ಶೈಕ್ಷಣಿಕ ಗೊಂದಲ ನಿವಾರಣೆಗೆ ಎಐಡಿಎಸ್ಒ ಆಗ್ರಹ
Team Udayavani, Apr 27, 2022, 3:05 PM IST
ರಾಯಚೂರು: ಹೊಸ ವಿಶ್ವವಿದ್ಯಾಲಯದಲ್ಲಿ ಉಂಟಾಗಿರುವ ಶೈಕ್ಷಣಿಕ ಗೊಂದಲವನ್ನು ಪರಿಹರಿಸಿ, ಕೂಡಲೇ ಪರೀಕ್ಷೆಗಳನ್ನು ಆರಂಭಿಸುವಂತೆ ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ (ಎಐಡಿಎಸ್ಒ) ಸದಸ್ಯರು ಶನಿವಾರ ಪ್ರತಿಭಟನೆ ನಡೆಸಿದರು.
ನಗರದ ಡಿಸಿ ಕಚೇರಿ ಎದುರು ಸಮಿತಿ ಸದಸ್ಯರು ಹೋರಾಟ ನಡೆಸಿ ಬಳಿಕ ಡಿಸಿ ಕಚೇರಿ ಅ ಕಾರಿಗೆ ಮನವಿ ಸಲ್ಲಿಸಿದರು. ಕಳೆದ 2 ವರ್ಷ ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಇಡೀ ದೇಶದ ಶಿಕ್ಷಣ ವ್ಯವಸ್ಥೆಯೇ ಬುಡಮೇಲಾಗಿದೆ. ಅಂತಹ ಸಂದರ್ಭದಲ್ಲಿ ಸರ್ಕಾರ ಹೊಸ ಕೊಠಡಿಗಳನ್ನು ನಿರ್ಮಿಸುವುದು, ಶಿಕ್ಷಕರ ಉಪನ್ಯಾಸಕರ, ಬೋಧಕೇತರ ಸಿಬ್ಬಂದಿ ನೇಮಿಸುವ ಬದಲು ಪೋಷಕರ, ಶಿಕ್ಷಣ ತಜ್ಞರ, ಶಿಕ್ಷಕರ, ವಿದ್ಯಾರ್ಥಿ ಸಂಘಟನೆಗಳ ಅಭಿಪ್ರಾಯ ಪಡೆಯದೇ ಹಾಗೂ ಯಾವುದೇ ಪೂರ್ವತಯಾರಿ ಇಲ್ಲದೆ ತರಾತುರಿಯಲ್ಲಿ ಎನ್ಇಪಿ ಅಳವಡಿಸಿರುವುದು ಇಂದಿನ ಶೈಕ್ಷಣಿಕ ಗೊಂದಲಕ್ಕೆ ಮೂಲ ಕಾರಣವಾಗಿದೆ ಎಂದರು.
ಯುಯುಸಿಎಂಎಸ್ ಹೊಸದಾಗಿ ತಂದಿರುವ ಉದ್ದೇಶವಾದರೂ ಏನು? ಶಿಕ್ಷಣ ತಜ್ಞರು ಅಭಿಪ್ರಾಯ ಪಡೆಯದೇ ಸರ್ಕಾರ ಏಕೆ ಇಂತಹ ನಿರ್ಧಾರಕ್ಕೆ ಬಂದಿದೆ. ದಿಢೀರನೇ ಯುಯುಸಿಎಂಎಸ್ ಹೇರಿಕೆಯೇ ಇಷ್ಟೆಲ್ಲ ಗೊಂದಲಕ್ಕೆ ಕಾರಣವಾಗಿದೆ. ಆದ್ದರಿಂದ ವಿಶ್ವವಿದ್ಯಾಲಯಗಳಲ್ಲಿ ಉಂಟಾದ ಶೈಕ್ಷಣಿಕ ಗೊಂದಲವನ್ನು ಈ ಕೂಡಲೇ ಪರಿಹರಿಸಿ ಪದವಿ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಮಿತಿ ಮುಖಂಡರಾದ ಹಯ್ನಾಳಪ್ಪ, ಪೀರ್ ಸಾಬ್, ಹೇಮಂತ್, ವೀರೇಶ್, ಕಾರ್ತಿಕ್, ವಿಶ್ವಾಸ, ಅಶೊಕ, ಸುಮನ್, ಉಮಾಪತಿ ಸೇರಿ ವಿದ್ಯಾರ್ಥಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Israel ಸರ್ಜಿಕಲ್ ಸ್ಟ್ರೈಕ್: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್ ಬಾಂಬ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.