ವರುಣಾ ಕೆರೆಯಲ್ಲಿ ಜಲಕ್ರೀಡೆ ಆರಂಭ


Team Udayavani, Oct 6, 2018, 11:33 AM IST

m2-varuna.jpg

ಮೈಸೂರು: ನಗರದೆಲ್ಲೆಡೆ ವಿಶ್ವವಿಖ್ಯಾತ ದಸರಾ ಮಹೋತ್ಸವದ ಸಂಭ್ರಮ ಕಳೆಕಟ್ಟಿದೆ. ನಾಡಹಬ್ಬದ ಆಕರ್ಷಣೆ ಕಣ್ತುಂಬಿಕೊಳ್ಳಲು ನಗರಕ್ಕಾಗಮಿಸುವ ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಆಯೋಜಿಸಿರುವ ಜಲಸಾಹಸ ಕ್ರೀಡೆಗಳಿಗೆ ಶುಕ್ರವಾರ ಚಾಲನೆ ದೊರೆಯಿತು.

ದೇಶದ ಪ್ರಮುಖ ಪ್ರವಾಸಿ ಕೇಂದ್ರವಾಗಿರುವ ಮೈಸೂರಿಗೆ ಪ್ರತಿನಿತ್ಯ ಸ್ಥಳೀಯರು ಮಾತ್ರವಲ್ಲದೆ, ದೇಶ ವಿದೇಶಗಳ ಅಸಂಖ್ಯಾತ ಪ್ರವಾಸಿಗರು ಭೇಟಿ ನೀಡುತ್ತಾರೆ. ಮೈಸೂರಿನ ವಿವಿಧ ಪ್ರವಾಸಿ ತಾಣಗಳ ಸೌಂದರ್ಯವನ್ನು ಕಣ್ತುಂಬಿಕೊಳ್ಳುವ ಪ್ರವಾಸಿಗರಿಗೆ ದಸರಾ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಆಯೋಜಿಸಿರುವ ಜಲಸಾಹಸ ಕ್ರೀಡೆಗಳು ಹೊಸ ಅನುಭವ ನೀಡಲಿದೆ.

ನಗರದ ಮೈಸೂರು – ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ವರುಣಾ ಕೆರೆಯಲ್ಲಿ ನಡೆಯುತ್ತಿರುವ ಜಲಸಾಹಸ ಕ್ರೀಡೆಗಳು ಸ್ಥಳೀಯರು ಜತೆಗೆ ಪ್ರವಾಸಿಗರನ್ನು ಸೆಳೆಯಲು ಸಜ್ಜಾಗಿದೆ. ದಸರಾ ಅಂಗವಾಗಿ ಪ್ರತಿ ವರ್ಷವೂ ವರುಣಾ ಕೆರೆಯಲ್ಲಿ ಜಲಸಾಹಸ ಕ್ರೀಡೆ ಆಯೋಜಿಸಲಾಗುತ್ತಿದೆ. ಈ ಜಲಸಾಹಸ ಕ್ರೀಡೆಯನ್ನು ದಸರಾಗೆ ಮಾತ್ರವಲ್ಲದೆ ವರ್ಷವಿಡೀ ನಡೆಸಲು ಪ್ರವಾಸೋದ್ಯಮ ಇಲಾಖೆ ನಿರ್ಧರಿಸಿದೆ.

ಇದಕ್ಕಾಗಿ ಔಟ್‌ಬ್ಯಾಕ್‌ ಅಡ್ವೆಂಚರಸ್‌ ಸಂಸ್ಥೆಗೆ ಐದು ವರ್ಷಗಳ ಟೆಂಡರ್‌ ನೀಡಿದೆ. ಟೆಂಡರ್‌ ಪಡೆದ ಸಂಸ್ಥೆ ಜಲಸಾಹಸ ಕ್ರೀಡೆಗೆ ಬೇಕಾದ ಮೂಲಸೌಲಭ್ಯ ಕಲ್ಪಿಸಿ, ಜಲಸಾಹಸ ಕ್ರೀಡೆಗಳು ನಡೆಸಲು ಬೇಕಾದ ಎಲ್ಲಾ ಸೌಲಭ್ಯಗಳನ್ನು ಮಾಡಿದೆ. ಪ್ರಮುಖವಾಗಿ ಕೆರೆಯಲ್ಲಿ ಸೇತುವೆ, ಕೊಠಡಿ ನಿರ್ಮಾಣ, ಕೆರೆ ಸ್ವತ್ಛತೆ ಕಾರ್ಯ ಆರಂಭಿಸಿ ಅಚ್ಚುಕಟ್ಟಾಗಿ ಎಲ್ಲಾ ಸೌಲಭ್ಯಗಳನ್ನೂ ಕಲ್ಪಿಸಿದೆ.

12 ಮಂದಿ ತಂಡ: ಜಲಸಾಹಸ ಕ್ರೀಡೆಗೆ ಹೇಳಿ ವರುಣಾ ಕೆರೆ ಹೇಳಿಮಾಡಿಸಿದಂತಿದೆ. ಟೆಂಡರ್‌ ಪಡೆದಿರುವ ಔಟ್‌ಬ್ಯಾಕ್‌ ಸಂಸ್ಥೆ ಜಲಸಾಹಸ ಕ್ರೀಡೆಗಳನ್ನು ಸಕಲ ಸಿದ್ಧತೆ ಮಾಡಿಕೊಂಡಿದೆ. ಪ್ರವೇಶ ದ್ವಾರದಲ್ಲಿ ಟಿಕೆಟ್‌ ಕೌಂಟರ್‌ ಆರಂಭಿಸಿದ್ದು, ಟಿಕೆಟ್‌ ಪಡೆದವರು ರೆಡ್‌ಝೊàನ್‌ನಿಂದ ಲೈಫ್ಜಾಕೆಟ್‌ ಧರಿಸಿ ಬೋಟ್‌ಗಳಿರುವ ಸ್ಥಳಕ್ಕೆ ತೆರಳಬೇಕು. 

ಅಲ್ಲದೆ ಸಾರ್ವಜನಿಕರ ಸುರಕ್ಷತೆಗೆ ಬೇಕಾಗಿರುವ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ. ಜಲಸಾಹಸ ಕ್ರೀಡೆಯಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಲೈಫ್ ಜಾಕೆಟ್‌ ಧರಿಸಬೇಕಿದೆ. ಪ್ರವಾಸಿಗರಿಗೆ ಮಾಹಿತಿ ನೀಡಲೆಂದೆ ಇಂಡಿಯನ್‌ ವಾಟರ್‌ ಇನ್ಸ್‌ಟಿಟ್ಯೂಟ್‌ನಿಂದ ತರಬೇತಿ ಪಡೆದ 12 ಮಂದಿ ನುರಿತ ಈಜುಗಾರರಿದ್ದಾರೆ. ಪ್ರವಾಸಿಗರ ಅನುಕೂಲಕ್ಕಾಗಿ ಶೌಚಾಲಯ, ಬಟ್ಟೆ ಬದಲಿಸುವ ಕೊಠಡಿ, ರೆಸ್ಟೋರೆಂಟ್‌ ನಿರ್ಮಿಸಲಾಗಿದೆ.

ಯಾವ್ಯಾವ ಕ್ರೀಡೆಗೆ ಎಷ್ಟು ದರ: ಜೆಟ್‌ಸ್ಕಿ-450 ರೂ., ವಾಟರ್‌ ಟ್ರ್ಯಾಂಪೋಲಿನ್‌-150 ರೂ., ಸ್ಪೀಡ್‌ ಬೋಟ್‌-200 ರೂ., ಬನಾನ ರೈಡ್‌-300 ರೂ., ಸ್ಟಿಲ್‌ ವಾಟರ್‌ ರ್ಯಾಫ್ಟಿಂಗ್‌-100 ರೂ., ಕಯಾಕಿಂಗ್‌-100 ರೂ., ಕ್ಯಾನೋಯಿಂಗ್‌-100 ರೂ. ಹಾಗೂ ಪೆಡಲ್‌ ಬೋಟ್‌-100 ರೂ. 

ಸಚಿವರಿಂದ ಚಾಲನೆ: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ವರುಣಾ ಕೆರೆಯಲ್ಲಿ ಆಯೋಜಿಸಿರುವ ಜಲಸಾಹಸ ಕ್ರೀಡೆಗೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಹಾಗೂ ಸಾ.ರಾ.ಮಹೇಶ್‌ ಬೋಟ್‌ ಚಾಲನೆ ಮಾಡುವ ಮೂಲಕ ಚಾಲನೆ ನೀಡಿದರು. ಔಟ್‌ಬ್ಯಾಕ್‌ ಅಡ್ವೆಂಚರಸ್‌ ಸಂಸ್ಥೆ ನಡೆಸುತ್ತಿರುವ ಜಲಸಾಹಸ ಕ್ರೀಡೆಯಲ್ಲಿ ಜೆಟ್‌ಸ್ಕಿ, ವಾಟರ್‌ ಟ್ರ್ಯಾಂಪೋಲಿನ್‌, ಸ್ಪೀಡ್‌ ಬೋಟ್‌, ಬನಾನ ರೈಡ್‌, ಸ್ಟಿಲ್‌ ವಾಟರ್‌ ರ್ಯಾಫ್ಟಿಂಗ್‌, ಕಯಾಕಿಂಗ್‌, ಕ್ಯಾನೋಯಿಂಗ್‌, ಪೆಡಲ್‌ ಬೋಟ್‌ ಕ್ರೀಡೆಗಳು ಸಾರ್ವಜನಿಕರನ್ನು ಆಕರ್ಷಿಸಲಿವೆ. 

ಈ ಸಂದರ್ಭದಲ್ಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್‌, ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ಎಚ್‌.ಪಿ.ಜನಾರ್ದನ್‌, ಔಟ್‌ಬ್ಯಾಕ್‌ ಅಡ್ವೆಂಚರಸ್‌ ಸಂಸ್ಥೆಯ ಸಹ ಮಾಲಿಕ ಅಲೀಂ ಇನ್ನಿತರರು ಹಾಜರಿದ್ದರು.

ದಸರಾ ಮಹೋತ್ಸವಕ್ಕೆ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಆಯೋಜಿಸಿರುವ ಜಲಸಾಹಸ ಕ್ರೀಡೆ ಆಕರ್ಷಣೀಯವಾಗಿದೆ. ಇದಲ್ಲದೆ ಓಪನ್‌ ಬಸ್‌ ವ್ಯವಸ್ಥೆಯನ್ನೂ ಕಲ್ಪಿಸಿದೆ. ದಸರಾ ಮಹೋತ್ಸವ ಈ ಬಾರಿ ಮತ್ತಷ್ಟು ಆಕರ್ಷಕವಾಗಿರಲಿದೆ. ದಸರೆಗಾಗಿ ಈಗಾಗಲೇ ಎಲ್ಲಾ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು 2-3 ದಿನಗಳಲ್ಲಿ ಮುಗಿಯಲಿವೆ. 
-ಜಿ.ಟಿ.ದೇವೇಗೌಡ, ಉಸ್ತುವಾರಿ ಸಚಿವ

ದಸರಾ ವೇಳೆ ಜನರ ಅನುಕೂಲಕ್ಕಾಗಿ ಆಕಾಶ್‌ ಅಂಬಾರಿ ಯೋಜನೆಯಡಿ ಮೈಸೂರು-ಬೆಂಗಳೂರು ನಡುವೆ ವಿಮಾನಯಾನ ಆರಂಭಿಸಿದ್ದು ಕೇವಲ 999 ರೂ.ಗೆ ವಿಶೇಷ ಪ್ಯಾಕೇಜ್‌ ನೀಡಲಾಗಿದೆ. ಮೊದಲ ಬಾರಿಗೆ ಓಪನ್‌ ಬಸ್‌ ವ್ಯವಸ್ಥೆ ಮಾಡಲಾಗಿದೆ. ಒಂದು ಕಡೆ ಟಿಕೆಟ್‌ ಪಡೆದು ಎಲ್ಲಾ ಪ್ರವಾಸಿ ತಾಣಗಳಿಗೂ ಭೇಟಿ ನೀಡುವ ಸೌಲಭ್ಯ ಕಲ್ಪಿಸಲಾಗಿದೆ. 
-ಸಾ.ರಾ.ಮಹೇಶ್‌, ಪ್ರವಾಸೋದ್ಯಮ ಸಚಿವ

ಟಾಪ್ ನ್ಯೂಸ್

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.