ಫೆಡರೇಷನ್‌ ಇಲ್ಲದಿದ್ದರೆ ನೌಕರರಿಗೆ ನ್ಯಾಯ ಸಿಗದು


Team Udayavani, Dec 19, 2019, 3:00 AM IST

faderatuion

ಮೈಸೂರು: ನೌಕರರ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಹಾಗೂ ಒಗ್ಗಟಿನಿಂದ ಹೋರಾಟ ನಡೆಸಲು ಯೂನಿಯನ್‌ ಬಹಳ ಮುಖ್ಯವಾಗಿದ್ದು, ಯೂನಿಯನ್‌ನಿಂದಾಗಿ ಕೆಎಸ್‌ಆರ್‌ಟಿಸಿ ನೌಕರರ ಅನೇಕ ಸಮಸ್ಯೆಗಳು ಬಗೆಹರಿದಿವೆ ಎಂದು ಸ್ಟಾಫ್ ಆ್ಯಂಡ್‌ ವರ್ಕರ್ ಫೆಡರೇಷನ್‌ ಉಪಾಧ್ಯಕ್ಷ ಕೊಟ್ರೇಶ್‌ ಹೇಳಿದರು. ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್‌ ವರ್ಕರ್ ಯೂನಿಯನ್‌ ಹಾಗೂ ಮೈಸೂರು ನಗರ, ಗ್ರಾಮಾಂತರ ಮತ್ತು ಚಾಮರಾಜನಗರ ವಿಭಾಗಗಳ ವತಿಯಿಂದ ಬನ್ನಿಮಂಟಪದ ಬಾಲಭವನದಲ್ಲಿ ಆಯೋಜಿಸಲಾಗಿದ್ದ ನಿವೃತ್ತ ಕಾರ್ಮಿಕರಿಗೆ ಸನ್ಮಾನ ಸಮಾರಂಭ ಮತ್ತು ಸಮ್ಮೇಳನದಲ್ಲಿ ಅವರು ಮಾತನಾಡಿದರು.

ನೌಕರರು ಒಗ್ಗಟಾಗಿದ್ದರೆ, ಯಾರು ಏನು ಮಾಡಲು ಸಾಧ್ಯವಾಗುವುದಿಲ್ಲ. ಈ ನಿಟ್ಟಿನಲ್ಲ ಪ್ರತಿಯೊಬ್ಬರು ಯೂನಿಯನ್‌ ಬೆಳವಣಿಗೆಗೆ ಸಹಕರಿಸಬೇಕು. ಆದರೆ, ಇದರ ಅರಿವಿರದ ಹೊಸದಾಗಿ ಸೇರ್ಪಡೆಗೊಂಡ ನೌಕರರು ಇದನ್ನು ಕಡೆಗಣಿಸುವುದು ಸರಿಯಲ್ಲ ಎಂದರು. ಈ ಹಿಂದೆ ನೌಕರರು ಸಮಸ್ಯೆಗಳನ್ನು ಬಗೆಹರಿಸುವಂತೆ ನಡೆಸಿದ ಹೋರಾಟಗಳಲ್ಲಿ ಜೈಲಿಗೆ ಹೋಗಿದ್ದಾರೆ, ಲಾಠಿ ಏಟು ತಿಂದಿದ್ದಾರೆ. ಈ ಎಲ್ಲದರ ನೋವಿನ ಫ‌ಲವೇ ಇಂದು ಅನೇಕ ಸಮಸ್ಯೆಗಳು ಬಗೆಹರಿದಿವೆ ಎಂಬುದನ್ನು ಅರಿತುಕೊಳ್ಳಬೇಕಿದೆ ಎಂದು ಹೇಳಿದರು.

ಪದಾಧಿಕಾರಿಗಳ ನೇಮಕ: ಗ್ರಾಮಾಂತರ ವಿಭಾಗದ ಪ್ರಧಾನ ಕಾರ್ಯದರ್ಶಿ ಎಸ್‌.ಕೆ.ಬಂಡಿ ಮಾತನಾಡಿ, ಕೆಎಸ್‌ಆರ್‌ಟಿಸಿ ಫೆಡರೇಷನ್‌ ಹಲವು ವಷಗಳಿಂದ ಶ್ರಮವಹಿಸಿ ಉತ್ತಮ ಕಾರ್ಯದಿಂದ ಸಂಸ್ಥೆಯ ಕಾರ್ಮಿಕರಿಗೆ ನೆರಳಾಗಿ ನಿಂತಿದೆ. ಫೆಡರೇಷನ್‌ ಇಲ್ಲದಿದ್ದರೆ ಕಾರ್ಮಿಕರ ನೋವುಗಳಿಗೆ ನ್ಯಾಯ ಸಿಗುತ್ತಿರಲಿಲ್ಲ. ಅದಕ್ಕಾಗಿ ಪ್ರತಿ ಮೂರು ವರ್ಷಕ್ಕೊಮ್ಮೆ ಪೆಢರೇಷನ್‌ ಪದಾಧಿಕಾರಿಗಳ ನೇಮಕ ಮಾಡಬೇಕು. ಇದರಿಂದ ಉತ್ತಮ ಹೋರಾಟ ಕಾರ್ಮಿಕರಿಗೆ ಸಿಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಡಿ.ಎ.ವಿಜಯ ಭಾಸ್ಕರ್‌, ಖಜಾಂಚಿ ಎಚ್‌.ಚಂದ್ರೇಗೌಡ, ಬಿ.ಎಸ್‌.ಸುರೇಶ್‌, ಎಚ್‌.ವಿ.ಅನಂತ ಸುಬ್ಬರಾವ್‌ ಹಾಗೂ ಸಂಘಟನೆಗೆ ಶ್ರಮಿಸಿದ ನಿವೃತ್ತ ಮುಖಂಡರಿಗೆ ಸನ್ಮಾನ ಮಾಡಲಾಯಿತು.‌ ಈ ಸಂದರ್ಭದಲ್ಲಿ ಸ್ಟಾಫ್ ಆ್ಯಂಡ್‌ ವರ್ಕರ್‌ ಫೆಡರೇಷನ್‌ ಜಂಟಿ ಕಾರ್ಯದರ್ಶಿ ಟಿ.ಎಲ್‌.ರಾಜಗೋಪಾಲ, ಉಪಾಧ್ಯಕ್ಷ ಸಂಪತ್‌, ಹಿರಿಯ ಉಪಾಧ್ಯಕ್ಷ ರವೀಂದ್ರ ಕುಮಾರ್‌, ಚಾಮರಾಜನಗರ ವಿಭಾಗದ ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ, ನಗರ ಸಾರಿಗೆ ವಿಭಾಗದ ಪ್ರಧಾನ ಕಾರ್ಯದರ್ಶಿ ಮಧುಸೂದನ ಇತರರಿದ್ದರು.

ನಿವೃತ್ತಿ ಬಳಿಕವೇ ಭವಿಷ್ಯ ನಿಧಿ ಬಳಸಿ: ಕೆಎಸ್‌ಆರ್‌ಟಿಸಿ ಕಾರ್ಮಿಕರಿಗೆ ಮೂಲ ವೇತನದಲ್ಲಿ ಹಣ ಕಡಿತ ಮಾಡಿ ಭವಿಷ್ಯ ನಿಧಿ ರೂಪಿಸಲಾಗಿದ್ದು, ಇಂದು ಉತ್ತಮ ಬಡ್ಡಿ ಸಹಾ ಭವಿಷ್ಯ ನಿಧಿಗೆ ಸಿಗುತ್ತಿದೆ. ಯಾರು ಕೂಡ ಕರ್ತವ್ಯದಲ್ಲಿರುವಾಗಲೇ ಈ ಹಣವನ್ನು ತೆಗೆದುಕೊಳ್ಳಬೇಡಿ. ಇದನ್ನು ನಿವೃತ್ತಿ ನಂತರ ತೆಗೆದುಕೊಂಡು ಉತ್ತಮ ಕಾರ್ಯಗಳಿಗೆ ಉಪಯೋಗಿಸಿ ಎಂದು ಸ್ಟಾಫ್ ಆ್ಯಂಡ್‌ ವರ್ಕರ್ ಫೆಡರೇಷನ್‌ ಖಜಾಂಚಿ ಎಚ್‌.ಚಂದ್ರೇಗೌಡ ಸಲಹೆ ನೀಡಿದರು. ಇಂದು ಆನ್‌ಲೈನ್‌ ಮೂಲಕ ತಮ್ಮ ಮೊಬೈಲ್‌ ಫೋನ್‌ ಮೂಲಕವೇ ತಮ್ಮ ಭವಿಷ್ಯ ನಿಧಿ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳಬಹುದು. ಭವಿಷ್ಯ ನಿಧಿ ಹಣವನ್ನು ಮಕ್ಕಳ ಶಿಕ್ಷಣ, ಮನೆ ನಿರ್ಮಾಣ ಹಾಗೂ ಆರೋಗ್ಯ ಸಮಸ್ಯೆಗಳಿಗೆ ಉಪಯೋಗ ಮಾಡಿಕೊಂಡು ಉತ್ತಮ ಜೀವನ ಸಾಗಿಸುವಂತೆ ಕಿವಿಮಾತು ಹೇಳಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.