ನೀರಿನ ಸಮಸ್ಯೆ ಬಗೆಹರಿಸಲು ಮುಂದಾದ ಅಧಿಕಾರಿಗಳು


Team Udayavani, May 2, 2019, 12:21 PM IST

2-MAY-14

ಔರಾದ: ಬಾವಿಯಲ್ಲಿ ತುಂಬಿದ ಹೂಳು.

ಔರಾದ: ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಹಾಗೂ ಸಿಬ್ಬಂದಿ ಪ್ರತಿಯೊಂದು ವಾರ್ಡ್‌ಗಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆ ಬಗೆಹರಿಸಲು ಮುಂದಾಗಿದ್ದಾರೆ.ಅಲ್ಲದೆ ಬಡಾವಣೆಯಲ್ಲಿರುವ ಜಲಮೂಲ ಅರಿತುಕೊಂಡು ಬಾವಿಯಲ್ಲಿನ ಹೂಳೆತ್ತುವ ಕೆಲಸಕ್ಕೂ ಚಾಲನೆ ನೀಡಿದ್ದಾರೆ.

ಪಟ್ಟಣದಲ್ಲಿನ ನೀರಿನ ಸಮಸ್ಯೆ ಬಗ್ಗೆ ಉದಯವಾಣಿ ಪತ್ರಿಕೆಯಲ್ಲಿ ಕಳೆದೊಂದು ವಾರದಿಂದ ನಿರಂತರವಾಗಿ ಪ್ರಕಟವಾದ ವರದಿಯಿಂದ ಎಚ್ಚೆತ್ತ ಪಟ್ಟಣ ಪಂಚಾಯತ ಅಧಿಕಾರಿಗಳು ಹಾಗೂ ತಾಲೂಕು ದಂಡಾಧಿಕಾರಿಗಳು ವಿವಿಧ ಬಡಾವಣೆಗೆ ಭೇಟಿ ನೀಡಿ ಸಮಸ್ಯೆ ಆಲಿಸಿದರು.

ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ವಿಠ್ಠಲ ಹಾದಿಮನಿ ನೇತೃತ್ವದಲ್ಲಿ ಧನರಾಜ ಕುಡ್ಲೆ ಸೇರಿದಂತೆ ಇನ್ನಿತರರು ಪಟ್ಟಣದಲ್ಲಿರುವ ಜಲಮೂಲ ವೀಕ್ಷಿಸಿದರು. ಹಲವು ವರ್ಷಗಳ ಹಿಂದೆ ನಿರ್ಮಿಸಲಾದ ಕೆಲ ಬಾವಿಗಳಲ್ಲಿ ನೀರು ಇದೆ. ಆದರೆ ಅದರಲ್ಲಿ ಕಸ ತುಂಬಿದ್ದರಿಂದ ಸಾರ್ವಜನಿಕ ಉಪಯೋಗಕ್ಕೆ ಬರುತ್ತಿಲ್ಲ ಎಂದು ಸಾರ್ವಜನಿಕರು ಅಧಿಕಾರಿಗಳಿಗೆ ವಿವರಿಸಿದರು.

ಪಟ್ಟಣದ ಇಂದಿರಾ ಕಾನ್ವೆಂಟ್ ಶಾಲೆ ಪಕ್ಕದಲ್ಲಿನ ಬಾವಿಯಲ್ಲಿ ಬಿದ್ದ ಕಸ ನೋಡಿ ಪಪಂ ಮುಖ್ಯಾಧಿಕಾರಿ ಸಿಬ್ಬಂದಿ ವಿರುದ್ಧ ಗರಂ ಆಗಿದ್ದರು. ಬಾವಿಯಲ್ಲಿರುವ ಕಸವನ್ನು ತಕ್ಷಣವೇ ತೆಗೆದು ಸಾರ್ವಜನಿಕರು ನೀರು ಬಳಸಲು ಬರುವಂತೆ ಮಾಡಲು ಮುಂದಾಗಬೇಕು. ಇಲ್ಲವಾದಲ್ಲಿ ಸಬಂಧಿಸಿದ ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ತೆರೆದ ಬಾವಿಯಿಂದ ಸಾರ್ವಜನಿಕರು ನಿತ್ಯ ತಮ್ಮ ಮನೆಗೆ ನೀರು ತೆಗೆದುಕೊಂಡು ಹೋಗುತ್ತಾರೆ. ಬಾವಿಯಲ್ಲಿ ಕಸದ ರಾಶಿಯೇ ತುಂಬಿದೆ. ಕಚೇರಿ ಸಿಬ್ಬಂದಿ ಪಟ್ಟಣದಲ್ಲಿ ತೆರೆದ ಬಾವಿ ಹಾಗೂ ಜಲಮೂಲಗಳ ಸುತ್ತಮುತ್ತಲು ಸ್ವಚ್ಛ ತೆ ಕಾಪಾಡಿಕೊಳ್ಳಲು ಮುಂದಾಗಬೇಕು. ಅಲ್ಲದೇ ಸಾರ್ವಜನಿಕರಿಗೂ ಸ್ವಚ್ಛತೆ ಬಗ್ಗೆ ತಿಳಿಹೇಳಬೇಕು ಎಂದು ಸೂಚಿಸಿದರು.

ಪಟ್ಟಣದ ನಿವಾಸಿಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.

ಪ್ರತಿಯೊಂದು ಬಡಾವಣೆ ನಿವಾಸಿಗಳು ಸಮಾಧಾನದಿಂದ ಟ್ಯಾಂಕರ್‌ ನೀರು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಟ್ಯಾಂಕರ್‌ ನೀರು ಪೂರೈಸುವಾಗ ಬಡಾವಣೆ ನಿವಾಸಿಗಳೊಂದಿಗೆ ಕಚೇರಿ ಸಿಬ್ಬಂದಿ ಸಹ ಸಹಕಾರ ನೀಡಲು ಮುಂದಾಗುವಂತೆ ಸೂಚಿಸಿದರು.

ಪಟ್ಟಣದ ಹಳೆ ಬಾವಿಯಲ್ಲಿ ನೀರಿದೆ. ಅವುಗಳನ್ನು ಸದುಪಯೋಗ ಮಾಡಿಕೊಳ್ಳುವ ಬಗ್ಗೆ ತಹಶೀಲ್ದಾರರೊಂದಿಗೆ ಮಾತನಾಡಿ ನೀರಿನ ಸಮಸ್ಯೆಯಿಂದ ಮುಕ್ತಿ ನೀಡಲಾಗುತ್ತದೆ ಎಂದು ಪಪಂ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.