ಪಶ್ಚಿಮಘಟ್ಟ,ಗುಡ್ಡಗಾಡುಗಳಿಗೆ ಕಾಳ್ಗಿಚ್ಚು ಭೀತಿ


Team Udayavani, Mar 7, 2023, 2:41 PM IST

tdy-11

ಮೈಸೂರು: ಎಲ್ಲೆಡೆ ಬಿಸಿಲಿನ ತಾಪ ಏರುತ್ತಿದ್ದು, ಅರಣ್ಯ ಪ್ರದೇಶ ಸೇರಿದಂತೆ ಗುಡ್ಡಗಾಡು, ಬೆಟ್ಟಗಳಲ್ಲಿ ಕಾಳ್ಗಿಚ್ಚಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಕಾಳ್ಗಿಚ್ಚನ್ನು ಶೀಘ್ರದಲ್ಲೇ ನಿಯಂತ್ರಿಸಿ, ವನ್ಯ ಸಂಪತ್ತನ್ನು ಸಂರಕ್ಷಿಸಲು ಹೆಲಿಕಾಪ್ಟರ್‌ಗಳ ಅಗತ್ಯವಿದೆ.

ಬೇಸಿಗೆ ಹಿನ್ನೆಲೆ ಕಳೆದೊಂದು ತಿಂಗಳಲ್ಲಿ ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಬಿದ್ದು, ಸಾಕಷ್ಟು ಅರಣ್ಯ ನಾಶವಾಗಿದೆ. ಅದರಲ್ಲೂ ಮುಖ್ಯವಾಗಿ ಬೆಟ್ಟ ಮತ್ತು ಗುಡ್ಡಗಾಡಿನಿಂದ ಕೂಡಿದ ಅರಣ್ಯ ಪ್ರದೇಶಗಳಲ್ಲಿ ಕಾಳ್ಗಿಚ್ಚು ಕಂಡುಬಂದರೆ ತಕ್ಷಣವೇ ಬೆಂಕಿ ನಂದಿ ಸಲು ಅರಣ್ಯ ಇಲಾಖೆ ಮತ್ತು ಅಗ್ನಿ ಶಾಮಕ ಸಿಬ್ಬಂದಿ ಕಾರ್ಯಾಚರಣೆಗೆ ಇಳಿಯಲು ತೊಡಕಾಗಿದೆ. ಪರಿಣಾಮ ಇಡೀ ಕಾಡೆ ಸುಟ್ಟು ಭಸ್ಮವಾಗುತ್ತಿದೆ. ಈ ಹಿನ್ನೆಲೆ ಕಡಿದಾದ ಪ್ರದೇಶ, ವಾಹನ ತೆರಳಲಾಗದ ಕಾಡು, ಬೆಟ್ಟ-ಗುಡ್ಡ ಪ್ರದೇಶಗಳಿಗೆ ಸುಲಭದಲ್ಲಿ ಕಾರ್ಯಾಚರಣೆ ನಡೆಸಲು ಹೆಲಿಕಾಪ್ಟರ್‌ ಸೂಕ್ತವಾಗಿದ್ದು, ಬೆಂಕಿಯನ್ನು ಆರಿಸಲು ಹೆಲಿಕಾಪ್ಟರ್‌ ಬಳಸುವ ಇಚ್ಛಾ ಶಕ್ತಿಯನ್ನು ಮುಖ್ಯಮಂತ್ರಿಗಳು ತೋರಬೇಕಾಗಿದೆ. ‌

ಅಸಹಾಯಕತೆಯಲ್ಲಿ ಅರಣ್ಯ ಇಲಾಖೆ: ಹಿಂದಿ ನಿಂದಲೂ ಹಳೇ ಮೈಸೂರು ಭಾಗದಲ್ಲಿ ಬೇಸಿಗೆ ಬಂದರೆ ಬಂಡೀಪುರ, ನಾಗರಹೊಳೆ, ಬಿಆರ್‌ಟಿ, ಎಂಎಂ ಹಿಲ್ಸ್ ಮುಂತಾದ ಪ್ರದೇಶಗಳಿಗೆ ಬೆಂಕಿ ಬೀಳುವುದು ಸಾಮಾನ್ಯವಾಗಿದೆ. ಆದರೆ ಕಾಡುಗಳು ಸಮತಟ್ಟು ಪ್ರದೇಶವಾಗಿದ್ದರೆ ಬೆಂಕಿ ಬಿದ್ದಾಗ ಆ ಪ್ರದೇಶಗಳಿಗೆ ತಕ್ಷಣವೇ ವಾಹನಗಳ ಮೂಲಕ ತಲುಪಿ ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಬಹುದಿತ್ತು. ಕಣಿವೆ, ಬೆಟ್ಟ, ಇಳಿಜಾರಿನಿಂದ ಕೂಡಿದ ಪ್ರದೇಶಗಳಿಗೆ ವಾಹನಗಳ ಮೂಲಕ ತೆರಳಿ ಬೆಂಕಿ ನಂದಿಸುವುದು ಕಷ್ಟ. ಜತೆಗೆ ಇಲಾಖೆ ಸಿಬ್ಬಂದಿ, ಸ್ವಯಂಸೇವಕರು ಕಾಲ್ನಡಿಗೆಯಲ್ಲಿ ತೆರಳಿ ಬೆಂಕಿ ನಂದಿಸಲು ಸಾಕಷ್ಟು ಸಮಯ ವ್ಯಯವಾಗಲಿದೆ.

ಇದರಿಂದ ಸಾವಿರಾರು ಎಕರೆ ಕಾಡಿಗೆ ಬೆಂಕಿಯ ಕೆನ್ನಾಲಿಗೆ ಹಬ್ಬಿ ಇಡೀ ಕಾಡೇ ನಾಶವಾಗುವ ಸಾಧ್ಯತೆ ಇದೆ. ಇತ್ತೀಚೆಗೆ ಪಶ್ಚಿಮ ಘಟ್ಟದ ಕಾಡುಗಳು ಮತ್ತು ಬೆಟ್ಟ, ಗುಡ್ಡಗಾಡುಗಳಿಗೆ ಬೆಂಕಿ ಬೀಳುತ್ತಿರುವುದರಿಂದ ಅರಣ್ಯ ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಟ್ಟ ಏರಿ ಕಡಿದಾದ ಪ್ರದೇಶವನ್ನು ತಲುಪಲು ಅಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಹೆಲಿಕಾಪ್ಟರ್‌ ಬಳಕೆ ಅನಿವಾರ್ಯವಾಗಿದೆ. ಹಾಗಾಗಿ ಹೆಲಿಕಾಪ್ಟರ್‌ ಸಹಾಯದಿಂದ ಮೇಲಿನಿಂದ ನೀರನ್ನು ಚಿಮುಕಿಸಿದರೆ ಮಾತ್ರ ಬೆಂಕಿಯನ್ನು ನಂದಿಸಲು ಸಾಧ್ಯವಾಗುತ್ತದೆ. ಇಲ್ಲವಾದರೆ ಅಪಾರ ಪ್ರಮಾಣದ ಕಾಡು ನಷ್ಟವಾಗಲಿದೆ.

ತಿಂಗಳಲ್ಲಿ 10 ಪ್ರಕರಣಗಳು: ಕಳೆದೊಂದು ತಿಂಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಆಕಸ್ಮಿಕ ಮತ್ತು ಕಿಡಿಗೇಡಿಗಳಿಂದ ಕಾಡು ಮತ್ತು ಬೆಟ್ಟಗಳಿಗೆ ಬೆಂಕಿ ಬಿದ್ದ ಪರಿಣಾಮ ಮೂರ್ನಾಲ್ಕು ದಿನಗಳ ಕಾಲ ನಿರಂತರವಾಗಿ ಹೊತ್ತಿ ಉರಿದ ಉದಾಹರಣೆಗಳು ಕಣ್ಣಮುಂದಿದೆ. ಫೆ.18ರಂದು ಸೋಮವಾರಪೇಟೆ ತಾಲೂಕಿನ ಪುಷ್ಪಗಿರಿ ರೇಂಜ್‌ ವ್ಯಾಪ್ತಿಯ ಕೋಟೆ ಬೆಟ್ಟ ಹಾಗೂ ನಿಶಾನಿ ಬೆಟ್ಟ ಹಾಗೂ ಅದೇ ದಿನ ಸಕಲೇಶಪುರ ತಾಲೂಕಿನ ರಣಭಿಕ್ತಿ ರಕ್ಷಿತಾರಣ್ಯ ಬೆಂಕಿಗಾಹುತಿಯಾಯಿತು. ಫೆ.23ರಂದು ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕುದುರೆಮುಖ ಕಡೆಯಿಂದ ಅಳದಂಗಡಿಯ ಊರ್ಜಾಲುಬೆಟ್ಟ, ಹೂವಿನಕೊಪ್ಪಲು ಅರಣ್ಯದ ಹುಲ್ಲುಗಾವಲು ಪ್ರದೇಶ ಸುಟ್ಟು ಭಸ್ಮವಾಯಿತು.

ಹಾಗೆಯೇ ಫೆ.25ರಂದು ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದಲ್ಲಿರುವ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಲ್ಲಿನ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದು ಸತತ ನಾಲ್ಕುದಿನಗಳ ಕಾಲ ಹೊತ್ತಿ ಉರಿಯಿತು. ಮಾ.4ರಂದು ಬಂಡೀಪುರ ವ್ಯಾಪ್ತಿಯ ಗೋಪಾಲಸ್ವಾಮಿ ಬೆಟ್ಟ ವಲಯ ವ್ಯಾಪ್ತಿಯ ಮೊಗನಹಳ್ಳಿ ಬಳಿ ಬೆಟ್ಟಕ್ಕೆ ಬೆಂಕಿ ಬಿದ್ದು ಬಹಳಷ್ಟು ಅರಣ್ಯ ನಾಶವಾಯಿತು. ಅದೇ ದಿನ ಚಾಮುಂಡಿಬೆಟ್ಟದಲ್ಲಿ ಕಿಡಿಗೇಡಿಗಳು ಹೆಚ್ಚಿದ ಬೆಂಕಿಗೆ ಅಪಾರ ಪ್ರಮಾಣದ ಕಾಡು ನಾಶವಾಯಿತು. ಈ ವೇಳೆ ಬೆಂಕಿ ನಂದಿ ಸಲು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಯಿತು. ಈ ಎಲ್ಲ ಪ್ರದೇಶಗಳು ಗುಡ್ಡಗಾಡಿನಿಂದ ಕೂಡಿರುವುದರಿಂದ ಅರಣ್ಯ ಇಲಾಖೆ ಬೆಂಕಿಯನ್ನು ಹತೋಟಿಗೆ ತರಲು ಪರದಾಡಿದ ಪ್ರಸಂಗ ನಡೆಯಿತು.

ಒಂದು ವೇಳೆ ರಾಜ್ಯದಲ್ಲಿ ಕಾಳ್ಗಿಚ್ಚು ನಿಯಂತ್ರಣಕ್ಕೆ ಹೆಲಿಕಾಪ್ಟರ್‌ ನಿಯೋಜಿಸಿದ್ದರೆ ಸಾವಿರಾರು ಹೆಕ್ಟೇರ್‌ ಪ್ರದೇಶದ ಅರಣ್ಯ ನಾಶವಾಗುವುದು ತಪ್ಪಿಸಿದಂತಾಗುತ್ತಿತ್ತು.

ಕಾಳ್ಗಿಚ್ಚಿಗೆ ಪ್ರಮುಖ ಕಾರಣಗಳು: ಇತ್ತೀಚಿನ ತಿಂಗಳುಗಳಲ್ಲಿ ವಾತಾವರಣದಲ್ಲಿ ಬದಲಾವಣೆ ಕಂಡುಬಂದಿದ್ದು, ಉಷ್ಣಾಂಶ ಪ್ರಮಾಣ ಏರಿಕೆ ಕಂಡಿದೆ. ಜತೆಗೆ ಅತಿಹೆಚ್ಚು ಗಾಳಿ ಬೀಸುತ್ತಿರುವುದಲ್ಲದೇ, ವಾತಾವರಣದಲ್ಲಿನ ಉಷ್ಣಾಂಶದಿಂದ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ನೂರಾರು ಎಕರೆಗೆ ವ್ಯಾಪಿಸಿಕೊಳ್ಳುತ್ತಿದೆ. ಕಾಳ್ಗಿಚ್ಚು ನಿಯಂತ್ರಿಸಲು ಆದಿವಾಸಿ ಜನರನ್ನು ಬಳಸಿಕೊಳ್ಳುವುದೇ ಸೂಕ್ತ ಎಂದು ವನ್ಯಜೀವಿ ತಜ್ಞ ಕೃಪಾಕರ ಸೇನಾನಿ ಉದಯವಾಣಿಗೆ ತಿಳಿಸಿದ್ದಾರೆ.

ಅರಣ್ಯ ಪ್ರದೇಶಕ್ಕೆ ದೊಡ್ಡಮಟ್ಟದ ಬೆಂಕಿಬಿದ್ದು, ನಮ್ಮಿಂದ ನಿಯಂತ್ರಣ ಸಾಧ್ಯವಾಗದೇ ಇದ್ದ ಸಂದರ್ಭ ಹೆಲಿಕಾಪ್ಟರ್‌ ಬಳಸಿಕೊಳ್ಳಲು ಸಿದ್ಧತೆ ಮಾಡಿಕೊಂಡಿದ್ದೇವೆ. ಈಗಾಗಲೇ ಬೆಂಗಳೂರಿನ ಯಲಹಂಕದಲ್ಲಿನ ವಾಯುಸೇನೆಯೊಂದಿಗೆ ಇಲಾಖೆ ಪಿಸಿಸಿಎಫ್ ಮಟ್ಟದಲ್ಲಿ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. – ರಮೇಶ್‌ ಕುಮಾರ್‌, ಸಿಎಫ್ ಬಂಡೀಪುರ.

ಹುಲಿ ಸಂರಕ್ಷಿತಾರಣ್ಯಗಳಿಗೆ ಸಾಕಷ್ಟು ಸಾಕಷ್ಟು ಅನದಾನ ಇರುತ್ತದೆ. ಆದರೆ ಉಳಿದ ಇತರೆ ರಕ್ಷಿತಾರಣ್ಯಗಳಲ್ಲಿ ಅನುದಾನ ಸಮಸ್ಯೆ ಇದೆ. ಜತೆಗೆ ಈ ಕಾಡುಗಳಲ್ಲಿ ಸಿಬ್ಬಂದಿ ಕೊರತೆ. ಹಾಗಾಗಿ ಆನೆ ಟಾಸ್ಕ್ಫೋರ್ಸ್‌ನಂತೆ ಬೆಂಕಿ ನಿಗ್ರಹ ಪಡೆ ರಚಿಸಿ, ಸ್ಥಳೀಯರನ್ನು ನೇಮಿಸ ಬೇಕು. ಜನರು ಹೋಗದ ಸ್ಥಳಗಳಿಗೆ ಹೆಲಿಕಾಪ್ಟರ್‌ ಬಳಕೆ ಮಾಡಿಕೊಳ್ಳುವುದು ಅಗತ್ಯವಾಗಿದೆ. – ಜಿ. ವೀರೇಶ್‌, ಗೌರವ ವನ್ಯಜೀವಿ ಪರಿಪಾಲಕ ಚಿಕ್ಕಮಗಳೂರು.

-ಸತೀಶ್‌ ದೇಪುರ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru-Elephant

Mysuru Dasara: ಎರಡನೇ ತಂಡದ ಗಜಪಡೆಗೆ ತೂಕ ಪರೀಕ್ಷೆ: ಸುಗ್ರೀವ 5.2 ಟನ್‌

3-hunsur

Hunsur: ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯ: ಇನ್ಸ್ಪೆಕ್ಟರ್ ಮುನಿಯಪ್ಪ

CM-Siddu

Report on Corruption: ಕೋವಿಡ್‌ ಅಕ್ರಮ: ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ: ಸಿಎಂ

Yadhuveer

Mysuru: ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಅಕ್ರಮ: ಸಂಸದ ಯದುವೀರ್‌

Chamundi-Sabhe

Mysore: ಚಾಮುಂಡೇಶ್ವರಿ ದೇಗುಲ ಸಂಪ್ರದಾಯ, ಘನತೆ ಕಾಪಾಡಿ ಉನ್ನತೀಕರಿಸಿ: ಸಿದ್ದರಾಮಯ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.