ರಾಯರ ಮಠದ ಮುಖ್ಯದ್ವಾರಕ್ಕೆ200 ಕೆಜಿ ರಜತ ಹೊದಿಕ


Team Udayavani, Aug 17, 2018, 10:59 AM IST

ray-1.jpg

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನೆಗೆ ಪ್ರತಿ ವರ್ಷ ಒಂದಲ್ಲ ಒಂದು ವಿಶೇಷತೆ ಇದ್ದೇ ಇರುತ್ತದೆ. ಈ ಬಾರಿಯೂ ರಾಯರ ಮಠದ ಮುಖ್ಯದ್ವಾರಕ್ಕೆ ಅಂದಾಜು ಒಂದು ಕೋಟಿ ರೂ. ವೆಚ್ಚದಲ್ಲಿ ರಜತದ ಹೊದಿಕೆ ನಿರ್ಮಿಸಲಾಗುತ್ತಿದೆ.

ರಾಜ್ಯದ ಉದ್ಯಮಿಯೊಬ್ಬರು ದೇಣಿಗೆ ನೀಡಿದ್ದು, ಸುಮಾರು 200 ಕೆಜಿ ತೂಕದ ಬೆಳ್ಳಿಯ ಹೊದಿಕೆ ಇದಾಗಿದೆ. ಕಲ್ಲಿನ ಚೌಕಟ್ಟು ಹಾಗೂ ಎರಡು ದ್ವಾರ ಬಾಗಿಲುಗಳಿಗೆ ಸಂಪೂರ್ಣ ಬೆಳ್ಳಿ ಹೊದಿಕೆ ಮಾಡಲಾಗುತ್ತಿದೆ. ಕಳೆದ ಎರಡು ತಿಂಗಳಿನಿಂದಲೇ ಈ ಕಾರ್ಯ ಆರಂಭಗೊಂಡಿದ್ದು, ಬಾಗಿಲುಗಳಿಗೆ ಬೆಳ್ಳಿ ಲೇಪನ ಕಾರ್ಯ ನಡೆದಿದೆ.

ಹಿಂದಿನ ಎರಡೂಮೂರು ವರ್ಷಗಳಲ್ಲಿ ದೊಡ್ಡಮಟ್ಟದ ಕಾರ್ಯಕ್ರಮಗಳು ಹೆಚ್ಚಾಗುತ್ತಿವೆ. ಹಿಂದೆ ರಾಯರಿಗೆ ಚಿನ್ನದ
ಹರಿಯಾಣ, ಚಿನ್ನದ ಗೋಪುರ, ಬೃಂದಾವನ ಸುತ್ತಲೂ ಶಿಲಾಮಂಟಪ, ರತ್ನಖಚಿತ ಹಾರ ಸೇರಿ ವಿವಿಧ ರೀತಿಯ ಸೇವೆಗಳನ್ನು ಭಕ್ತರು ಸಲ್ಲಿಸುತ್ತಿದ್ದಾರೆ. ಈ ಬಾರಿಯೂ ಭಕ್ತರೊಬ್ಬರು ಇಂಥ ಕಾರ್ಯಕ್ಕೆ ಮುಂದಾಗಿದ್ದಾರೆ.

ಹೀಗಿರಲಿದೆ ಹೊದಿಕೆ: ರಾಯರ ಮಠ ಪ್ರವೇಶಿಸುತ್ತಿದ್ದಂತೆ ದೊಡ್ಡ ದ್ವಾರ ಬಾಗಿಲಿದೆ. ಎರಡು ಕಲ್ಲಿನ ಬೃಹತ್‌ ಚೌಕಟ್ಟು, ಅದಕ್ಕೆ ಎರಡು ಬೃಹದಾಕಾರದ ಬಾಗಿಲುಗಳಿವೆ. ಅವುಗಳಿಗೆ ಸಂಪೂರ್ಣ ಬೆಳ್ಳಿ ಹೊದಿಕೆ ಮಾಡಲಾಗುತ್ತಿದೆ. ಎರಡು ಬಾಗಿಲುಗಳಿಗೆ ವಿಷ್ಣುವಿನ ದಶಾವತಾರದ ಚಿತ್ರಗಳನ್ನು ಕೆತ್ತಲಾಗುತ್ತಿದೆ. ಉಳಿದಂತೆ ಹೂ, ಬಳ್ಳಿ, ಸುಂದರ ಕಲಾಕೃತಿಗಳನ್ನು ಕೆತ್ತಲಾಗುತ್ತಿದೆ.

ಹಗಲಿರುಳು ಕೆಲಸ: ಈ ಕಾರ್ಯವನ್ನು ಬೆಂಗಳೂರು ಮೂಲದ ಗುರುದತ್‌ ಹ್ಯಾಂಡ್‌ಕ್ರಾಫ್ಟ್‌ ಸಂಸ್ಥೆಗೆ ವಹಿಸಲಾಗಿದೆ. ಒಂಭತ್ತು ಜನ ಕಲಾವಿದರು ಸತತ ಎರಡು ತಿಂಗಳಿನಿಂದ ಈ ಕಾರ್ಯ ಮಾಡುತ್ತಿದ್ದಾರೆ. ಶ್ರೀಮಠದಲ್ಲೇ ಬೀಡು ಬಿಟ್ಟಿರುವ ಅವರು, ಹಗಲಿರುಳು ಶ್ರಮಿಸುತ್ತಿದ್ದಾರೆ. ಬಹುತೇಕ ಅಂತಿಮ ಸ್ಪರ್ಶ ನೀಡುತ್ತಿದ್ದು, ಈ ಆರಾಧನೆಗೆ ಮುಕ್ತಗೊಳಿಸುವ ಸಾಧ್ಯತೆಗಳಿವೆ.

ರಾಯರ ಮಠದ ಮುಖ್ಯದ್ವಾರಕ್ಕೆ ಬೆಳ್ಳಿಯ ಸುಂದರ ಹೊದಿಕೆ ನಿರ್ಮಿಸಲಾಗುತ್ತಿದೆ. ಭಕ್ತರೊಬ್ಬರು ಸಂಪೂರ್ಣ ಖರ್ಚು ನೀಡಿದ್ದು, ಆರಾಧನೆ ವೇಳೆಗೆ ಲೋಕಾರ್ಪಣೆ ಮಾಡುವ ಉದ್ದೇಶವಿದೆ. ಅಂದಾಜು 200 ಕೆಜಿ ಬೆಳ್ಳಿಯಿಂದ ತಯಾರಾಗುತ್ತಿದೆ. 
 ಎಸ್‌.ಕೆ. ಶ್ರೀನಿವಾಸ, ವ್ಯವಸ್ಥಾಪಕ, ಮಂತ್ರಾಲಯ ಮಠ

„ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shrana-p

Hospital: ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆಗಾಗಿ ಕೇಂದ್ರಕ್ಕೆ ಮನವಿ: ಸಚಿವ ಡಾ. ಶರಣಪ್ರಕಾಶ

Manvi

Raichuru: ಅಪಘಾತದಲ್ಲಿ ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ: ಸಿಎಂ ಸಿದ್ದರಾಮಯ್ಯ

Manvi: ಶಾಲಾ ಬಸ್-‌ ಸರ್ಕಾರಿ ಬಸ್‌ ನಡುವೆ ಭೀಕರ ಅಪಘಾತ; ಇಬ್ಬರು ಮಕ್ಕಳು ಸಾವು

Manvi: ಶಾಲಾ ಬಸ್-‌ ಸರ್ಕಾರಿ ಬಸ್‌ ನಡುವೆ ಭೀಕರ ಅಪಘಾತ; ಇಬ್ಬರು ಮಕ್ಕಳು ಸಾವು

Muda Case: ಮುಡಾ‌ ಪ್ರಕರಣ ಅಂದುಕೊಂಡಿದ್ದಕ್ಕಿಂತ ಆಳವಾಗಿದೆ- ಸಚಿವ ವಿ.ಸೋಮಣ್ಣ

Muda Case: ಮುಡಾ‌ ಪ್ರಕರಣ ಅಂದುಕೊಂಡಿದ್ದಕ್ಕಿಂತ ಆಳವಾಗಿದೆ- ಸಚಿವ ವಿ.ಸೋಮಣ್ಣ

Raichur: ನಗರಸಭೆ ಕೈ ವಶ… ಅಧ್ಯಕ್ಷೆಯಾಗಿ ನರಸಮ್ಮ, ಉಪಾಧ್ಯಕ್ಷರಾಗಿ ಸಾಜಿದ್ ಸಮೀರ್

Election: ರಾಯಚೂರು ನಗರಸಭೆ ಕೈ ವಶ, ಅಧ್ಯಕ್ಷೆಯಾಗಿ ನರಸಮ್ಮ, ಉಪಾಧ್ಯಕ್ಷರಾಗಿ ಸಾಜಿದ್ ಸಮೀರ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.