ಗಾಂಜಾ ದಂಧೆಗೆ ಪೊಲೀಸರ ಕಿಕ್‌


Team Udayavani, May 6, 2019, 10:55 AM IST

Udayavani Kannada Newspaper

ಔರಾದ: ಗಡಿ ತಾಲೂಕಿನ ಇತಿಹಾದಲ್ಲಿಯೇ ಪ್ರಥಮ ಬಾರಿಗೆ ದಾಖಲೆ ಪ್ರಮಾಣದಲ್ಲಿ ಪೊಲೀಸರು ಗಾಂಜಾ ವಶಪಡಿಸಿಕೊಳ್ಳುವ ಮೂಲಕ ಅಕ್ರಮ ವ್ಯಾಪಾರ ಮಾಡುವರಿಗೆ ನಡುಕ ಶುರುವಾಗುವಂತೆ ಮಾಡಿದ್ದಾರೆ.

ಬೀದರ ಜಿಲ್ಲೆ ಔರಾದ ತಾಲೂಕು ಜಂಬಗಿ ಗ್ರಾಪಂ ವ್ಯಾಪ್ತಿಯ ಘಾಮಾ ತಾಂಡಾದ ನಿವಾಸಿ ಗೋಪಾಲ ಎನ್ನುವರ ಜಾನುವಾರುಗಳ ಕಟ್ಟುವ ಸ್ಥಳದಲ್ಲಿ 6.5 ಕ್ವಿಂಟಲ್ ಗಾಂಜಾ ಪತ್ತೆಯಾಗಿರುವುದು ಚರ್ಚೆಗೆ ಕಾರಣವಾಗಿದೆ. 1995ಕ್ಕಿಂತ ಮೊದಲು ಜಂಬಗಿ ಗ್ರಾಪಂ ವ್ಯಾಪ್ತಿಯ ಕೆಲವು ಗ್ರಾಮ ಹಾಗೂ ತಾಂಡಾದ ಹೊಲದಲ್ಲಿ ಗಾಂಜಾ ಬೆಳೆಸಿ ಮಾರಾಟ ಮಾಡಲಾಗುತ್ತಿತ್ತು ಸಂಗತಿ ಈ ಗಬಯಲಿಗೆ ಬಂದಿದೆ. ಆದರೆ ಪೊಲೀಸರು ಪದೇ ಪದೇ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಗಾಂಜಾ ಮಾರಾಟ ಮಾಡುವ ವ್ಯಕ್ತಿಗಳ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗಿದೆ.

ಗೋಪಾಲ ಎಂಬ ವ್ಯಕ್ತಿ ಈ ಹಿಂದೆ ಮೂರು ಬಾರಿ ಗಾಂಜಾ ಮಾರಾಟದ ಪ್ರಕಣದಲ್ಲಿ ಸಿಕ್ಕಿಕೊಂಡಿದ್ದಾನೆ. ಸಂತಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಡಿವೈಎಸ್‌ಪಿ ವೆಂಕನಗೌಡ ಪಾಟೀಲ ತಿಳಿಸಿದ್ದಾರೆ.

ಬೇರೆ ಕಡೆಯಿಂದ ತಂದ ಗಾಂಜಾ: ಪೊಲೀಸರ ಮಾಹಿತಿ ಪ್ರಕಾರ ಶನಿವಾರ ಗೋಪಾಲ ಎಂಬಾತನ ಹೊಲದಲ್ಲಿ ವಶಪಡಿಸಿಕೊಂಡ ಗಾಂಜಾ ನೆರೆ ರಾಜ್ಯಗಳಿಂದ ತಂದು ಮಹಾರಾಷ್ಟ್ರದ ಪುಣೆ, ಮುಂಬೈ ಮತ್ತು ರಾಜ್ಯದ ಬೆಂಗಳೂರು ಸೇರಿದಂತೆ ಪ್ರಮುಖ ನಗರದಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿ ಇಡಲಾಗಿತ್ತು. ಪ್ರತಿ ಕೆಜಿಗೆ 10ರಿಂದ12 ಸಾವಿರ ರೂ. ಮೌಲ್ಯದಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತದೆ. ವಿಶೇಷವಾಗಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಮಧ್ಯಮ ವರ್ಗದ ಜನರು ಇದನ್ನು ಸೇವಿಸುತ್ತಾರೆ. ಕಡಿಮೆ ಹಣದಲ್ಲಿ ಹೆಚ್ಚಿನ ನಶೆ ಮತ್ತು ಒಂದು ದಿನದ ಮಟ್ಟಿಗೆ ಮತ್ತೇರಿಸುವ ಶಕ್ತಿ ಗಾಂಜಾಕ್ಕೆ ಇದೆ. ಹಿಗಾಗಿಯೇ ಇದನ್ನು ಕಾಲೇಜು ವಿದ್ಯಾರ್ಥಿಗಳು ಮತ್ತು ಸಾಮಾನ್ಯ ಜನರು ಹೆಚ್ಚಾಗಿ ಬಳಸುತ್ತಾರೆ. ಕಾಲೇಜು ಕ್ಯಾಂಪಸ್‌ನಲ್ಲಿ 400 ರೂ.ಗೆ 50 ಗ್ರಾಂನಂತೆ ನೀಡುವ ಬಗ್ಗೆ ಇಲಾಖೆಯಲ್ಲಿ ಪ್ರಕರಣಗಳು ದಾಖಲಾಗಿವೆ ಎನ್ನುತ್ತಾರೆ ಎಸ್‌ಪಿ ಟಿ. ಶ್ರೀಧರ.

ಜಾನುವಾರುಗಳ ದೊಡ್ಡಿಯೇ ಗಾಂಜಾ ಕೇಂದ್ರ: ಹೈನುಗಾರಿಕೆ ಉದ್ಯೋಗ ಮಾಡುವ ಉದ್ದೇಶದಿಂದ ಜಾನುವಾರುಗಳ ದೊಡ್ಡಿ ನಿರ್ಮಿಸಲಾಗಿತ್ತು. ಅಲ್ಲಿಯೇ ಗಾಂಜಾ ಸಂಗ್ರಹಿಸಲಾಗುತ್ತಿತ್ತು. ಅಲ್ಲಿಂದಲೇ ವಹಿವಾಟು ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.

ರವೀಂದ್ರ ಮುಕ್ತೇದಾರ

ಟಾಪ್ ನ್ಯೂಸ್

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Katpadi: ತ್ಯಾಜ್ಯ ಗುಂಡಿಯಾಗುತ್ತಿದೆ ಕುರ್ಕಾಲು ಮದಗ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

9

Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Katpadi: ತ್ಯಾಜ್ಯ ಗುಂಡಿಯಾಗುತ್ತಿದೆ ಕುರ್ಕಾಲು ಮದಗ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.