ಕೊತ್ತಂಬರಿ ಹಣಕ್ಕೆ ಕನ್ನ ಹಾಕಿದವರ ಬಂಧನ
Team Udayavani, Aug 4, 2022, 8:52 PM IST
ಸಿಂಧನೂರು: ಕೊತ್ತಂಬರಿ ಹಣವನ್ನು ತರುತ್ತಿದ್ದ ವ್ಯಕ್ತಿಯನ್ನು ಬೆದರಿಸಿ ಹಣ ಕಿತ್ತುಕೊಂಡಿದ್ದ ದರೋಡೆ ಕೋರರನ್ನು ಬಂಧಿಸುವಲ್ಲಿ ಸ್ಥಳೀಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಾನ್ವಿ ತಾಲೂಕಿನ ಮದ್ಲಾಪುರ ಗ್ರಾಮದ ರವಿ ಪೂಜಾರಿ, ಚೀಕಲಪರ್ವಿ ಗ್ರಾಮದ ವೀರಕುಮಾರ ನಾಯಕ ಮತ್ತು ರಮೇಶ ಮಡಿವಾಳ ಎಂಬ ಆರೋಪಿಗಳು ಬಂಧಿತರು.
ನಗರದ ಸುಕಾಲಪೇಟೆಯ ರೈತರ ಮಾನ್ವಿಯಲ್ಲಿ ಕೊತ್ತೂಂಬರಿ ಮಾರಾಟ ಮಾಡಿ 1 ಲಕ್ಷ ರೂ.ಗಳನ್ನು ತರುತ್ತಿದ್ದ ವೇಳೆ ಆತನನ್ನು ಹಿಂಬಾಲಿಸಿ ದರೋಡೆ ಕೋರರು ಹಣ ದೋಚಿದ್ದರು. ಸುಕಾಲಪೇಟೆ ನಿವಾಸಿ ಭೀಮಣ್ಣ ಜು.29ರಂದು ಕೊತ್ತಂಬರಿ ಮಾರಾಟ ಮಾಡಿ ಹಣವನ್ನು ತರುತ್ತಿದ್ದರು. ಇದನ್ನು ಗಮನಿಸಿದ ದರೋಡೆ ಕೋರರು ಕೊತ್ತಂಬರಿ ಮಾರಾಟ ಮಾಡಿ ಹಣ ತರುತ್ತಿದ್ದ ವ್ಯಕ್ತಿಯನ್ನು ಹಿಂಬಾಲಿಸಿದ್ದರು. ಜವಳಗೇರಾದ ಬಳಿ ಆತನನ್ನು ದ್ವಿಚಕ್ರ ವಾಹನದಲ್ಲಿ ಅಡ್ಡಗಟ್ಟಿ ಹಣವನ್ನು ದೋಚಿ ಪರಾರಿಯಾಗಿದ್ದರು.
ಬಳಗಾನೂರು ಪಿಎಸ್ಐ ವೀರೇಶ ಅವರಿಗೆ ಅಗತ್ಯ ಸೂಚನೆಗಳನ್ನು ನೀಡಿ ಆರೋಪಿಗಳನ್ನು ಬಂಧಿಸುವಲ್ಲಿ ಸಿಪಿಐ ಉಮೇಶ್ ಕಾಂಬ್ಳೆ ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ
Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು
Raichur: ವಿಪಕ್ಷ ನಾಯಕರು ಹುಚ್ಚರ ರೀತಿ ಆಡುತ್ತಿದ್ದಾರೆ: ಸಚಿವ ಭೋಸರಾಜು
Raichur: ಬೆಟ್ಟದ ಪರಮೇಶ್ವರ ದೇವಸ್ಥಾನದ ಅರ್ಚಕಿ ನೇಣು ಬಿಗಿದು ಆತ್ಮಹತ್ಯೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.