ಹೊಸ ನಿಯಮ: ಉದ್ದಿಮೆದಾರರಿಗೆ ಸಂಕಷ್ಟ

ಉದ್ದಿಮೆ ಪರವಾನಿಗೆ ನವೀಕರಣ

Team Udayavani, May 23, 2019, 12:23 PM IST

Udayavani Kannada Newspaper

ಮಹಾನಗರ: ಮಹಾನಗರ ಪಾಲಿಕೆಯು ಉದ್ದಿಮೆ ಪರವಾನಿಗೆ ನವೀಕರಣ ಕುರಿತಂತೆ ಹೊಸ ನಿಯಮ ರೂಪಿಸಿದ್ದು, ಇದರಿಂದಾಗಿ ಈಗ ನಗರದ ಬಹುತೇಕ ಉದ್ದಿಮೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಈ ಹಿಂದೆ ಉದ್ದಿಮೆ ಪರವಾನಿಗೆ ಯನ್ನು ನವೀಕರಿಸಲು, ವ್ಯಾಪಾರಸ್ಥರು ಮನಪಾದ ಆರೋಗ್ಯ ವಿಭಾಗಕ್ಕೆ ಫೆಬ್ರವರಿ ತಿಂಗಳ ಅಂತ್ಯದಲ್ಲಿ ಅರ್ಜಿ ಸಲ್ಲಿಸಬೇಕು. ಆ ಬಳಿಕದ ಎಲ್ಲ ಪ್ರಕ್ರಿಯೆಗಳು ಮುಗಿದು 8-10 ದಿನಗಳ ಒಳಗಾಗಿ ಉದ್ದಿಮೆದಾರರ ಕೈಗೆ ಪರವಾನಿಗೆ ದೊರೆಯುತ್ತಿತ್ತು. ಆದರೆ ಈಗ ಪಾಲಿಕೆ ತಂದಿರುವ ಬದಲಾವಣೆಯಿಂದ ಅರ್ಜಿ ಸಲ್ಲಿಸಿ ಮೂರು ತಿಂಗಳುಗಳು ಕಳೆದರೂ ಪರವಾನಿಗೆ ನವೀಕರಣವಾಗದೆ ಸಮಸ್ಯೆಗೆ ಸಿಲುಕಿದ್ದಾರೆ.

ಹೊಸ ನಿಯಮದ ಕಿರಿಕಿರಿ
ಹೊಸ ನಿಯಮಕ್ಕೂ ಮೊದಲು ಉದ್ದಿಮೆ ಪರವಾನಿಗೆ ನವೀಕರಣ ಮಾಡಲು ಉದ್ದಿಮೆದಾರರು ಅರ್ಜಿ ತುಂಬಿ ಆರೋಗ್ಯ ಇಲಾಖೆಗೆ ಸಲ್ಲಿಸ ಬೇಕಿತ್ತು. ಹಳೆಯ ಪರವಾನಿಗೆ ನೀಡಿ ದರೆ ಅಧಿಕಾರಿಗಳು ಅದಕ್ಕೆ ಚಲನ್‌ ನೀಡುತ್ತಿದ್ದರು.

ಉಳಿದಂತೆ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡು ಸುಮಾರು 10 ದಿನಗಳೊಳಗಾಗಿ ಉದ್ದಿಮೆ ಪರವಾನಿಗೆ ಉದ್ದಿಮೆದಾರರ ಕೈ ಸೇರುತ್ತಿತ್ತು. ಆದರೆ ಈ ಬಾರಿ ನವೀಕರಣಕ್ಕೆ ಕಟ್ಟಡದ ಖಾತಾ, ತೆರಿಗೆ ರಶೀದಿ ನೀಡಬೇಕು ಎಂಬ ಶರತ್ತು ಹಾಕಲಾಗಿತ್ತು. ಆದರೆ ಖಾತಾ ನೀಡಲು ಸಾಧ್ಯವಾಗದ ಕಾರಣ ಆ ಶರತ್ತನ್ನು ಬಿಟ್ಟುಬಿಡಲಾಯಿತು. ಆ ಬಳಿಕ ಅರ್ಜಿ ಸಲ್ಲಿಸಿದ ಉದ್ದಿಮೆಯ ಬಗ್ಗೆ ಪಾಲಿಕೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ ಬಳಿಕವೇ ಚಲನ್‌ ನೀಡುವುದು ಎಂದು ನಿರ್ಧರಿಸಲಾಯಿತು. ಆದರೆ ಆರೋಗ್ಯ ವಿಭಾಗದಲ್ಲಿ ಇರುವುದೇ ಆರು ಮಂದಿ ಸಿಬಂದಿ. ಮಂಗಳೂರಿನ 35 ಸಾವಿರಕ್ಕೂ ಅಧಿಕ ಉದ್ದಿಮೆ ಪರವಾನಿಗೆ ನವೀಕರಣಕ್ಕೆ ಅರ್ಜಿ ಸಲ್ಲಿಸಿದರೆ ಇರುವ ಆರು ಮಂದಿ ಎಲ್ಲಿಗೆ ಹೋಗಿ ಪರಿಶೀಲನೆ ನಡೆಸುತ್ತಾರೆ. ಇದರಿಂದ ತಡವಾಗುತ್ತಿದೆ. ಪಾಲಿಕೆಯ ಈ ನಿಯಮ ಈಗ ಉದ್ದಿಮೆದಾರರಿಗೆ ಕಿರಿಕಿರಿ ಉಂಟು ಮಾಡುತ್ತಿದೆ.

6 ಸಿಬಂದಿ ಮಾತ್ರ !
ಉದ್ದಿಮೆದಾರರು ದಾಖಲೆಯಲ್ಲಿ ತಪ್ಪು ಮಾಹಿತಿ ನೀಡುತ್ತಾರೆ ಎಂಬ ಕಾರಣಕ್ಕಾಗಿ ಹೊಸ ನಿರ್ಧಾರ ಮಾಡಲಾಗಿದೆ. ಆದರೆ ಆರೋಗ್ಯ ಇಲಾಖೆಯಲ್ಲಿರುವ ಆರು ಮಂದಿ ಸಿಬಂದಿ ಸುಮಾರು 35 ಸಾವಿರಕ್ಕೂ ಅಧಿಕ ಉದ್ದಿಮೆದಾರರ ಸ್ಥಳ ಪರಿಶೀಲನೆ ಮಾಡಿ, ದಾಖಲೆ ನೀಡುವುದು ಯಾವಾಗ ಎಂಬುದೇ ಪ್ರಶ್ನೆ. ಪಾಲಿಕೆಯ ಈ ಅವ್ಯವಸ್ಥೆಯಿಂದಾಗಿ ನಗರ ವ್ಯಾಪ್ತಿಯ ಉದ್ದಿಮೆದಾರರು ಪಾಲಿಕೆಗೆ ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ. ಇವರಲ್ಲಿ ಕೆಲವರಿಗೆ ಪರವಾನಿಗೆ ತಡವಾಗಿ ಕೈ ಸೇರಿದ್ದು, ಇನ್ನೂ ಸುಮಾರು 15 ಸಾವಿರಕ್ಕೂ ಅಧಿಕ ಉದ್ದಿಮೆದಾರರು ಪರವಾನಿಗೆಗಾಗಿ ಅಲೆದಾಡುತ್ತಿದ್ದಾರೆ.

2 ತಿಂಗಳಾದರೂ ಪರವಾನಿಗೆ ಸಿಕ್ಕಿಲ್ಲ

ಉದ್ದಿಮೆ ಪರವಾನಿಗೆಗೆ ಮಾ. 19ರಂದು ಅರ್ಜಿ ಸಲ್ಲಿಸಿದ್ದೆ. ಚುನಾವಣೆ, ಅಧಿಕಾರಿಗಳ ಸ್ಥಳ ಪರಿಶೀಲನೆ ಎಂಬಿತ್ಯಾದಿ ಕಾರಣಗಳಿಂದ ಈವರೆಗೆ ನನಗೆ ಉದ್ದಿಮೆ ಪರವಾನಿಗೆ ಲಭಿಸಿಲ್ಲ. ಇದಕ್ಕಾಗಿ ಎಷ್ಟೋ ಬಾರಿ ಪಾಲಿಕೆಗೆ ಅಲೆದಾಡಿದ್ದೇನೆ. ಯಾರೂ ಸರಿಯಾಗಿ ಸ್ಪಂದಿಸುತ್ತಿಲ್ಲ.
ಪ್ರಶಾಂತ್‌, ಉದ್ದಿಮೆದಾರ

ಸಮಸ್ಯೆ ನಿವಾರಿಸಲು ಹೊಸ ಕ್ರಮ
ಉದ್ದಿಮೆ ಪರವಾನಿಗೆ ನೀಡುವ ವೇಳೆ ಈ ಹಿಂದೆ ಎದುರಾಗಿದ್ದ ಕೆಲವು ಸಮಸ್ಯೆ ನಿವಾರಿಸಲು ಹೊಸ ಕ್ರಮ ಕೈಗೊಳ್ಳಲಾಗಿದೆ. ಕೆಲವರು ಪರವಾನಿಗೆ ನೀಡುವ ವೇಳೆ ತಪ್ಪು ಮಾಹಿತಿ ನೀಡುತ್ತಿದ್ದರು. ಪಾರದರ್ಶಕ ನಿಯಮ ತರಲು ಈ ರೀತಿ ಮಾಡಲಾಗಿದೆ.
– ನಾರಾಯಣಪ್ಪ,
ಪ್ರಭಾರ ಆಯುಕ್ತರು, ಮನಪಾ

ವಿಶೇಷ ವರದಿ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.