Cauvery ನೀರನ್ನು ತಮಿಳುನಾಡಿಗೆ ಈಗಲೂ ಕದ್ದುಮುಚ್ಚಿ ಹರಿಸಲಾಗುತ್ತಿದೆ: ಪ್ರತಾಪ್ ಸಿಂಹ ಆರೋಪ


Team Udayavani, Sep 16, 2023, 2:42 PM IST

ತಮಿಳುನಾಡಿಗೆ ಈಗಲೂ ಕದ್ದುಮುಚ್ಚಿ ನೀರನ್ನು ಹರಿಸಲಾಗುತ್ತಿದೆ: ಪ್ರತಾಪ್ ಸಿಂಹ ಆರೋಪ

ಮೈಸೂರು: ತಮಿಳುನಾಡಿಗೆ ಈಗಲೂ ಕದ್ದುಮುಚ್ಚಿ ನೀರನ್ನು ಹರಿಸಲಾಗುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಲೂ ಡ್ಯಾಂ ಗೆ ಹೋಗಿ ಹೊರಹರಿವು ಪ್ರಮಾಣ ಪರೀಕ್ಷೆ ಮಾಡಿ. ಈ ವಿಚಾರವಾಗಿ ನಾನು ಚಾಲೆಂಜ್ ಮಾಡುತ್ತೇ‌ನೆ. ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಸೆ.13 ರಿಂದ ನೀರು ಹರಿಸಲಾಗುತ್ತಿದೆ. ನಾವು ಈ ವಿಚಾರವಾಗಿ ಹೋರಾಟ ಮಾಡುತ್ತೇವೆ. ಹೇಮಾವತಿ ಡ್ಯಾಂ ನಲ್ಲಿ 12 ಟಿಎಂಸಿ ಇದೆ. ಹಾರಂಗಿ, ಕಬಿನಿ ಡ್ಯಾಂಗಳು ಬರಿದಾಗಿದೆ. ಈಗಿರುವ ಪರಿಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ನೀರು ಕೊಡಬಾರದು. ಕುಡಿಯುವ ನೀರಿನ ಉದ್ದೇಶಕ್ಕೆ ನೀರನ್ನು ಸಂಗ್ರಹಿಸಿ ಇಟ್ಟುಕೊಳ್ಳಬೇಕು ಎಂದರು.

ಸಿದ್ದರಾಮಯ್ಯ ಸರ್ಕಾರಕ್ಕೆ ರಾಜ್ಯ ರೈತರ ಹಿತ ಬೇಕಾಗಿಲ್ಲ. ಸ್ಟಾಲಿನ್ ಅವರ ಡಿಎಂಕೆ ಜೊತೆ ಮೈತ್ರಿ ಮುಖ್ಯ. ತಮಿಳುನಾಡಿಗೆ ನೀರು ಬಿಡಬೇಡಿ, ವಾಸ್ತವ ಸ್ಥಿತಿಯನ್ನು ಕೋರ್ಟ್ ಮುಂದಿಡಿ ಎಂದು ಸರ್ಕಾರಕ್ಕೆ ನಾನು ಹೇಳಿದ್ದೆ. ಸಭೆಯಲ್ಲಿಯೂ ಅದನ್ನೇ ಹೇಳಿದ್ದೆ. ಆದರೆ ಕಾಂಗ್ರೆಸ್ ಸರ್ಕಾರಕ್ಕೆ ಸ್ಟಾಲಿನ್ ಜೊತೆ ಒಳ್ಳೆಯ ನಂಟಿದೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಸಲುವಾಗಿ ರಾಜ್ಯದ ರೈತರ ಹಿತ ಹಾಳು ಮಾಡುತ್ತಿದ್ದಾರೆ. ರಾಜ್ಯದ ಜನ 135 ಸೀಟು ಕೊಟ್ಟಿದ್ದಾರೆ. ಇನ್ನು ಐದು ವರ್ಷ ಯಾರು ಏನು ಮಾಡಲಾಗದು ಎಂದುಕೊಂಡಿದ್ದಾರೆ ಎಂದರು.

ಇದನ್ನೂ ಓದಿ:Pocso Case: ಅಪ್ರಾಪ್ತೆಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ: ಯುವಕನ ಬಂಧನ

ಇದೇ ರೀತಿ ನೀರು ಬಿಟ್ಟರೆ ಬೆಂಗಳೂರು ಮೈಸೂರು ಮಂಡ್ಯ ಎಲ್ಲಾ ಕಡೆ ಕುಡಿಯುವ ನೀರಿಗೂ ಹಾಹಾಕಾರ ಬರುತ್ತದೆ. ತಮಿಳುನಾಡಿನಲ್ಲಿ 4 ಲಕ್ಷ ಹೆಕ್ಟೇರ್ ನಲ್ಲಿ ಬೆಳೆ ಬೆಳೆದಿದ್ದಾರೆ. ಅಳತೆಗೆ ಮೀರಿದ ಬೆಳೆ ಬೆಳೆದಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿ ಇದನ್ನು ಮನವರಿಕೆ ಮಾಡಿಕೊಡಬೇಕು. ರಾಜ್ಯಕ್ಕೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಪ್ರತಾಪ್ ಸಿಂಹ ಆಗ್ರಹಿಸಿದರು.

ಅದ್ದೂರಿ ಮೈಸೂರು ದಸರಾ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅದ್ದೂರಿ, ಸರಳ ದಸರಾ ಚರ್ಚೆಯಲ್ಲಿ ನಾನಿಲ್ಲ. ಸಾಂಪ್ರದಾಯಕವಾಗಿ ದಸರಾ ಮಾಡಲಿ‌. ದಸರಾ ಮಾಡುವಾಗ ಒಂದಷ್ಟು ಹಣ ಖರ್ಚಾಗುತ್ತದೆ ಎಂದ ಮಾತ್ರಕ್ಕೆ ಹಿಂದಿನಿಂದ ನಡೆದುಕೊಂಡು ಬಂದ ಸಂಪ್ರದಾಯ ಮುರಿಯುವುದು ಬೇಡ. ದಸರಾ ಅಂದರೆ ಜಂಬೂಸವಾರಿ, ದೀಪಾಲಂಕಾರ, ಕ್ರೀಡೆ, ಗೋಷ್ಠಿ ಇರುತ್ತದೆ, ಇದಕ್ಕೆಲ್ಲ ಖರ್ಚು ಆಗಿಯೇ ಆಗುತ್ತದೆ. ಬರ ಎಂದು ಸಂಪ್ರದಾಯ ಮುರಿಯುವುದು ಬೇಡ ಎಂದರು.

ಸರ್ವ ಪಕ್ಷ ಸಭೆಗೆ ಪ್ರಧಾನಿ ಸಮಯ ಕೊಡುತ್ತಿಲ್ಲ ಎಂಬ ಕಾಂಗ್ರೆಸ್ ಹೇಳಿಕೆಗೆ ತಿರುಗೇಟು ನೀಡಿದ ಅವರು, ಒಬ್ಬ ಜನ ಪ್ರತಿನಿಧಿಗೆ ಸಾಮಾನ್ಯ ಜ್ಞಾನ ಇರಬೇಕು. ಮೋದಿ ಅಲ್ಲ. ಮನಮೋಹನ್ ಸಿಂಗ್ ಬಂದರೂ ಈ ವಿಚಾರದಲ್ಲಿ ಏನು ಮಾಡಲಾಗದು. ಕಾವೇರಿ ನಿರ್ವಹಣಾ ಪ್ರಾಧಿಕಾರ ಹಾಗೂ ಸುಪ್ರೀಂ ಕೋರ್ಟ್ ನಲ್ಲಿ ನಿರ್ಣಯವಾಗಬೇಕು. ಸಿದ್ದರಾಮಯ್ಯ ಅವರು ಮೋದಿ ಬದಲು ಸ್ಟಾಲಿನ್ ಅವರಿಗೆ ಕರೆ ಮಾಡಲಿ. ನೀರು ಬಿಡುವುದುದಕ್ಕೆ ಆಗಲ್ಲ ಎಂದು ಹೇಳಲಿ. ಇವರಿಗೆ ಲೋಕಸಭಾ ಚುನಾವಣೆ ಮುಖ್ಯವೇ ಅಥವಾ ರಾಜ್ಯದ ಜನರ ಹಿತಸಾಕ್ತಿ ಮುಖ್ಯವೇ ಎಂದು ಪ್ರಶ್ನಿಸಿದರು.

ಚೈತ್ರಾ ಕುಂದಾಪುರ ಬಗ್ಗೆ ಪ್ರತಿಕ್ರಿಯೆಗೆ ನಿರಾಕರಿಸಿದ ಸಂಸದ ಪ್ರತಾಪಸಿಂಹ, ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ. ಅವರ ವಿಚಾರವೂ ನನಗೆ ಗೊತ್ತಿಲ್ಲ. ಈ ಬಗ್ಗೆ ನನ್ನನ್ನ ಏನೂ ಕೇಳಬೇಡಿ ಎಂದು ಹೇಳಿದರು.

ಟಾಪ್ ನ್ಯೂಸ್

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು

Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು

1-dsdsadsa

Victory parade; ಮುಂಬೈ ನಲ್ಲಿ T20 ಚಾಂಪಿಯನ್ನರಿಗೆ ಸಂಭ್ರಮೋಲ್ಲಾಸದ ಸ್ವಾಗತ

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Chirathe

Hunasuru: ಹಬ್ಬನಕುಪ್ಪೆಯಲ್ಲಿ ಬೋನಿಗೆ ಬಿದ್ದ ಚಿರತೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

1-sa-dsadsa

Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

1-asdsad

Police ಭ್ರಷ್ಟಾಚಾರದಿಂದ ಬೇಸತ್ತಿದ್ದೇನೆ: ಶಾಸಕ ಕಂದಕೂರ ರಾಜೀನಾಮೆ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.