್ಣ ಕುಟುಂಬವೊಂದು ವಾಸಿಸಲು ಸಾಕಾಗುತ್ತದೆ ಎಂದ ಅವರು, ಇಲ್ಲಿನ ನಿವಾಸಿಗಳ ಮದುವೆ ಮುಂತಾದ ಶುಭಕಾರ್ಯಗಳಿಗಾಗಿ ಸಮುದಾಯ ಭವನ ನಿರ್ಮಾಣಕ್ಕೆ ಒಂದು ಎಕರೆ ಜಾಗ ಗುರುತಿಸುವಂತೆ ವೇದಿಕೆಯಿಂದಲೇ ಮೈಸೂರು ಜಿಲ್ಲಾಧಿಕಾರಿಗೆ ಸೂಚಿಸಿದರು.

ರಾಜಕಾರಣಿಗಳಿಗೆ ಮತದಾರರೇ ದೇವರು: ಮೂರು ಚುನಾವಣೆಗಳಲ್ಲಿ ತನಗೆ ಈ ಜನ ಮತ ಹಾಕಿದ್ದಾರೆ. ರಾಜಕುಮಾರ್‌ ಅವರು ಅಭಿಮಾನಿಗಳೇ ದೇವರು ಅನ್ನುತ್ತಿದ್ದರು. ರಾಜಕಾರಣಿಗಳಿಗೆ ಮತದಾರರೇ ದೇವರು, ನೀವು ಆಯ್ಕೆ ಮಾಡಿ ಕಳುಹಿಸದೆ ಹೋದರೆ ನಾವುಗಳು ಮನೆಯಲ್ಲಿರಬೇಕಾಗುತ್ತದೆ ಎಂದು ಹೇಳಿದರು. ಸದ್ಯ ಇಲ್ಲೇ ವಾಸಿಸುತ್ತಿರುವ 354 ಕುಟುಂಬಗಳಿಗೆ ಹಕ್ಕುಪತ್ರ ನೀಡಲಾಗುತ್ತಿದ್ದು, ಉಳಿದ ಮನೆಗಳನ್ನು ಇಲ್ಲೇ ವಾಸಿಸುತ್ತಿದ್ದು ಮನೆ ಸಿಕ್ಕಿಲ್ಲದವರಿಗೆ ಕೊಡಿಸುವುದಾಗಿ ಹೇಳಿದ ಅವರು, ಈ ಭಾಗದ ಹಳ್ಳಿಗಳಿಗೆ ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು.

ಬೆಂಗಳೂರ‌ಲ್ಲಿ 6 ಸಾವಿರ ಮನೆ: ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ಅಧ್ಯಕ್ಷ ಆರ್‌.ವಿ.ದೇವರಾಜ್‌ ಮಾತನಾಡಿ, ಮಂಡಳಿವತಿಯಿಂದ ಬೆಂಗಳೂರಿನಲ್ಲಿ 6 ಸಾವಿರ ಮನೆ ನಿರ್ಮಿಸಲಾಗುತ್ತಿದ್ದು, ಇನ್ನೆರಡು ತಿಂಗಳಲ್ಲಿ ಉದ್ಘಾಟಿಸುವುದಾಗಿ ಹೇಳಿದರು. ಕೊಳಚೆ ಪ್ರದೇಶದ ಹಳೇ ಬಡಾವಣೆಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗಾಗಿ ಎಸ್‌ಇಪಿ-ಟಿಎಸ್‌ಪಿಯಡಿ 500 ಕೋಟಿ ಹೆಚ್ಚುವರಿ ಅನುದಾನವನ್ನು ಮುಖ್ಯಮಂತ್ರಿಯವರಿಗೆ ಕೋರಿದ್ದೇನೆ ಎಂದರು.

ಅಧ್ಯಕ್ಷತೆವಹಿಸಿದ್ದ ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, 2008ರಲ್ಲಿ ಸಿದ್ದರಾಮಯ್ಯ ಈ ಕ್ಷೇತ್ರದ ಶಾಸಕರಾಗಿದ್ದಾಗ ಕೇಂದ್ರದ ಯುಪಿಎ ಸರ್ಕಾರ, ರಾಜ್ಯದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಏಕಲವ್ಯ ನಗರದಲ್ಲಿ ಜೆ-ನರ್ಮ್ ಮನೆಗಳ ನಿರ್ಮಾಣಕ್ಕೆ ವಿಸ್ತತ ಯೋಜನಾ ವರದಿ ಸಿದ್ಧಪಡಿಸಲಾಯಿತು. 2010ರಲ್ಲಿ ಕಾರ್ಯಾದೇಶ ನೀಡಿ ಕಾಮಗಾರಿ ಪೂರ್ಣಗೊಂಡು ನಾಲ್ಕು ವರ್ಷಗಳೇ ಕಳೆದರೂ ಫ‌ಲಾನುಭವಿಗಳಿಗೆ ಹಕ್ಕುಪತ್ರ ನೀಡಿರಲಿಲ್ಲ ಎಂದರು.

ಕೊಳಚೆ ನಿರ್ಮೂಲನಾ ಮಂಡಳಿಗಳನ್ನು ಕೊಡುವಾಗ ಎಲ್ಲಿ ವಾಸವಿದ್ದಾರೋ ಅಲ್ಲೇ ಅವರಿಗೆ ಮನೆ ಕೊಡಿ, ಎರಡೆರಡು ಕಡೆಗಳಲ್ಲೂ ಮನೆಪಡೆಯುತ್ತಿದ್ದಾರೆ, ಇದನ್ನು ತಪ್ಪಿಸಿ ಎಂದರು. ಕೊಳಚೆ ನಿರ್ಮೂಲನಾ ಮಂಡಳಿ ನಿರ್ಮಿಸಿದ ಮನೆಗಳನ್ನು ಯಾರೂ ನಿರ್ವಹಣೆ ಮಾಡುತ್ತಿಲ್ಲ, ಹೀಗಾಗಿ ಆ ಮನೆಗಳೆಲ್ಲ ಗಬ್ಬೆದ್ದು ನಾರುತ್ತಿದ್ದು, ವಾಸಮಾಡಲಾಗದ ಪರಿಸ್ಥಿತಿ ಇದೆ. ಇದನ್ನು ಸರಿಪಡಿಸಿಕೊಡಿ, ಜತೆಗೆ ಈ ಭಾಗಕ್ಕೆ ಕಾವೇರಿ ನೀರು ಒದಗಿಸಿಕೊಡುವಂತೆ ಮುಖ್ಯಮಂತ್ರಿಯವರಲ್ಲಿ ಮನವಿ ಮನವಿ ಮಾಡಿದರು.

ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ, ವಸತಿ ಸಚಿವ ಎಂ.ಕೃಷ್ಣಪ್ಪ, ಮಾಜಿ ಶಾಸಕ ಸತ್ಯನಾರಾಯಣ, ಡಾ.ಯತೀಂದ್ರ ಸಿದ್ದರಾಮಯ್ಯ, ನಾಗನಹಳ್ಳಿ ಗ್ರಾಪಂ ಅಧ್ಯಕ್ಷೆ ಚೈತ್ರಾ, ಜಿಪಂ ಸದಸ್ಯ ದಿನೇಶ್‌ ಮೊದಲಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

Odisha-Dana

Cyclone: ಮುಂದಿನ 48 ಗಂಟೆಗಳಲ್ಲಿ ಒಡಿಶಾ, ಪ.ಬಂಗಾಳಕ್ಕೆ ಅಪ್ಪಳಿಸಲಿದೆ ʼಡಾನಾʼ ಚಂಡಮಾರುತ!

Belagavi: ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ 2 ತಾಲೂಕಿನ ಶಾಲೆಗಳಿಗೆ 3 ದಿನ ರಜೆ ಘೋಷಣೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

Belagavi: ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣ: ನಾಲ್ಕಕ್ಕೇರಿದ ಬಂಧಿತರ ಸಂಖ್ಯೆ

Rain-Kendriya

Cloud Burst: ಬೆಂಗಳೂರಿನ ಯಲಹಂಕದಲ್ಲಿ ದಾಖಲೆಯ ಮಳೆ; 10 ಬಡಾವಣೆ ಜಲಾವೃತ

Under construction building collapses in Bengaluru

Bengaluru: ಕುಸಿದ ನಿರ್ಮಾಣ ಹಂತದ ಕಟ್ಟಡ; ಮೂವರು ಸಾವು, ಹಲವರು ಸಿಲುಕಿರುವ ಶಂಕೆ

Stock Market: ಷೇರುಪೇಟೆ ಸೂಚ್ಯಂಕ 900ಕ್ಕೂ ಅಧಿಕ ಅಂಕ ಕುಸಿತ; 9 ಲಕ್ಷ ಕೋಟಿ ರೂ. ನಷ್ಟ

Stock Market: ಷೇರುಪೇಟೆ ಸೂಚ್ಯಂಕ 900ಕ್ಕೂ ಅಧಿಕ ಅಂಕ ಕುಸಿತ; 9 ಲಕ್ಷ ಕೋಟಿ ರೂ. ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nanjanagud: ಎತ್ತಿನ ಮೈ ಮೇಲೆ ನಟ ದರ್ಶನ್‌ ಖೈದಿ ಸಂಖ್ಯೆ

Nanjanagud: ಎತ್ತಿನ ಮೈ ಮೇಲೆ ನಟ ದರ್ಶನ್‌ ಖೈದಿ ಸಂಖ್ಯೆ

Hunsur: ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ:ಗಾಯಾಳು ಪಾದಚಾರಿ ಸಾವು

Hunsur: ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ:ಗಾಯಾಳು ಪಾದಚಾರಿ ಸಾವು

Muda Scam: ಮುಡಾ ಹಗರಣ ಸಿಬಿಐಗೆ ವಹಿಸಲಿ; ಯದುವೀರ್‌

Muda Scam: ಮುಡಾ ಹಗರಣ ಸಿಬಿಐಗೆ ವಹಿಸಲಿ; ಯದುವೀರ್‌

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

ನಾಡಿಗೆ ಬಂದ ಕಾಡಾನೆ… ಸಿಡಿಮದ್ದಿಗೂ ಜಗ್ಗದೆ ಅರಣ್ಯ ಸಿಬ್ಬಂದಿಗಳನ್ನು ಕಾಡಿದ ಆನೆ ಹಿಂಡು

MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ

MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

15(1)

Manipal: ಮಲ್ಪೆಯ ಮರಳು ಭೂಮಿಯಲ್ಲೊಂದು ಸುಂದರ ಉದ್ಯಾನ!

Odisha-Dana

Cyclone: ಮುಂದಿನ 48 ಗಂಟೆಗಳಲ್ಲಿ ಒಡಿಶಾ, ಪ.ಬಂಗಾಳಕ್ಕೆ ಅಪ್ಪಳಿಸಲಿದೆ ʼಡಾನಾʼ ಚಂಡಮಾರುತ!

Belagavi: ಕಿತ್ತೂರು ಉತ್ಸವ ಹಿನ್ನೆಲೆಯಲ್ಲಿ 2 ತಾಲೂಕಿನ ಶಾಲೆಗಳಿಗೆ 3 ದಿನ ರಜೆ ಘೋಷಣೆ

12

Mangaluru: ಪಟಾಕಿ ಮಾರಾಟಕ್ಕೆ 13 ಸ್ಥಳ ನಿಗದಿ; ಬೆಳಕಿನ ಹಬ್ಬಕ್ಕೆ ಭರದ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.