ಯದುವಂಶದ ಕುಡಿಗೆ ಶೀಘ್ರವೇ ನಾಮಕರಣ
Team Udayavani, Jan 4, 2018, 7:15 AM IST
ಮೈಸೂರು: ಯದುವಂಶದ ಕುಡಿಗೆ ಶೀಘ್ರದಲ್ಲೇ ನಾಮಕರಣ ಮಾಡಲಾಗುವುದು ಎಂದು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯದುವಂಶದ ಹೆಸರನ್ನು ಬಿಂಬಿಸುವಂತಹ ಸೂಕ್ತ ಹೆಸರನ್ನು ನಾಮಕರಣ ಮಾಡಲು ಈಗಾಗಲೇ ಹುಡುಕಾಟ ನಡೆಸಿದ್ದೇವೆ. 2-3 ತಿಂಗಳಲ್ಲಿ ನಾಮಕರಣ ಮಾಡಲಿದ್ದೇವೆ. ನಾಮಕರಣ ಶಾಸ್ತ್ರವನ್ನು ಯಾವ ರೀತಿ ಮಾಡಬೇಕು ಎಂಬುದನ್ನು ಅಮ್ಮ ನಿರ್ಧರಿಸಲಿದ್ದಾರೆ. ಮೈಸೂರು ಅರಮನೆಯಲ್ಲೇ ನಾಮಕರಣ ಕಾರ್ಯಕ್ರಮ ಮಾಡಬೇಕೆಂಬುದು ನಮ್ಮ ಅಭಿಲಾಷೆ ಎಂದರು.
60 ವರ್ಷಗಳ ಬಳಿಕ ಮೈಸೂರು ರಾಜ ಮನೆತನದಲ್ಲಿ ಪುತ್ರ ಸಂತಾನ ಪ್ರಾಪ್ತಿಯಾಗಿರುವುದು ಎಲ್ಲರಿಗೂ ತುಂಬಾ ಸಂತೋಷವಾಗಿದೆ. ಮಗನೊಂದಿಗೆ ಇದ್ದು 2018ರ ಹೊಸ ವರ್ಷಾಚರಣೆ ಮಾಡಿದ್ದೇನೆ. ನಮಗಿದು ಸಂತಸದ ವರ್ಷವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಆತುರದ ನಿರ್ಧಾರ ಮಾಡಲ್ಲ: ರಾಜಕೀಯಕ್ಕೆ ಬರುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ. ಈ ಬಗ್ಗೆ ಆತುರದ ನಿರ್ಧಾರ ಮಾಡಲ್ಲ, ಯಾವ ರಾಜಕೀಯ ನಾಯಕರೂ ನನ್ನೊಂದಿಗೆ ಆ ಬಗ್ಗೆ ಚರ್ಚಿಸಿಲ್ಲ, ಜನರಿಗೆ ಒಳಿತಾಗಲಿದೆ ಎಂದರೆ ಮುಂದೆ ನೋಡೋಣ. ಸದ್ಯಕ್ಕೆ ನನಗೆ ಸಾಮಾಜಿಕ ಸೇವೆ, ಟ್ರಸ್ಟ್ಗಳ ಕೆಲಸ, ಬ್ಯುಸಿನೆಸ್ ಹೀಗೆ ಅನೇಕ ಕೆಲಸವಿದೆ ಎಂದು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Bigg Boss Kannada11: ಬಿಗ್ ಬಾಸ್ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?
Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.