ಮಕ್ಕಳ ಕೈಯಲ್ಲಿ ಅರಳಿದ ಮಣ್ಣಿನ ಗಣಪ

ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿ ತಯಾರಿ ಕಾರ್ಯಾಗಾರ •ಶಾಲಾ ಮಕ್ಕಳು ಭಾಗಿ

Team Udayavani, Aug 26, 2019, 11:33 AM IST

26-Agust-11

ರಾಯಚೂರು: ಮನ್ಸಲಾಪುರ ರಸ್ತೆಯಲ್ಲಿನ ಲಕ್ಷ್ಮೀ ವೆಂಕಟೇಶ್ವರ ಮಿಲ್ನಲ್ಲಿ ನಡೆದ ಕಾರ್ಯಾಗಾರದಲ್ಲಿ ಮಕ್ಕಳು ತಯಾರಿಸಿದ ಮಣ್ಣಿನ ಗಣೇಶ ಮೂರ್ತಿಗಳು.

ರಾಯಚೂರು: ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಿಸುವ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಕ್ಕಳು ಮಣ್ಣಿನಲ್ಲಿ ಚಿಕ್ಕ ಚಿಕ್ಕ ಗಣೇಶ ಮೂರ್ತಿಗಳನ್ನು ತಯಾರಿಸಿ ಗಮನ ಸೆಳೆದರು.

ಗ್ರೀನ್‌ ರಾಯಚೂರು, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ನ‌ವೋದಯ ಶಿಕ್ಷಣ ಸಂಸ್ಥೆಗಳ ಸಮೂಹ, ಜಿಲ್ಲಾ ಪೊಲೀಸ್‌ ಇಲಾಖೆ ಹಾಗೂ ನಗರಸಭೆ ಸಹಯೋಗಲ್ಲಿ ರವಿವಾರ ನಗರದ ಮನ್ಸಲಾಪುರ ರಸ್ತೆಯಲ್ಲಿನ ಕೊಂಡ ಕೃಷ್ಣಮೂರ್ತಿ ಅವರ ಮಿಲ್ನಲ್ಲಿ ಉಚಿತ ಮಣ್ಣಿನ ಗಣೇಶ ತಯಾರಿಸುವ ಕಾರ್ಯಾಗಾರ ಆಯೋಜಿಸಲಾಗಿತ್ತು. ಸಾರ್ವಜನಿಕರು ತಮ್ಮ ಮಕ್ಕಳನ್ನು ಕರೆ ತಂದರೆ, ವಿವಿಧ ಶಾಲೆಯ ಮಕ್ಕಳು ಕೂಡ ಪಾಲ್ಗೊಂಡು ಗಣೇಶ ಮೂರ್ತಿಗಳನ್ನು ತಯಾರಿಸಿ ಸಂಭ್ರಮಿಸಿದರು.

ಈ ವೇಳೆ ಸಾಂಕೇತಿಕವಾಗಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ನಟೇಶ ಮಾತನಾಡಿ, ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ನಿಂದ ಗಣೇಶ ಮೂರ್ತಿಗಳನ್ನು ತಯಾರಿಸುವುದು ಪರಿಸರಕ್ಕೆ ಹಾನಿಕಾರಕ. ಈಚೆಗೆ ಮುಂಬಯಿನಲ್ಲಿ ಸಂಭವಿಸಿದ ಪ್ರವಾಹದಲ್ಲಿ ಸಮುದ್ರದಿಂದ ತ್ಯಾಜ್ಯವೆಲ್ಲ ದಂಡೆಗೆ ಬಂದು ಬಿದ್ದಿದೆ. ಅಂದರೆ ನಾವು ಪರಿಸರಕ್ಕೇ ಏನೇ ತ್ಯಾಜ್ಯ ನೀಡಿದರೂ ಅದು ಮರಳಿ ನಮಗೇ ನೀಡುತ್ತದೆ. ಹೀಗಾಗಿ ಪರಿಸರ ಹಾನಿ ತಡೆಗಟ್ಟುವ ಮಹತ್ತರ ಹೊಣೆ ನಮ್ಮ ಮೇಲಿದೆ ಎಂದರು.

ಪಿಒಪಿ ಗಣೇಶಗಳಿಂದ ಪರಿಸರಕ್ಕೆ ಹಾನಿ ಎಂಬುದನ್ನು ಅರಿತು ಸುಪ್ರೀಂ ಕೋರ್ಟ್‌ ನಿಷೇಧಿಸಿದೆ. ಆದರೂ ಇಂದಿಗೂ ಅದು ಎಲ್ಲೆಡೆ ಜಾರಿಯಾಗುತ್ತಿದೆ. ಇನ್ನು ಮುಂದಾದರೂ ನಾವು ಪರಿಸರ ಸ್ನೇಹಿಯಾದ ಗಣೇಶ ಮೂರ್ತಿಗಳ ತಯಾರಿಕೆಗೆ ಒತ್ತು ನೀಡಬೇಕು. ಈ ವಿಚಾರದಲ್ಲಿ ಇಲ್ಲಿ ಹಮ್ಮಿಕೊಂಡ ಕಾರ್ಯಕ್ರಮ ಸ್ವಾಗತಾರ್ಹ ಎಂದರು.

ತರಬೇತುದಾರ ಸೂಗಣ್ಣ ಮೂರ್ತಿಗಳ ತಯಾರಿಕೆ ಬಗ್ಗೆ ಪ್ರಾತ್ಯಕ್ಷಿಕೆ ನೀಡಿ, ಇದು ವಿಶೇಷವಾದ ಮಣ್ಣಾಗಿದೆ. ಇದರಿಂದ ಗಣೇಶ, ಗೌರಿ, ಎತ್ತುಗಳನ್ನು ಮಾಡಿ ಪೂಜೆ ಮಾಡುತ್ತಾರೆ ಎಂದು ವಿವರಿಸಿದರು.

ಗ್ರೀನ್‌ ರಾಯಚೂರು ಉಪಾಧ್ಯಕ್ಷ ಸಿ.ವಿ.ಪಾಟೀಲ, ಡಾ| ಅಮರಖೇಡ, ಕೋಟೇಶ್ವರಾವ್‌, ಉದಯಕಿರಣ, ಸಂಗಮೇಶ ಪಾಟೀಲ, ಸರಸ್ವತಿ ಕಿಲಕಿಲೆ ಸೇರಿ ಇತರರಿದ್ದರು.

ಕಳೆದ ಎರಡು ವರ್ಷಗಳಿಂದ ಈ ಕಾರ್ಯಾಗಾರ ನಡೆಸಲಾಗುತ್ತಿದೆ. ಈಗಾಗಲೇ ಸಾಕಷ್ಟು ಹಾನಿಯಾಗಿದ್ದು, ಇನ್ನೂ ವಿಳಂಬ ಮಾಡಿದರೆ ಪರಿಸರ ಸಂಪೂರ್ಣ ನಾಶವಾಗಲಿದೆ. ನಮ್ಮ ಸಂಸ್ಥೆ ವಿವಿಧ ಚಟುವಟಿಕೆಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿದ್ದು, ಸಾರ್ವಜನಿಕರ ಸಹಕಾರ ಕೂಡ ಅಗತ್ಯ.
ಕೊಂಡಾ ಕೃಷ್ಣಮೂರ್ತಿ,
ಗ್ರೀನ್‌ ರಾಯಚೂರು ಸಂಸ್ಥೆ ಅಧ್ಯಕ್ಷ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.