![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 6, 2022, 11:32 PM IST
ಮೈಸೂರು: ಕಾಂಗ್ರೆಸ್ಗೆ ಆತ್ಮಸಾಕ್ಷಿ ಇರುವಂತೆ ನಮಗೂ ಇದೆ. ಜೂ.10ರ ಫಲಿತಾಂಶ ಎಲ್ಲದಕ್ಕೂ ಉತ್ತರ ಕೊಡಲಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಶಾಸಕರ ಆತ್ಮಸಾಕ್ಷಿ ಮತಗಳು ಕಾಂಗ್ರೆಸ್ಗೆ ಬರುತ್ತವೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರೊಬ್ಬರಿಗೆ ಆತ್ಮಸಾಕ್ಷಿ ಇರೋದಾ, ನಮಗ್ಯಾರಿಗೂ ಇಲ್ವಾ? ಆತ್ಮಸಾಕ್ಷಿ ಯನ್ನು ಅವರೊಬ್ಬರಿಗೇ ಗುತ್ತಿಗೆ ಕೊಟ್ಟಿದ್ದೇವಾ ಎಂದು ಅಸಮಾಧಾನ ಹೊರಹಾಕಿದರು.
ಜಿ.ಟಿ.ದೇವೇಗೌಡರು ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತ ನೀಡುವುದಾಗಿ ಹೇಳಿದ್ದಾರೆ. ಈ ಬಗ್ಗೆ ಬೇರೆ ಯಾರಧ್ದೋ ಮಾತುಗಳಿಗೆ ಉತ್ತರ ಕೊಡುವುದಿಲ್ಲ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಧ್ರುವನಾರಾಯಣ್ ಆಡಿರುವ ಮಾತುಗಳನ್ನೆಲ್ಲ ಕೇಳಿದ್ದೇನೆ.ಎಲ್ಲದಕ್ಕೂ ನಾಳೆ ವಿಸ್ತಾರವಾಗಿ ಉತ್ತರ ನೀಡಲಿದ್ದೇನೆ ಎಂದು ಹೇಳಿದರು.
ಬಿಜೆಪಿ ಅಭ್ಯರ್ಥಿಯೂ ಇರಲಿಲ್ಲ
ಕಳೆದ ಬಾರಿ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಂದೇ ಅಲ್ಲ, ಬಿಜೆಪಿಯೂ ಎಚ್.ಡಿ.ದೇವೇಗೌಡರ ವಿರುದ್ಧ ಅಭ್ಯರ್ಥಿ ಹಾಕಿರಲಿಲ್ಲ. ಈ ಸಂಬಂಧ ಕಾಂಗ್ರೆಸ್ಸಿಗೂ ಮೊದಲೇ ಬಿಜೆಪಿ ತೀರ್ಮಾನ ಕೈಗೊಂಡಿತ್ತು. ಬಿಜೆಪಿ ತೀರ್ಮಾನದ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಹಾಕುವುದಿಲ್ಲ ಎಂದು ಹೇಳಿತು. ಅಯ್ಯೋ ಪಾಪ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದೀರಿ. ಸಿದ್ದರಾಮಯ್ಯ ನಿಮ್ಮನ್ನು ಸೋಲಿಸಿದ್ದಾರೆ, ಈಗ ನಿಮ್ಮನ್ನು ರಾಜ್ಯಸಭೆಗೆ ಕಳುಹಿಸುತ್ತೇವೆ ಎಂದು ಅರ್ಜಿ ಇಟ್ಟುಕೊಂಡು ಬಂದಿರಲಿಲ್ಲ ಎಂದು ತಿರುಗೇಟು ನೀಡಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.