ಹದಗೆಟ್ಟ ರಸ್ತೆ ದುರಸ್ತಿ ಯಾವಾಗ?

ವಗ್ಗಡೆ-ಮಾವಿನಮನೆ ಸಂಪರ್ಕ ರಸ್ತೆಯಲ್ಲಿ ಓಡಾಡೋದೇ ಕಷ್ಟ ಜನಪ್ರತಿನಿಧಿಗಳು- ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿ

Team Udayavani, Nov 6, 2019, 3:14 PM IST

6–November-13

„ಪ್ರಶಾಂತ್‌ ಶೆಟ್ಟಿ
ಎನ್‌.ಆರ್‌.ಪುರ:
ಗುಬ್ಬಿಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಗ್ಗಡೆಯಿಂದ ಮಾವಿನ ಮನೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಶಿಥಿಲಾವಸ್ಥೆಗೆ ತಲುಪಿದ್ದು, ಪಾದಚಾರಿಗಳು ಸೇರಿದಂತೆ ಯಾವುದೇ ವಾಹನಗಳು ಓಡಾಡುವುದೇ ಪ್ರಯಾಸದ ಕೆಲಸವಾಗಿದೆ.

ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಸುಮಾರು 5 ಕಿ.ಮೀ. ಉದ್ದವಿದೆ. ಅಲ್ಲದೇ, ವಗ್ಗಡೆ, ಗುಬ್ಬಿಗಾ,ಅರಳಿಕೊಪ್ಪ, 8ನೇ ಮೈಲಿಕಲ್ಲು, ಮೂಡಬಾಗಿಲು, ಬಂಗುವಾನಿ, ಗುಂಡುವಾಗಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತದೆ.

ಸಾಕಷ್ಟು ಗ್ರಾಮಸ್ಥರು ತಾಲೂಕು ಕೇಂದ್ರಕ್ಕೆ ಹಾಗೂ ಬೇರೆ ಬೇರೆ ಊರುಗಳಿಗೆ ಹೋಗಬೇಕಾದರೆ ಮುಖ್ಯರಸ್ತೆಗೆ ತಲುಪಲು ಇದೇ ರಸ್ತೆ ಅವಲಂಬಿಸಿದ್ದಾರೆ. ಈ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಯ ಜನರು ಹೆಚ್ಚಾಗಿ ವಾಸವಾಗಿದ್ದಾರೆ. ಸುಮಾರು 53 ಮನೆಗಳಿಗೆ ಇದು ಸಂಪರ್ಕ ಕಲ್ಪಿಸುತ್ತದೆ.

ರಸ್ತೆ ಪ್ರಸ್ತುತ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದ್ದು, ರಸ್ತೆಗೆ ಹಾಕಿದ್ದ ಡಾಂಬರು ಸಂಪೂರ್ಣ ಮಾಯವಾಗಿದೆ. ಜಲ್ಲಿ ಕಿತ್ತುಹೋಗಿದೆ . ಕೆಲವು ಕಡೆಗಳಲ್ಲಿ ರಸ್ತೆ ತುಂಬಾ ಗುಂಡಿ ಬಿದ್ದಿದ್ದು, ಮಳೆಗಾಲದಲ್ಲಿ ನೀರು ತುಂಬಿಕೊಳ್ಳುವುದರಿಂದ ಕೆಸರುಗದ್ದೆಯಾಗಿ ಪರಿಣಮಿಸುತ್ತದೆ. ಕಾರು, ದ್ವಿಚಕ್ರ ವಾಹನಗಳಲ್ಲೂ ಸಂಚರಿಸುವುದು ದುಸ್ತರವಾಗಿ ಪರಿಗಣಿಸಿದೆ ಎಂಬುದು ಗ್ರಾಮಸ್ಥರ ಅಳಲು.

ರಸ್ತೆಯ ಎರಡೂ ಬದಿಯಲ್ಲಿ ಸೂಕ್ತ ಚರಂಡಿ ವ್ಯವಸ್ಥೆಯಿಲ್ಲದೆ ಇರುವುದರಿಂದ ಮಳೆ ನೀರು ಸಂಪೂರ್ಣವಾಗಿ ರಸ್ತೆಯ ಮೇಲೆ ಹರಿಯುತ್ತದೆ. ಇದರಿಂದಾಗಿ ರಸ್ತೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ರಸ್ತೆ ಸಂಪೂರ್ಣವಾಗಿ ಹದಗೆಟ್ಟಿರುವುದರಿಂದ ಈ ಗ್ರಾಮಕ್ಕೆ ಮಳೆಗಾಲ ದಲ್ಲಿ ಆಟೋದವರು ಬರುವುದಕ್ಕೂಹಿಂಜರಿಯುತ್ತಾರೆ. ಒಂದು ವೇಳೆ  ಬಂದರೂ ದುಪ್ಪಟ್ಟು ಹಣ ಪಾವತಿ ಮಾಡಬೇಕಾದ ಸ್ಥಿತಿಯಿದೆ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಗೆ ಎಚ್‌.ಜಿ.ಗೋವಿಂದೇಗೌಡರು ಶಾಸಕರಾಗಿದ್ದಾಗ ಜಲ್ಲಿ ಹಾಕಿಸಿದ್ದರು.

ಆನಂತರದಲ್ಲಿ ಬಂದ ಶಾಸಕರು ರಸ್ತೆ ಅಭಿವೃದ್ಧಿಪಡಿಸುವತ್ತ ಗಮನ ಹರಿಸಿಲ್ಲ. ಚುನಾವಣೆ ಸಂದರ್ಭದಲ್ಲಿ ಮತ ಕೇಳಲು ಬರುವ ರಾಜಕಾರಣಿಗಳು ಗ್ರಾಮಸ್ಥರ ಕಣ್ಣು ವರೆಸುವ ತಂತ್ರವಾಗಿ ಆಗಾಗ ಡಾಂಬರು ಹಾಕಿಸುತ್ತಾರೆ.

ಚುನಾವಣೆ ಮುಗಿದ ನಂತರ ಇತ್ತ ಸುಳಿಯುವುದೇ ಇಲ್ಲ ಎಂಬುದು ಗ್ರಾಮಸ್ಥರ ಆರೋಪವಾಗಿದೆ. ಜಿಲ್ಲಾಡಳಿತ ಕೂಡಲೇ ಇತ್ತ ಗಮನ ಹರಿಸಿ ಟೆಂಡರ್‌ ಪ್ರಕ್ರಿಯೆ ಮುಗಿಸಬೇಕು. ಜತೆಗೆ ರಸ್ತೆ ಅಭಿವೃದ್ಧಿಪಡಿಸಿ ಗ್ರಾಮಸ್ಥರಿಗೆ ಅನುಕೂಲ ಕಲ್ಪಿಸಬೇಕೆಂಬುದು ಗ್ರಾಮಸ್ಥರ ಆಗ್ರಹವಾಗಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.